Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 4 ಜೂನ್ 2019 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಏನೇ ಕಷ್ಟಗಳು ಬಂದರೂ ಸ್ವಂತ ಬಲದ ಮೇಲೆ ಮುನ್ನಡೆದರೆ ಯಶಸ್ಸು ಖಂಡಿತಾ ಸಾಧ್ಯ. ವಾಸ ಸ್ಥಳ ಬದಲಾವಣೆಗೆ ಚಿಂತನೆ ಮಾಡುವಿರಿ. ಉದ್ಯೋಗದಲ್ಲಿ ಯಥಾ ಪ್ರಕಾರ ಒತ್ತಡದ ವಾತಾವರಣವಿರಲಿದೆ.

ವೃಷಭ: ಹೊಸ ಕೆಲಸಗಳಿಗೆ ಕೈಹಾಕಬೇಕೆಂದರೂ ಹಿತಶತ್ರುಗಳಿಂದ ಅಡ್ಡಿ ಆತಂಕಗಳು ಎದುರಾಗಬಹುದು. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ.

ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ಕಿರಿ ಕಿರಿ ಉಂಟಾಗಬಹುದು. ಹಿರಿಯರ ಮಧ್ಯಸ್ಥಿಕೆ ಅಗತ್ಯ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾಗಬಹುದು. ವಾಹನ ಖರೀದಿಗೆ ಮುಂದಾಗುವಿರಿ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಮಹಿಳಾ ಉದ್ಯೋಗಿಗಳಿಂದ ಕಷ್ಟದ ಸಂದರ್ಭದಲ್ಲಿ ಉಪಕಾರವಾಗುವುದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಖರ್ಚು ವೆಚ್ಚಗಳು ಹೆಚ್ಚುವುದು.

ಸಿಂಹ: ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದ್ದು, ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ. ವಿವಾಹ ಪ್ರಯತ್ನದಲ್ಲಿ ಫಲ ಕಾಣುವಿರಿ. ನಿರುದ್ಯೋಗಿಗಳು ಕೆಲವು ಕಾಲ ತಾಳ್ಮೆಯಿಂದಿರಬೇಕು.

 
ಕನ್ಯಾ: ಅನ್ಯಾಯ ಕಂಡರೆ ಸಿಡಿದೇಳುವ ನಿಮ್ಮ ಸ್ವಭಾವ ನಿಮಗೇ ತಿರುಗುಬಾಣವಾಗಬಹುದು. ಎಚ್ಚರಿಕೆಯಿಂದ ವ್ಯವಹರಿಸಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಹಕಾರ ಸಿಗುವುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕುವುದು.

ತುಲಾ: ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಭೂಮಿ, ಮನೆ ಖರೀದಿಗೆ ಉತ್ತಮ ಸಮಯ. ಆಯ ವ್ಯಯ ಲೆಕ್ಕ ಪತ್ರಗಳನ್ನು ಸರಿಯಾಗಿಟ್ಟುಕೊಳ್ಳಿ.

ವೃಶ್ಚಿಕ: ಹೊಸ ಕೆಲಸಗಳಿಗೆ ಕೈಹಾಕುವಾಗ ಸಂಗಾತಿಯೊಡನೆ ಪರಾಮರ್ಶಿಸಿ ಯೋಚಿಸಿ ಹೆಜ್ಜೆಯಿಡಿ. ಹಿತ ಶತ್ರುಗಳು ಬೆನ್ನ ಹಿಂದೆಯೇ ಇರುವರು. ದಾಯಾದಿಗಳೊಂದಿಗಿನ ಮನಸ್ತಾಪಗಳು ದೂರವಾಗಬಹುದು.

ಧನು: ಕೌಟುಂಬಿಕವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಇಲ್ಲದ ಮಾನಸಿಕ ಕಿರಿ ಕಿರಿಗಳನ್ನು ಮೈಮೇಲೆಳೆದುಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ಮಕರ: ಹಲವು ದಿನಗಳಿಂದ ಅಪೇಕ್ಷೆ ಪಟ್ಟಿದ್ದ ಕೆಲಸಗಳು ಅನಿರೀಕ್ಷಿತವಾಗಿ ನೆರವೇರಿ ಮನಸ್ಸಿಗೆ ನೆಮ್ಮದಿಯಾಗುವುದು. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಶುಭ ಮಂಗಲ ಕಾರ್ಯ ನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆಯೇ ನಿಮ್ಮ ದೊಡ್ಡ ಅಸ್ತ್ರ. ನಿರುದ್ಯೋಗಿಗಳು ಉದ್ಯೋಗ ಅರಸಿಕೊಂಡು ದೂರ ಸಂಚಾರ ಮಾಡಬೇಕಾಗುತ್ತದೆ.

ಮೀನ: ಕಾರ್ಯಕ್ಷೇತ್ರದಲ್ಲಿ ಶತ್ರುಬಾಧೆಯಿಂದ ಹಿನ್ನಡೆಯುಂಟಾಗಬಹುದು. ಆದರೆ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಖರ್ಚು ವೆಚ್ಚಗಳ ಬಗ್ಗೆ ಹಿಡಿತ ಅಗತ್ಯ. ಹಳೆಯ ಮಿತ್ರರನ್ನು ಭೇಟಿಯಾಗುವಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ದೆಶೆ ತಿರುಗಿಬಿದ್ದರೆ ಎಂಥಾ ಕೆಟ್ಟ ಪರಿಣಾಮವಾಗುತ್ತದೆ ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments