Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 1 ಜೂನ್ 2019 (08:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆಯಾಗಬಹುದು. ಮನೆ ಮಾಲಿಇಕರ ಕಿರಿ ಕಿರಿಯಿಂದಾಗಿ ಮನೆ ಬದಲಾವಣೆಗೆ ಚಿಂತನೆ ಮಾಡುವಿರಿ. ಸ್ವ ಉದ್ಯೋಗಿಗಳು ಆರ್ಥಿಕ ಲಾಭ ಗಳಿಸುವರು.

ವೃಷಭ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ. ವೃತ್ತಿರಂಗದಲ್ಲಿ ಮುನ್ನಡೆಯಿರುತ್ತದೆ. ಆದರೆ ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ.

ಮಿಥುನ: ದೂರ ಸಂಚಾರ ಮಾಡುವಾಗ ಅಪಘಾತದ ಭಯ ಎದುರಾಗಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಖರ್ಚು ವೆಚ್ಚಗಳ ಬಗ್ಗೆ ಗಮನಹರಿಸುವುದು ಮುಖ್ಯ.

ಕರ್ಕಟಕ: ದೈವಾನುಗ್ರಹದಿಂದ ಸಾಂಸಾರಿಕವಾಗಿ ಸುಖ ಶಾಂತಿ ನೆಲೆಸಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಸಾಲಗಳು ಮರುಪಾವತಿಯಾಗುವುದು. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು.

ಸಿಂಹ: ಅನವಶ್ಯಕವಾಗಿ ಕೋಪದ ಕೈಗೆ ಬುದ್ಧಿ ಕೊಟ್ಟು ಆತುರದ ನಿರ್ಧಾರ ಕೈಗೊಳ್ಳಬೇಡಿ. ಹಿರಿಯರ ಹಿತವಚನಗಳಿಗೆ ಕಿವಿಗೊಡಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಸಹಾಯ ಬಯಸುವರು.

 
ಕನ್ಯಾ: ಮನೆಯಲ್ಲಿ ಶುಭ ಕಾರ್ಯಗಳಿಗಾಗಿ ಓಡಾಟ ಹೆಚ್ಚುವುದು. ಹೊಸ ಜನರ ಸಂಪರ್ಕ ಹೊಸ ದಾರಿ ನೀಡುವುದು. ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು ಮಾಡಬೇಕಾಗುತ್ತದೆ. ಕಷ್ಟದ ಸಂದರ್ಭದಲ್ಲಿ ಮಹಿಳೆಯರಿಂದ ಸಹಾಯ.

ತುಲಾ: ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಮೂಡಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಹೊಸ ದಾರಿ ಕಂಡುಕೊಳ್ಳುವಿರಿ. ರಾಜಕೀಯವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಆದರೆ ಖರ್ಚುಗಳ ಬಗ್ಗೆ ಹಿಡಿತವಿರಬೇಕು.

ವೃಶ್ಚಿಕ: ಋಣಬಾಧೆಗಳು ನಿವಾರಣೆಯಾಗುವುದು. ಆರ್ಥಿಕವಾಗಿ ನಿಧಾನವಾಗಿ ಪ್ರಗತಿ ಕಾಣುವಿರಿ. ಅಂದುಕೊಂಡ ಕಾರ್ಯಗಳಿಗೆ ಕೈ ಹಾಕಲು ಇದುವೇ ಸಕಾಲ. ಸಾಮಾಜಿಕವಾಗಿ ಗೌರವ ಪ್ರತಿಷ್ಠೆ ಹೆಚ್ಚಿಸಿಕೊಳ್ಳುವಿರಿ.

ಧನು: ಮಕ್ಕಳು ಹೇಳುವ ಯಾವುದೋ ಒಂದು ವಿಚಾರ ನಿಮ್ಮ ಚಿಂತೆ ಹೆಚ್ಚಿಸಲಿದೆ. ಆದರೆ ಮನೆಯವರಲ್ಲಿ ವಿಶ್ವಾಸವಿಡುವುದು ಮುಖ್ಯ. ದೈಹಿಕ ಆರೋಗ್ಯದ ಬಗ್ಗೆ ಕಾಳಜಿಯಿಡಬೇಕು. ಹೊಸ ವಸ್ತುಗಳು ಮನೆಗೆ ಬರಲಿವೆ.

ಮಕರ: ವೃತ್ತಿ ರಂಗದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಯಾರ ಮನಸ್ಸನ್ನೂ ನೋಯಿಸುವ ಕೆಲಸ ಮಾಡದಂತೆ ಎಚ್ಚರಿಕೆ ವಹಿಸಬೇಕು. ಆರ್ಥಿಕ ಪ್ರಗತಿ ನಿಮ್ಮ ಸಂತಸ ಹೆಚ್ಚಲು ಕಾರಣವಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಬೇಡದ ಯೋಚನೆ, ಚಿಂತೆ ಮಾಡುತ್ತಾ ಕಾಲ ಹರಣ ಮಾಡಬೇಡಿ. ಕೌಟುಂಬಿಕ ಜವಾಬ್ಧಾರಿಗಳಿಗೆ ಹೆಗಲುಗೊಡಿ. ನಿರುದ್ಯೋಗಿಗಳು ಉತ್ತಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ಪ್ರಯತ್ನ ಬಲವಿದ್ದರೆ ಯಾವುದೇ ಕೆಲಸ ಮಾಡಿದರೂ ಯಶಸ್ಸು ಖಂಡಿತಾ. ಗುರುವಿನ ಅನುಗ್ರಹಕ್ಕೆ ಪಾತ್ರರಾಗಲಿದ್ದೀರಿ. ಪ್ರವಾಸ ಇತ್ಯಾದಿ ಮನಸ್ಸಿಗೆ ಮುದ ನೀಡುವ ಕೆಲಸ ಮಾಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಚರ್ಮರೋಗದಿಂದ ಬಳಲುತ್ತಿರುವವರು ಒಮ್ಮೆ ಈ ದೇವಸ್ಥಾನಕ್ಕೆ ಭೇಟಿ ನೀಡಿ