Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 3 ಜೂನ್ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯೊಂದಿಗಿನ ಮನಸ್ತಾಪಕ್ಕೆ ಪಶ್ಚಾತ್ತಾಪ ಪಡಬೇಕಾಗುವುದು. ಶೀತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಅನಿರೀಕ್ಷಿತ ಖರ್ಚುಗಳು ಚಿಂತೆ ಹೆಚ್ಚಿಗೆ ಮಾಡಲಿವೆ. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ.

ವೃಷಭ: ದೈವಾನುಕೂಲದಿಂದ ನಿಮ್ಮ ಮನೋಕಾಮನೆಗಳು ಪೂರ್ತಿಯಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ದೂರ ಸಂಚಾರ ಯೋಗವಿದ್ದು ಎಚ್ಚರಿಕೆ ಅಗತ್ಯ.

ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಮೂಡಿ ಹಿನ್ನಡೆ ಅನುಭವಿಸಬೇಕಾಗಬಹುದು. ವೃತ್ತಿ, ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ಅನಗತ್ಯ ವಾದ ವಿವಾದಗಳಲ್ಲಿ ತೊಡಗಬೇಡಿ.

ಕರ್ಕಟಕ: ವಸ್ತ್ರ, ಚಿನ್ನಾಭರಣಗಳಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಆದರೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಔದ್ಯೋಗಿಕ ಕ್ಷೇತ್ರದಲ್ಲಿ ಹಿನ್ನಡೆಯಿದ್ದರೂ ತಾಳ್ಮೆಯಿಂದಿರಿ.

ಸಿಂಹ: ವಿವಾಹ ಬೇಡವೆಂದು ಕುಳಿತಿದ್ದವರಿಗೆ ಅನಿರೀಕ್ಷಿತವಾಗಿ ವಿವಾಹ ಸಂಬಂಧಗಳು ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದಿಂದ ಯಶಸ್ಸು. ಸಂಗಾತಿಯಿಂದ ಶುಭ ವಾರ್ತೆ ಆಲಿಸುವಿರಿ.

 
ಕನ್ಯಾ: ಭೂ ವ್ಯವಹಾರದಲ್ಲಿ ಲಾಭ ಪಡೆಯುವಿರಿ. ಆದರೆ ಅಪರಿಚಿತರನ್ನು ನಂಬಿ ವ್ಯವಹಾರ ಮಾಡಬೇಡಿ. ಆರ್ಥಿಕವಾಗಿ ನಾನಾ ಖರ್ಚು ವೆಚ್ಚಗಳು ತಲೆದೋರಬಹುದು. ಸಂಗಾತಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಿರಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಅಧಿಕಾರಿ ವರ್ಗದವರಿಗೆ ಮುನ್ನಡೆಯ ಭಾಗ್ಯವಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಕಂಡುಕೊಳ್ಳುವರು.

ವೃಶ್ಚಿಕ: ಮನೋಕಾಮನೆಗಳು ಈಡೇರುವುದು. ಸಂಗಾತಿಯಿಂದ ಸಂತಸ ಇಮ್ಮಡಿಗೊಳ್ಳುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ.

ಧನು: ನಿಮ್ಮ ದುಡುಕು ಮಾತಿನಿಂದ ಸಂಸಾರದಲ್ಲಿ ಹದತಪ್ಪೀತು. ಎಚ್ಚರಿಕೆಯಿಂದಿರಬೇಕು. ಕೆಲಸ ಕಾರ್ಯಗಳಲ್ಲಿ ನಷ್ಟ ಅನುಭವಿಸಬೇಕಾದೀತು. ದೂರ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಾಹನ ಖರೀದಿ ಮಾಡಲು ಮುಂದಾಗುವಿರಿ.

ಮಕರ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ಹಂತ ಹಂತವಾಗಿ ಅಭಿವೃದ್ಧಿ ಕಾಣುವಿರಿ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ.

ಕುಂಭ: ಅನಗತ್ಯವಾಗಿ ಚಿಂತೆ ಮಾಡುತ್ತಾ ದೈನಂದಿನ ಕೆಲಸಗಳಲ್ಲಿ ನಿಧಾನ ಮಾಡುವಿರಿ. ಕಷ್ಟ-ಸುಖ ಎರಡೂ ಇಂದು ಸಮ್ಮಿಶ್ರವಾಗಿದ್ದು, ಸರಿದೂಗಿಸಿಕೊಂಡು ಹೋಗುವುದೇ ಜಾಣತನ. ದೇವರ ದರ್ಶನ ಪಡೆದರೆ ನೆಮ್ಮದಿ.

ಮೀನ: ಅಂದುಕೊಂಡ ಕಾರ್ಯಗಳು ಹಣಕಾಸಿನ ಅಭಾವದಿಂದ ಅರ್ಧಕ್ಕೆ ನಿಲ್ಲಲಿವೆ. ಹಿರಿಯರ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಅವಿವಾಹಿತರು ಯೋಗ್ಯ ಸಂಬಂಧಕ್ಕಾಗಿ ಕೆಲವು ಸಮಯ ಕಾಯುವುದು ಒಳ್ಳೆಯದು.

Share this Story:

Follow Webdunia kannada

ಮುಂದಿನ ಸುದ್ದಿ

ಆರೋಗ್ಯ, ನೆಮ್ಮದಿ, ಶಾಂತಿ ದೊರಕಲು ಶಮಿ ಪತ್ರೆಯಿಂದ ಹೀಗೆ ಮಾಡಿ