Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 26 ಮೇ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಸಾಂಸಾರಿಕವಾಗಿ ಪತ್ನಿ ಮಕ್ಕಳಿಂದ ಸಂತಸ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಆದರೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಷಭ: ಆರ್ಥಿಕವಾಗಿ ನಿಧಾನವಾಗಿ ಅಭಿವೃದ್ಧಿ ತೋರಿಬರುವುದರಿಂದ ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಮುನ್ನಡೆಯುವುದು. ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಅನಿರೀಕ್ಷಿತವಾಗಿ ಕೆಲವೊಂದು ಕೆಲಸಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಸಂಗಾತಿಯ ಆಸೆ ಆಕಾಂಕ್ಷೆಗಳಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳಿಂದ ಮನೆಯಲ್ಲಿ ಸಂತಸ. ಓಡಾಟದಿಂದ ದೇಹಾಯಾಸವಾಗಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ವೈಯಕ್ತಿಕವಾಗಿ ಉತ್ತಮ ಸ್ಥಾನಮಾನ ಗಳಿಸುವಿರಿ. ಅನಿರೀಕ್ಷಿತ ಧನಾಗಮನದಿಂದ ಕಾರ್ಯಸಾಧನೆಯಾಗಲಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.

ಸಿಂಹ: ಕಚೇರಿಯಲ್ಲಿ ಸಹೋದ್ಯೋಗಿಗಳೇ ನಿಮಗೆ ಕಂಟಕವಾಗಲಿದ್ದಾರೆ. ಹಿತ ಶತ್ರುಗಳು ನಿಮ್ಮ ಏಳಿಗೆಗೆ ಕಲ್ಲು ಹಾಕುವರು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ. ವ್ಯಾಪಾರ ವ್ಯವಹಾರದಲ್ಲಿ ಲಾಭವಾಗಲಿದೆ.

 
ಕನ್ಯಾ: ಕೃಷಿ ಕ್ಷೇತ್ರದಲ್ಲಿರುವವರಿಗೆ ನೀರಿನ ತೊಂದರೆ ತಪ್ಪುವುದು. ಉತ್ತಮ ಬೆಳೆ ಪಡೆಯುವರು. ನೌಕರ ವರ್ಗದವರಿಗೆ ಬಡ್ತಿ, ಮುನ್ನಡೆ ಯೋಗ. ಅವಿವಾಹಿತರು ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ.

ತುಲಾ: ಸಂತಾನ ಹೀನ ದಂಪತಿಗೆ ಶುಭ ಫಲಗಳು ಗೋಚರಕ್ಕೆ ಬರುವುದು. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವಿನಿಯೋಗ ಮಾಡಬೇಕಾಗುತ್ತದೆ. ದೂರ ಸಂಚಾರದಿಂದ ಆರೋಗ್ಯದಲ್ಲಿ ಏರುಪೇರಾಗಬಹುದು.

ವೃಶ್ಚಿಕ: ಹಳೆಯ ಮಿತ್ರರೊಬ್ಬರ ಭೇಟಿಯಾಗುವಿರಿ. ಶುಭ ಮಂಗಲ ಕಾರ್ಯ ನೆರವೇರಿಸಲು ಚಿಂತನೆ ನಡೆಸಿದರೂ ಕೆಲವೊಂದು ಅಡ್ಡಿ ಆತಂಕಗಳು ಎದುರಾಗಬಹುದು. ಮಹಿಳೆಯರಿಂದ ಅಪವಾದದ ಭೀತಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ.

ಧನು: ಹೊಸ ವಾಹನ, ಆಸ್ತಿ, ಮನೆ ಖರೀದಿಗೆ ಇಂದು ಸಕಾಲ. ಹೊಸ ವ್ಯವಹಾರಗಳಿಂದ ಲಾಭ ಪಡೆಯುವಿರಿ. ಆದರೆ ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಾಗುವುದು. ದೂರ ಪ್ರಯಾಣ ಮಾಡಬೇಕಾಗಬಹುದು.

ಮಕರ: ವೃತ್ತಿರಂಗದಲ್ಲಿ ದೃಢತೆಯಿರಲಿ. ಚಂಚಲ ಮನೋಭಾವದಿಂದ ಉದ್ಯೋಗ ಬದಲಾವಣೆಗೆ ಆತುರದ ನಿರ್ಧಾರ ಕೈಗೊಳ್ಳಬೇಡಿ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ದಿನದಂತ್ಯಕ್ಕೆ ಶುಭ ಫಲ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಲದೇವರ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ. ಸಂಗಾತಿಯಿಂದ ಮನಸ್ಸಿಗೆ ಬೇಸರವಾಗುವುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು. ನಿರುದ್ಯೋಗಿಗಳಿಗೆ ತಾತ್ಕಾಲಿ’ಕ ಉದ್ಯೋಗ ಸಿಗಲಿದೆ.

ಮೀನ: ಎಷ್ಟೇ ಕಷ್ಟಗಳು ಬಂದರೂ ತಾಳ್ಮೆಯಿಂದ ಮುನ್ನಡೆದರೆ ಮುಂದೆ ಶುಭ ಫಲಗಳಿವೆ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಉದ್ಯೋಗಿಗಳಿಗೆ ಅನುಕೂಲಕರ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಮುಂದಿನ ಸುದ್ದಿ
Show comments