Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 6 ಜೂನ್ 2019 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಕ್ಕಳ ಭವಿಷ್ಯದ ವಿಚಾರವಾಗಿ ಚಿಂತೆ ಮಾಡುವಿರಿ. ಆರೋಗ್ಯಯ ಸಮಸ್ಯೆ ಕಂಡುಬರಬಹುದು. ವಾಸ ಸ್ಥಳ ಬದಲಾವಣೆ ಬಗ್ಗೆ ಚಿಂತನೆ ಮಾಡುವಿರಿ. ಬಾಕಿ ಹಣ ಪಾವತಿಯಾಗುವುದರಿಂದ ನೆಮ್ಮದಿಯಾಗಲಿದೆ.

ವೃಷಭ: ಕಾರ್ಯ ಸಾಧನೆಗೆ ದೂರ ಸಂಚಾರ ಮಾಡುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಕಷ್ಟದಲ್ಲಿರುವ ಮಿತ್ರರ ಸಹಾಯಕ್ಕೆ ಧಾವಿಸುವಿರಿ. ಈ ಸಹಾಯ ಮುಂದೊಂದು ದಿನ ನಿಮಗೆ ಒಳಿತು ಮಾಡಲಿದೆ.

ಮಿಥುನ: ದುಡುಕು ಮಾತಿನಿಂದ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಹಿತಶತ್ರುಗಳಿಂದ ದೂರವಿದ್ದಷ್ಟು ಒಳ್ಳೆಯದು. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ದಿನದಂತ್ಯಕ್ಕೆ ಶುಭ ಸುದ್ದಿ ಆಲಿಸುವಿರಿ.

ಕರ್ಕಟಕ: ಸಾಂಸಾರಿಕವಾಗಿ ಹೊಂದಾಣಿಕೆ ಕೊರತೆಯಿಂದ ಮನೆಯಲ್ಲಿ ಅಶಾಂತಿಯ ವಾತಾವರಣವಿರುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಅದಿಕ ಲಾಭ ಗಳಿಸುವ ವ್ಯವಹಾರಕ್ಕೆ ಕೈ ಹಾಕುವ ಮುನ್ನ ಲೆಕ್ಕ ಪತ್ರಗಳ ಬಗ್ಗೆ ಸರಿಯಾದ ಪರಿಶೋಧನೆ ನಡೆಸಿ. ವಂಚನೆಗೊಳಗಾಗುವ ಸಾಧ್ಯತೆಯಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಸಂತಸಕ್ಕೆ ಕಾರಣವಾಗುವುದು.

 
ಕನ್ಯಾ: ವೃತ್ತಿ ರಂಗದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇರುತ್ತದೆ. ನಿಮ್ಮ ಅಜಾಗರೂಕತೆಯಿಂದ ಕೆಲವೊಂದು ತಪ್ಪುಗಳು ಇತರರಿಗೆ ತೊಂದರೆ ಉಂಟುಮಾಡಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕಾಗುವುದು. ಎಚ್ಚರಿಕೆಯಿಂದಿರಿ.

ತುಲಾ: ದಾಂಪತ್ಯ ಸುಖ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಕಠಿಣ ಪ್ರಯತ್ನ ಅಗತ್ಯ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆರೋಗ್ಯದಲ್ಲಿ  ಸುಧಾರಣೆಯಾಗಲಿದೆ.

ವೃಶ್ಚಿಕ: ಸರ್ಕಾರಿ ಉದ್ಯೋಗಿಗಳಿಗೆ ಬಡ್ತಿ ಸಂಭವವಿದೆ. ಕೃಷಿ ಕ್ಷೇತ್ರದಲ್ಲಿರುವವರ ಬವಣೆಗಳು ತಪ್ಪದು. ಮನೆಯಲ್ಲಿ ಶುಭ ಕಾರ್ಯ ನಡೆಸಲು ಓಡಾಟ ನಡೆಸಬೇಕಾಗಬಹುದು. ಹಿರಿಯರ ತೀರ್ಥ ಯಾತ್ರೆಗೆ ತಯಾರಿ ನಡೆಸುವಿರಿ.

ಧನು: ಯಾರದ್ದೋ ಸಮಸ್ಯೆ ಬಗೆಹರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಹೆಚ್ಚಲಿದೆ. ಋಣಾತ್ಮಕ ಚಿಂತೆಗಳಿಂದ ನೆಮ್ಮದಿಗೆ ಭಂಗ.

ಮಕರ: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಉದ್ದೇಶಿತ ಕೆಲಸಗಳು ಬಾಕಿಯಾಗುವುದು. ನೂತನ ದಂಪತಿಗಳಿಗೆ ಏಕಾಂತ ಭಂಗ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ.

ಕುಂಭ: ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಅವಿವಾಹಿತರಿಗೆಮನಸ್ಸಿಗೆ ಒಪ್ಪಿಗೆಯಾಗುವ ಸಂಬಂಧಗಳು ಕೂಡಿಬರಲಿವೆ. ವ್ಯವಹಾರ ಸಂಬಂಧ ದೂರ ಸಂಚಾರ ಮಾಡಬೇಕಾಗುತ್ತದೆ. ಎಚ್ಚರಿಕೆಯಿಂದಿರಿ.

ಮೀನ: ಎಷ್ಟೋ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗುವಿರಿ. ದಾಯಾದಿಗಳ ಅಸಮಾಧಾನಕ್ಕೆ ಕಾರಣರಾಗುವಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments