Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 7 ಜೂನ್ 2019 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಧನಾಗಮನದಿಂದ ಮನಸ್ಸಿಗೆ ಖುಷಿಯಾಗುವುದು. ಸಾಂಸಾರಿಕವಾಗಿಯೂ ಸಮಾಧಾನಕರ ವಾತಾವರಣವಿರುವುದು. ಕಿರು ಸಂಚಾರ ಮಾಡಬೇಕಾಗಿ ಬರುತ್ತದೆ. ಆದರೆ ಆರೋಗ್ಯದ ಬಗ್ಗೆ ಚಿಂತೆಯಾಗುವುದು.

ವೃಷಭ: ಅನಗತ್ಯ ಅಪವಾದಗಳಿಗೆ ಗುರಿಯಾಗದಂತೆ ಎಚ್ಚರಿಕೆ ವಹಿಸುವುದು ಒಳ್ಳೆಯದು. ನಯವಂಚಕರ ಬೆಣ್ಣೆಯ ಮಾತುಗಳಿಗೆ ಕರಗದಿರಿ. ಸಂಗಾತಿಯ ಸಹಕಾರ ಸಿಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಕಾಲ ಕೂಡಿಬಂದಿದೆ. ವಿದ್ಯಾರ್ಥಿಗಳಿಗೆ ಕಠಿಣ ಪ್ರಯತ್ನ ಮಾಡಿದರೇ ಯಶಸ್ಸು. ವೃತ್ತಿರಂಗದಲ್ಲಿ ಮುನ್ನಡೆಯಿದ್ದರೂ ಆರ್ಥಿಕ ಸ್ಥಿತಿ ಆತಂಕಕ್ಕೆ ಕಾರಣವಾಗಲಿದೆ.

ಕರ್ಕಟಕ: ಆತುರದ ನಿರ್ಧಾರ ಕೈಗೊಳ್ಳಬೇಡಿ. ನಿರುದ್ಯೋಗಿಗಲಿಗೆ ನಾನಾ ಅವಕಾಶಗಳು ಹುಡುಕಿಕೊಂಡು ಬರಲಿವೆ. ಬಳಸಿಕೊಳ್ಳುವುದರಲ್ಲಿ ಜಾಣತನ ತೋರಬೇಕು ಅಷ್ಟೇ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಿಂಹ: ವ್ಯಾಪಾರ, ವಾಣಿಜ್ಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ, ಲಾಭ ಗಳಿಸಲು ಅವಕಾಶಗಳಿವೆ. ಕೃಷಿಕರಿಗೆ ಕೊಂಚ ಹಿನ್ನಡೆಯಾಗಬಹುದು. ಸಾಂಸಾರಿಕವಾಗಿ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು.

 
ಕನ್ಯಾ: ಅಗತ್ಯದ ಕೆಲಸಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಸಂಗಾತಿಯಿಂದ ಸಹಕಾರ ಸಿಗಲಿದೆ. ಅನಿರೀಕ್ಷಿತವಾಗಿ ಸಿಗುವ ಮಿತ್ರರೊಂದಿಗೆ ಪ್ರವಾಸ ಮಾಡುವಿರಿ. ವಾಹನ ಚಲಾಯಿಸುವಾಗ ಎಚ್ಚರಿಕೆ ಅಗತ್ಯ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಹೆಚ್ಚುವುದು. ಆರೋಗ್ಯ  ಹದಗೆಡುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆ ಅಗತ್ಯ. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಿರದು. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಬಾರದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ಯಾವುದೇ ಕೆಲಸ ಮಾಡಲು ಹೊರಟರೂ ಹಿನ್ನಡೆಯಾಗುವುದರಿಂದ ಮನಸ್ಸಿಗೆ ಬೇಸರವಾಗುವುದು. ಕುಲದೇವರ ಪ್ರಾರ್ಥನೆ ಮಾಡಿ ಅನುಗ್ರಹ ಪಡೆದುಕೊಳ್ಳಿ. ದೂರ ಸಂಚಾರದಲ್ಲಿ ಎಚ್ಚರಿಕೆ ವಹಿಸಿ.

ಧನು: ಕೌಟುಂಬಿಕ ವಿಚಾರದಲ್ಲಿ ನೆಮ್ಮದಿಯೇ ಇಲ್ಲದಂತಾದೀತು. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಆದರೆ ಮಿತ್ರರ ಅಸಹಕಾರ ಬೇಸರಕ್ಕೆ ಕಾರಣವಾಗುವುದು.

ಮಕರ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಜಯ ಸಿಗಲಿದೆ. ಅನಿರೀಕ್ಷಿತವಾಗಿ ಶುಭ ಸುದ್ದಿ ಆಲಿಸುವಿರಿ.

ಕುಂಭ: ಸಾಂಸಾರಿಕವಾಗಿ ಹೊಂದಾಣಿಕೆಯಿರಲಿ. ಹಳೆಯ ಸಂಬಂಧಗಳಿಗೆ ಮರುಜೀವ ಬರಲಿದೆ. ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚುವುದು. ಉದ್ಯೋಗ ರಂಗದಲ್ಲಿ ಉನ್ನತ ಸ್ಥಾನಮಾನ ಲಭ್ಯವಾಗಲಿದೆ.

ಮೀನ: ಕಾರ್ಯಕ್ಷೇತ್ರದಲ್ಲಿ ಉತ್ತಮ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಆದರೆ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments