Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 31 ಮೇ 2019 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮನೆಯಲ್ಲಿ ಇದುವರೆಗೆ ಇದ್ದ ಅಸಮಾಧಾನಗಳು ನಿಧಾನವಾಗಿ ಮರೆಯಾಗಲಿವೆ. ಹೊಸ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗುವುದರಿಂದ ಚಿಂತೆಯಾಗುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ಪ್ರೇಮಿಗಳಿಗೆ ಮನೆಯವರಿಂದ ವಿರೋಧ ಎದುರಿಸಬೇಕಾಗುತ್ತದೆ. ಅವಿವಾಹಿತರು ಮನಸ್ಸಿಗೆ ಒಪ್ಪುವ ಸಂಬಂಧಕ್ಕಾಗಿ ಕೆಲವು ಸಮಯ ಕಾಯಬೇಕಾಗುತ್ತದೆ. ಕೆಲಸ ಕಾರ್ಯಗಳಲ್ಲಿ ನಿಧಾನಗತಿಯಿಂದ ಚಿಂತೆಯಾಗಬಹುದು. ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ.

ಮಿಥುನ: ಹೊಸ ಕೆಲಸ ಕಾರ್ಯಗಳಿಗೆ ಕೈ ಹಾಕುವಿರಿ. ಆದರೆ ಲೆಕ್ಕ ಪತ್ರಗಳ ಬಗ್ಗೆ ಸರಿಯಾದ ಲೆಕ್ಕಾಚಾರವಿಟ್ಟುಕೊಳ್ಳದಿದ್ದರೆ ಮುಂದೆ ತೊಂದರೆಯಾದೀತು. ಸನ್ಮಿತ್ರರ ಸಹಕಾರ ದೊರೆಯಲಿದೆ. ಕೌಟುಂಬಿಕವಾಗಿ ಅಭಿವೃದ್ಧಿಯಾಗಲಿದೆ.

ಕರ್ಕಟಕ: ನೂತನ ದಂಪತಿಗಳಲ್ಲಿ ಸಂತಾನ ಫಲ ಸೂಚನೆ ಕಂಡುಬರುವುದು. ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಗೌರವ ಹೆಚ್ಚಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಮಾಡಿ.

ಸಿಂಹ: ವಿನಾಕಾರಣ ತೊಂದರೆಗಳನ್ನು ಮೈ ಮೇಲೆಳೆದುಕೊಳ್ಳಬೇಡಿ. ಅಪರಿಚಿತರಿಗೆ ಸಹಾಯ ಮಾಡುವಾಗ ಎಚ್ಚರವಿರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಆರ್ಥಿಕವಾಗಿ ಅಭಿವೃದ್ಧಿಯಿದೆ.

 
ಕನ್ಯಾ: ಸಮಾನ ಮನಸ್ಕರೊಂದಿಗೆ ಹೊಸ ಸಾಹಸಕ್ಕಿಳಿಯುವ ಮನಸ್ಸಾದೀತು. ಆದರೆ ಆತುರದ ನಿರ್ಧಾರ ಮಾಡಬೇಡಿ. ಸ್ತ್ರೀಯರಿಂದ ಅಪವಾದದ ಭೀತಿಯಿದೆ. ಹೆಚ್ಚಿನ ಹಣ ಸಂಪಾದನೆಗೆ ಪರಿಶ್ರಮ ಪಡಲೇಬೇಕು. ತಾಳ್ಮೆಯಿಂದಿರಿ.

ತುಲಾ: ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿ ಮನಸ್ಸಿಗೆ ಖುಷಿ ಕೊಡಲಿದೆ. ಕೌಟುಂಬಿಕವಾಗಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ವೃಶ್ಚಿಕ: ಸಂಗಾತಿಯ ನಿರ್ಧಾರಗಳಿಗೆ ತಲೆದೂಗಲೇಬೇಕಾದೀತು. ಕುಟುಂಬದವರ ನೆಮ್ಮದಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ದೇವತಾ ಪ್ರಾರ್ಥನೆ ಮಾಡಿದರೆ ಒಳಿತು.

ಧನು: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ಹೆಚ್ಚಿ ದೇಹಾಯಾಸವಾಗಬಹುದು. ಅನಗತ್ಯವಾಗಿ ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸುವ ನಿಮ್ಮ ಸ್ವಭಾವಕ್ಕೆ ಕಡಿವಾಣ ಹಾಕುವುದು ಒಳ್ಳೆಯದು. ಆರ್ಥಿಕವಾಗಿ ಹಣದ ಹರಿವಿಗೆ ಕೊರತೆಯಿರದು.

ಮಕರ: ವಿದ್ಯಾರ್ಥಿಗಳು ನಿರೀಕ್ಷಿತ ಫಲಿತಾಂಶ ಪಡೆಯಲು ಕಠಿಣ ಪರಿ‍ಶ್ರಮ ಪಡಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಮಾಡುವಿರಿ. ಆದರೆ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಉದ್ಯೋಗದಲ್ಲಿ ಮುನ್ನಡೆಯಿದೆ.

ಕುಂಭ: ಕೌಟುಂಬಿಕ ಜವಾಬ್ಧಾರಿಗಳನ್ನು ನಿಭಾಯಿಸುವಲ್ಲಿ ಹೈರಾಣಾಗುವಿರಿ. ಕೃಷಿಕರಿಗೆ ನೀರಿಗಾಗಿ ಬವಣೆ ತಪ್ಪದು. ಕೋರ್ಟು, ಕಚೇರಿ ವ್ಯವಹಾರಗಳಲ್ಲಿ ನಿಮಗೆ ಅನುಕೂಲಕರವಾದ ತೀರ್ಪು ಬರಬಹುದು.

ಮೀನ: ಮಕ್ಕಳ ಏಳಿಗೆ ಮನಸ್ಸಿಗೆ ನೆಮ್ಮದಿ ತರುವುದು. ವಿದೇಶ ಪ್ರಯಾಣ ಯೋಗವಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕು. ಧನಾಗಮನವಿದ್ದಷ್ಟೇ ಖರ್ಚೂ ಬರಬಹುದು. ಎಚ್ಚರಿಕೆ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯ ಮೇಲೆ ಕೆಟ್ಟ ದೃಷ್ಟಿ ಬೀಳಬಾರದಂತಿದ್ದರೆ ಮುಖ್ಯ ದ್ವಾರದ ಬಳಿ ಹೀಗೆ ಮಾಡಿ