Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 2 ಜೂನ್ 2019 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.



ಮೇಷ: ಸಂಗಾತಿಯ ಆರೋಗ್ಯ ಹದತಪ್ಪಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಮಕ್ಕಳಿಗಾಗಿ ಹೊಸ ವಸ್ತುಗಳ ಖರೀದಿ ಮಾಡುವಿರಿ. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾದೀತು.

ವೃಷಭ: ಸ್ತ್ರೀಯರಿಂದ ಹೊಸ ಸಮಸ್ಯೆಗಳು ತೋರಿಬರಲಿವೆ. ಎಚ್ಚರಿಕೆಯಿಂದ ವ್ಯವಹರಿಸುವುದು ಮುಖ್ಯ. ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಓಡಾಟದಿಂದ ದೇಹಾಯಾಸವಾಗಬಹುದು.

ಮಿಥುನ: ಕೌಟುಂಬಿಕ ಜವಾಬ್ಧಾರಿಗಳನ್ನು ನಿಭಾಯಿಸಲು ಹೊಸ ವ್ಯಕ್ತಿಗಳ ಸಹಾಯ ಪಡೆಯಬೇಕಾಗುತ್ತದೆ. ಸ್ವ ಉದ್ಯೋಗಕ್ಕೆ ಕೈ ಹಾಕಿದರೆ ಲಾಭ ಗಳಿಸಬಹುದು. ಮಿತ್ರರ ಭೇಟಿ, ಭೋಜನ ಸಾಧ್ಯತೆಯಿದೆ.

ಕರ್ಕಟಕ: ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯಮಾಡಬೇಕಾಗುತ್ತದೆ. ಹಿರಿಯರ ಮಾತಿಗೆ ಮನ್ನಣೆ ಕೊಡಿ. ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಸೂಚನೆ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

 
ಕನ್ಯಾ: ಉದ್ದೇಶಿತ ಕಾರ್ಯಗಳಿಗೆ ಕೆಲವೊಂದು ಅಡ್ಡಿ ಆತಂಕಗಳು ಎದುರಾದರೂ ಧೃತಿಗೆಡದೇ ಮುನ್ನಡೆಯಿರಿ. ಹಳೆಯ ಮಿತ್ರರು ಸಹಾಯಕ್ಕೆ ಬರುವರು. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಎದುರಾಗಬಹುದು. ಎಚ್ಚರಿಕೆ ಅಗತ್ಯ.

ತುಲಾ: ಕೌಟುಂಬಿಕವಾಗಿ ನೆಮ್ಮದಿಯ ದಿನ. ಪತ್ನಿ ಮಕ್ಕಳೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಆದರೆ ಅನಿರೀಕ್ಷಿತವಾಗಿ ಬರುವ ಕೆಲವೊಂದು ಖರ್ಚುಗಳು ಚಿಂತೆ ಹೆಚ್ಚಿಸುವುದು. ಶುಭ ಕಾರ್ಯ ನಡೆಸಲು ಸೂಕ್ತ ಕಾಲ.

ವೃಶ್ಚಿಕ: ಸಾಂಸಾರಿಕವಾಗಿ ಸಾಮರಸ್ಯದ ಕೊರತೆಯಿಂದ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ಚಾಡಿ ಮಾತುಗಳು ಕೇಳಿಬಂದೀತು. ಆದರೆ ತಾಳ್ಮೆಯಿಂದ ಮುನ್ನಡೆಯುವುದು ಅಗತ್ಯ.

ಧನು: ವಿವೇಚನಾ ಶಕ್ತಿ ಬಳಸಿ ಕಾರ್ಯದಲ್ಲಿ ತೊಡಗಿಕೊಂಡರೆ ಸೂಕ್ತ. ಸಂಗಾತಿಯ ಮಾತುಗಳಿಗೆ ಮನ್ನಣೆ ನೀಡಿ. ಮಕ್ಕಳೊಂದಿಗೆ ಭಿನ್ನಾಭಿಪ್ರಾಯಗಳಾಗಬಹುದು. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಗಮನಹರಿಸಬೇಕು.

ಮಕರ: ವಿವಾಹೇಪೇಕ್ಷಿತರಿಗೆ ಸೂಕ್ತ ಸಂಬಂಧ ಕೂಡಿಬರುವುದು. ವ್ಯಾಪಾರಿಗಳಿಗೆ ಕೊಂಚ ನಷ್ಟವಾಗಬಹುದು. ನೂತನ ಗೃಹ ನಿರ್ಮಾಣ ಕಾರ್ಯಕ್ಕೆ ಮುಂದಾಗುವಿರಿ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ.

ಕುಂಭ: ದೈವಾನುಕೂಲದಿಂದ ಎಷ್ಟೋ ದಿನದಿಂದ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ದೊರಕಲಿದೆ. ಆದರೆ ಸಂಗಾತಿಯಿಂದ ಅಪಸ್ವರ ಕೇಳಿಬಂದೀತು. ಧಾರ್ಮಿಕ ಕಾರ್ಯಗಳಿಗೆ ಧನಸಹಾಯ ಮಾಡುವಿರಿ.

ಮೀನ: ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕಾಗುತ್ತದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ಇಷ್ಟಾರ್ಥ ಸಿದ್ಧಿಗೆ ಕುಲದೇವರ ಧ್ಯಾನ ಮಾಡಿ. ಆರ್ಥಿಕವಾಗಿ ಸಬಲರಾಗುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಪ್ಪು ಎಳ್ಳಿನಿಂದ ದೋಷಪರಿಹಾರ ಮಾಡಿಕೊಳ್ಳುವುದು ಹೇಗೆ ಗೊತ್ತಾ?