Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 5 ಜೂನ್ 2019 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಹುದಿನಗಳಿಂದ ಕಾಡುತ್ತಿದ್ದ ಕೆಲವೊಂದು ಸಮಸ್ಯೆಗೆ ಪರಿಹಾರ ಮಾರ್ಗಗಳು ಕಂಡಬಂದೀತು. ಆರ್ಥಿಕವಾಗಿ ಬಾಕಿ ಹಣ ವಸೂಲಿ ಮಾಡುವ ಚಿಂತೆಯಾಗಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತಸವಾಗುವುದು.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ದೊರಕುತ್ತವೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಆದರೆ ದುಡುಕಿ ವರ್ತನೆ ಮಾಡಿ ಕೆಳ ಹಂತದ ನೌಕರರ ವಿಶ್ವಾಸ ಕಳೆದುಕೊಳ್ಳಬೇಡಿ. ನಿರ್ಧಾರಗಳನ್ನು ಕೈಗೊಳ್ಳುವಾಗ ಎಲ್ಲರ ಹಿತ ಗಮನಿಸಿ.

ಮಿಥುನ: ಯಾವುದೇ ಕೆಲಸವಾದರು ಯೋಚಿಸಿ ಹೆಜ್ಜೆಯಿಡುವುದು ಸೂಕ್ತ. ಅವಿವಾಹಿತರು ಬಂದಿರುವ ವಿವಾಹ ಪ್ರಸ್ತಾಪಗಳನ್ನು ಒಪ್ಪುವುದೋ ಬೇಡವೋ ಎಂಬ ಗೊಂದಲದಲ್ಲಿರುತ್ತಾರೆ. ಮನಸ್ಸಿನ ನೆಮ್ಮದಿಗಾಗಿ ಶ್ರೀದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಅನಗತ್ಯ ಕಿರಿ ಕಿರಿ ಎದುರಾಗಬಹುದು. ತಾಳ್ಮೆ ಕಳೆದುಕೊಳ್ಳಬಾರದು. ನೆರೆಹೊರೆಯವರೊಂದಿಗೆ ಗಡಿ ತಂಟೆ ತಕರಾರು ಎದುರಾಗಬಹುದು. ಎಚ್ಚರಿಕೆಯಿಂದಿರಿ.

ಸಿಂಹ: ಕೋರ್ಟು ವ್ಯಾಜ್ಯಗಳಲ್ಲಿ ನ್ಯಾಯಾಲದಲ್ಲಿ ನಿಮ್ಮ ಪರವಾಗಿ ತೀರ್ಪು ಬರುವುದು. ಇಷ್ಟಮಿತ್ರರೊಂದಿಗೆ ಭೋಜನ, ಪ್ರವಾಸ ಸಾಧ್ಯತೆಯಿದೆ. ಕೌಟುಂಬಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.

 
ಕನ್ಯಾ: ಕೌಟುಂಬಿಕವಾಗಿ ನೆಮ್ಮದಿಯ ದಿನಗಳಾಗಿರುತ್ತವೆ. ಹೆಂಡತಿ, ಮಕ್ಕಳೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಆರ್ಥಿಕವಾಗಿ ಆದಾಯಕ್ಕೇನೂ ಕೊರತೆಯಿರದು. ಆದರೆ ಖರ್ಚಿನ ಬಗ್ಗೆ ಎಚ್ಚರಿಕೆಯಿರಲಿ. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

ತುಲಾ: ನಿಮಗೆ ಸರಿ ಎನಿಸಿದ್ದನ್ನು ಮಾಡುತ್ತಾ ಹೋಗುವಿರಿ. ಮನಸ್ಸಿನ ಮಾತಿಗೆ ಬೆಲೆ ಕೊಡುವುದು ಮುಖ್ಯ. ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ವೃಶ್ಚಿಕ: ನಿಮ್ಮ ‍ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರಾಸಕ್ತಿ ಕಾಣಬಹುದು. ದೇಹಾರೋಗ್ಯ ಕೆಡದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.

ಧನು: ಉದ್ಯೋಗ ಕ್ಷೇತ್ರದಲ್ಲಿ ನೆಮ್ಮದಿಯ ದಿನಗಳು. ಬಡ್ತಿ, ಮುನ್ನಡೆ ಯೋಗವೂ ಇದೆ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಹಣ ಖರ್ಚು ಮಾಡುತ್ತೀರಿ. ದೂರ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮಕರ: ಅಪರಿಚಿತರನ್ನು ನಂಬಿ ಹೊಸ ವ್ಯವಹಾರ ಮಾಡಲು ಹೋದರೆ ವಂಚನೆಗೊಳಗಾಗಬೇಕಾದೀತು. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಕುಂಭ: ನಿಮ್ಮ ಸ್ನೇಹಪರ ನಡವಳಿಕೆಯಿಂದ ಕಠಿಣ ಸನ್ನಿವೇಶದಲ್ಲೂ ಜಯ  ಗಳಿಸುವಿರಿ. ಆದರೆ ಸಾಂಸಾರಿಕವಾಗಿ ಹೊಂದಾಣಿಕೆ ಕೊರತೆ ಎದುರಾಗಬಹುದು. ಇದರಿಂದ ಮನಸ್ಸಿಗೆ ಕೊಂಚ ಬೇಸರವಾಗಬಹುದು. ಆದರೆ ತಾಳ್ಮೆಯಿಂದಿರಿ.

ಮೀನ: ದೈವಾನುಕೂಲದಿಂದ ಮಾನಸಿಕ ಸಂತೋಷಕ್ಕೆ ಕೊರತೆಯಿರದು. ಆದರೆ ದೇಹಾರೋಗ್ಯ ಹದತಪ್ಪಬಹುದು. ಎಚ್ಚರಿಕೆ ಅಗತ್ಯ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments