Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 8 ಜೂನ್ 2019 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.



ಮೇಷ: ಉದ್ಯೋಗದಲ್ಲಿ ಅತಂತ್ರವಾಗುವ ಭೀತಿ. ನಿಮ್ಮ ತಾಳ್ಮೆ, ಆತ್ಮಸ್ಥೈರ್ಯವನ್ನು ಪರೀಕ್ಷಿಸುವ ಕಾಲವಿದು. ಆರ್ಥಿಕವಾಗಿ ಧನಾಗಮನಕ್ಕೆ ನಾನಾ ಮಾರ್ಗಗಳ ಬಗ್ಗೆ ಯೋಚನೆ ಮಾಡುವಿರಿ. ಮನೆಯಲ್ಲಿ ಸಮಾಧಾನಕರ ವಾತಾವರಣವಿರಲಿದೆ.

ವೃಷಭ: ವೃತ್ತಿರಂಗದಲ್ಲಿ ಇದುವರೆಗೆ ನಿಮಗಾಗುತ್ತಿದ್ದ ಮೋಸ, ವಂಚನೆಗಳು ಬೆಳಕಿಗೆ ಬರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ. ಮಾನಸಿಕ ಚಿಂತೆಯಿಂದ ಕೆಲಸ ಕಾರ್ಯಗಳಲ್ಲಿ ವಿಳಂಬವಾಗಬಹುದು.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ. ಕಷ್ಟದ ಸಮಯದಲ್ಲಿ ಮಿತ್ರರಿಂದ ನೆರವು ದೊರಕಲಿದೆ. ನಿರುದ್ಯೋಗಿಗಳು ಉದ್ಯೋಗ ಬೇಟೆಯ ಪ್ರಯತ್ನ ಮುಂದುವರಿಸುವರು. ಸಾಂಸಾರಿಕವಾಗಿ ಸಂಗಾತಿಯಿಂದ ಸಹಕಾರ ಸಿಗಲಿದೆ.

ಕರ್ಕಟಕ: ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಹಿರಿಯರ ಆರೋಗ್ಯ ಕೈಕೊಟ್ಟು ಆಸ್ಪತ್ರೆಗೆ ಅಲೆದಾಡಬೇಕಾದೀತು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಆರ್ಥಿಕವಾಗಿ ಚೇತರಿಕೆ ಕಾಣುವಿರಾದರೂ ಖರ್ಚಿನ ಬಗ್ಗೆ ನಿಗಾ ಇರಲಿ.

ಸಿಂಹ: ಹಿಂದೆ ಮಾಡಿದ ಅಸಡ್ಡೆಗೆ ಇಂದು ಪ್ರತಿಫಲ ಎದುರಿಸಬೇಕಾದೀತು. ಆರ್ಥಿಕವಾಗಿ ಸಂಕಷ್ಟಗಳು ಎದುರಾಗಲಿವೆ. ಆದರೆ ನಿಮ್ಮ ಆತ್ಮಸ್ಥೈರ್ಯವೇ ನಿಮ್ಮ ಬಲವಾಗಬೇಕು. ಸಮಾಧಾನ ಚಿತ್ತದಿಂದ ಮುನ್ನಡೆಯಿರಿ.

 
ಕನ್ಯಾ: ವೃತ್ತಿರಂಗದಲ್ಲಿ ಹಿತಶತ್ರುಗಳಿಂದ ತೊಂದರೆಗಳು ಎದುರಾದೀತು. ಕೃಷಿ ಕ್ಷೇತ್ರದಲ್ಲಿರುವವರಿಗೆ ಸಮಾಧಾನಕರ ದಿನ. ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ ಕಾಣುವಿರಿ. ಆದರೆ ಮನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರವಹಿಸಿ.

ತುಲಾ: ನಿಮ್ಮ ದೃಢ ನಿರ್ಧಾರದಿಂದ ವೃತ್ತಿರಂಗದಲ್ಲಿ ಯಾರೂ ನಿಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ. ಸರ್ಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಸಂಕಷ್ಟದ ಸಮಯದಲ್ಲಿ ಹಿರಿಯರ ಹಿತವಚನಗಳನ್ನು ಕೇಳಬೇಕು. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಭೀತಿಯಿದೆ. ಆರೋಗ್ಯದ ಬಗ್ಗೆ ಉದಾಸೀನ ಬೇಡ. ಶತ್ರುಬಾಧೆಗಳಿಂದ ಮುಕ್ತಿ.

ಧನು: ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಖರ್ಚು ವೆಚ್ಚಗಳು ಅಧಿಕವಾಗಬಹುದು. ಆದರೆ ನಿಮ್ಮ ಆತ್ಮವಿಶ್ವಾಸದ ನಡೆಯಿಂದ ಎಲ್ಲರ ಮನಸ್ಸು ಗೆಲ್ಲುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ.

ಮಕರ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದ ವ್ಯವಹರಿಸಬೇಕಾಗುತ್ತದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ರಾಜಕೀಯ ಕ್ಷೇತ್ರದಲ್ಲಿರುವವರ ಸ್ಥಾನ ಮಾನಗಳು ಹೆಚ್ಚಲಿದ್ದು, ಸಮಾಜದಲ್ಲಿ ಗೌರವ ಸಂಪಾದಿಸಲಿದ್ದೀರಿ.

ಕುಂಭ: ಅನವಶ್ಯಕವಾಗಿ ಕೆಲಸ ಕಾರ್ಯಗಳನ್ನು ಮುಂದಕ್ಕೆ ಹಾಕಬೇಕೆನಿಸುತ್ತದೆ. ಋಣಾತ್ಮಕ ಚಿಂತನೆಗಳಿಂದ ಆಲಸ್ಯತನ ಕಂಡುಬರಬಹುದು. ಆದರೆ ಕಾಲಕ್ಕೆ ತಕ್ಕ ಹಾಗೆ ಚಿಂತನೆ ಮಾಡಿಕೊಂಡು ಮುಂದುವರಿಯಲೇಬೇಕಾದ ಅನಿವಾರ್ಯತೆಯಿದೆ ಎಂಬುದನ್ನು ಮನಗಾಣಿ.

ಮೀನ: ನೂತನ ಕೆಲಸ ಕಾರ್ಯಗಳಲ್ಲಿ ಉತ್ಸಾಹ, ಮುನ್ನಡೆ ಸಂತಸಕ್ಕೆ ಕಾರಣವಾಗುವುದು. ನೂತನ ದಂಪತಿಗಳಿಗೆ ಸಂತಾನ ಸೂಚನೆ ಸಿಗಲಿದೆ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿದರೆ ಹೆಚ್ಚಿನ ಶುಭ ಫಲ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments