Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 26 ಮೇ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಸಾಂಸಾರಿಕವಾಗಿ ಪತ್ನಿ ಮಕ್ಕಳಿಂದ ಸಂತಸ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಆದರೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಷಭ: ಆರ್ಥಿಕವಾಗಿ ನಿಧಾನವಾಗಿ ಅಭಿವೃದ್ಧಿ ತೋರಿಬರುವುದರಿಂದ ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಮುನ್ನಡೆಯುವುದು. ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಅನಿರೀಕ್ಷಿತವಾಗಿ ಕೆಲವೊಂದು ಕೆಲಸಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಸಂಗಾತಿಯ ಆಸೆ ಆಕಾಂಕ್ಷೆಗಳಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳಿಂದ ಮನೆಯಲ್ಲಿ ಸಂತಸ. ಓಡಾಟದಿಂದ ದೇಹಾಯಾಸವಾಗಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ವೈಯಕ್ತಿಕವಾಗಿ ಉತ್ತಮ ಸ್ಥಾನಮಾನ ಗಳಿಸುವಿರಿ. ಅನಿರೀಕ್ಷಿತ ಧನಾಗಮನದಿಂದ ಕಾರ್ಯಸಾಧನೆಯಾಗಲಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.

ಸಿಂಹ: ಕಚೇರಿಯಲ್ಲಿ ಸಹೋದ್ಯೋಗಿಗಳೇ ನಿಮಗೆ ಕಂಟಕವಾಗಲಿದ್ದಾರೆ. ಹಿತ ಶತ್ರುಗಳು ನಿಮ್ಮ ಏಳಿಗೆಗೆ ಕಲ್ಲು ಹಾಕುವರು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ. ವ್ಯಾಪಾರ ವ್ಯವಹಾರದಲ್ಲಿ ಲಾಭವಾಗಲಿದೆ.

 
ಕನ್ಯಾ: ಕೃಷಿ ಕ್ಷೇತ್ರದಲ್ಲಿರುವವರಿಗೆ ನೀರಿನ ತೊಂದರೆ ತಪ್ಪುವುದು. ಉತ್ತಮ ಬೆಳೆ ಪಡೆಯುವರು. ನೌಕರ ವರ್ಗದವರಿಗೆ ಬಡ್ತಿ, ಮುನ್ನಡೆ ಯೋಗ. ಅವಿವಾಹಿತರು ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ.

ತುಲಾ: ಸಂತಾನ ಹೀನ ದಂಪತಿಗೆ ಶುಭ ಫಲಗಳು ಗೋಚರಕ್ಕೆ ಬರುವುದು. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವಿನಿಯೋಗ ಮಾಡಬೇಕಾಗುತ್ತದೆ. ದೂರ ಸಂಚಾರದಿಂದ ಆರೋಗ್ಯದಲ್ಲಿ ಏರುಪೇರಾಗಬಹುದು.

ವೃಶ್ಚಿಕ: ಹಳೆಯ ಮಿತ್ರರೊಬ್ಬರ ಭೇಟಿಯಾಗುವಿರಿ. ಶುಭ ಮಂಗಲ ಕಾರ್ಯ ನೆರವೇರಿಸಲು ಚಿಂತನೆ ನಡೆಸಿದರೂ ಕೆಲವೊಂದು ಅಡ್ಡಿ ಆತಂಕಗಳು ಎದುರಾಗಬಹುದು. ಮಹಿಳೆಯರಿಂದ ಅಪವಾದದ ಭೀತಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ.

ಧನು: ಹೊಸ ವಾಹನ, ಆಸ್ತಿ, ಮನೆ ಖರೀದಿಗೆ ಇಂದು ಸಕಾಲ. ಹೊಸ ವ್ಯವಹಾರಗಳಿಂದ ಲಾಭ ಪಡೆಯುವಿರಿ. ಆದರೆ ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಾಗುವುದು. ದೂರ ಪ್ರಯಾಣ ಮಾಡಬೇಕಾಗಬಹುದು.

ಮಕರ: ವೃತ್ತಿರಂಗದಲ್ಲಿ ದೃಢತೆಯಿರಲಿ. ಚಂಚಲ ಮನೋಭಾವದಿಂದ ಉದ್ಯೋಗ ಬದಲಾವಣೆಗೆ ಆತುರದ ನಿರ್ಧಾರ ಕೈಗೊಳ್ಳಬೇಡಿ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ದಿನದಂತ್ಯಕ್ಕೆ ಶುಭ ಫಲ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಲದೇವರ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ. ಸಂಗಾತಿಯಿಂದ ಮನಸ್ಸಿಗೆ ಬೇಸರವಾಗುವುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು. ನಿರುದ್ಯೋಗಿಗಳಿಗೆ ತಾತ್ಕಾಲಿ’ಕ ಉದ್ಯೋಗ ಸಿಗಲಿದೆ.

ಮೀನ: ಎಷ್ಟೇ ಕಷ್ಟಗಳು ಬಂದರೂ ತಾಳ್ಮೆಯಿಂದ ಮುನ್ನಡೆದರೆ ಮುಂದೆ ಶುಭ ಫಲಗಳಿವೆ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಉದ್ಯೋಗಿಗಳಿಗೆ ಅನುಕೂಲಕರ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

ಮುಂದಿನ ಸುದ್ದಿ
Show comments