Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 11 ಜೂನ್ 2019 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿರೀಕ್ಷಿತ ರೀತಿಯಲ್ಲಿಯೇ ಹೊಸ ವ್ಯವಹಾರಗಳು ನಡೆಯಲಿವೆ. ಚಿಂತೆ ಬೇಡ. ಆದರೆ ತಾತ್ಕಾಲಿಕ ಉದ್ಯೋಗಗಿಳಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿಯಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣವಿರಲಿ.

ವೃಷಭ: ಇತರರಿಗೆ ಸಹಾಯ ಮಾಡುವ ನಿಮ್ಮ ಗುಣ ನಿಮಗೇ ತೊಂದರೆ ತಂದಿಟ್ಟೀತು. ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋಗಬೇಡಿ. ಹಾಸಿಗೆ ಇದ್ದಷ್ಟೇ ಕಾಲು ಚಾಚುವುದು ಒಳಿತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ಯಾಕೋ ನಿಮ್ಮ ಗ್ರಹ ಫಲಗಳು ಇಂದು ನಿಮಗೇ ಉಲ್ಟಾ  ಹೊಡೆಯಲಿವೆ. ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲವಿಲ್ಲದೇ ಬೇಸರವಾದೀತು. ಮನೆಯಲ್ಲಿಯೂ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಲಿದ್ದೀರಿ. ತಾಳ್ಮೆಯಿಂದಿರಿ.

ಕರ್ಕಟಕ: ಆರೋಗ್ಯ ಭಾಗ್ಯದಲ್ಲಿ ಸುಧಾರಣೆಯಾಗಲಿದೆ. ಹಿರಿಯರ ತೀರ್ಥ ಯಾತ್ರೆಗಳಿಗೆ ವ್ಯವಸ್ಥೆ ಮಾಡುವಿರಿ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು.

ಸಿಂಹ: ಆಸ್ತಿ ವಿಚಾರದಲ್ಲಿ ದಾಯಾದಿಗಳಿಂದ ಕಿರಿಕಿರಿಯಾಗಬಹುದು. ಆದರೆ ಇಷ್ಟಮಿತ್ರರ ಭೇಟಿ, ಭೋಜನ ಮನಸ್ಸಿಗೆ ನೆಮ್ಮದಿ ಕೊಡುವುದು. ನಿಮ್ಮ ಕ್ರಿಯಾಶೀಲತೆಗೆ ಕೆಲಸ ಕೊಡಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

 
ಕನ್ಯಾ: ಕೈಗೊಂಡ ಕಾರ್ಯಗಳಲ್ಲಿ ಪ್ರತಿಕೂಲವಾದ ಫಲಿತಾಂಶಗಳು ಬರಬಹುದು. ನಿಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳುವವರು ಇರುತ್ತಾರೆ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರಬಹುದು. ಎಚ್ಚರಿಕೆ ಅಗತ್ಯ.

ತುಲಾ: ರಾಜಕೀಯ ಕ್ಷೇತ್ರದಲ್ಲಿರುವವರ ಸ್ಥಾನ ಮಾನ ವೃದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಆದರೆ ನಿರೀಕ್ಷಿಸಿದಷ್ಟು ಆದಾಯ ಬರದೇ ಚಿಂತೆಯಾಗುವುದು. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಸರಕಾರಿ ಅಧಿಕಾರಿಗಳಿಗೆ ಹಿನ್ನಡೆಯಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲು ಕೆಲವು ಸಮಯ ಕಾಯಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕಾರ್ಯಕ್ಷೇತ್ರದಲ್ಲಿ ಜಯ, ಅಭಿವೃದ್ಧಿ ಗೋಚರಕ್ಕೆ ಬರುವುದು. ಕಿರು ಸಂಚಾರ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ವೈವಾಹಿಕ ಪ್ರಸ್ತಾಪಗಳು ಬರುವುದು.

ಮಕರ: ವೃತ್ತಿರಂಗದಲ್ಲಿ ಚಾಡಿಕೋರರಿಂದ ದೂರವಿರಿ. ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸದ ವಾರ್ತೆಯಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆದಾಯಕ್ಕೇನೂ ಕೊರತೆಯಿರದು, ಆದರೆ ಖರ್ಚಿನ ಬಗ್ಗೆ ಹಿಡಿತವಿರಲಿ.

ಕುಂಭ: ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಭಾಗ್ಯವಿದೆ. ಕೆಡುಕು ಮಾತನಾಡುವವರು ಸುತ್ತಲೂ ಇರುತ್ತಾರೆ. ತಲೆಕೆಡಿಸಿಕೊಳ್ಳಬೇಡಿ. ಸಾಧು ಸಂತರ ಭೇಟಿ ಸಾಧ್ಯತೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮೀನ: ನೂತನ ಗೃಹ ನಿರ್ಮಾಣ ಕಾರ್ಯಕ್ಕೆ ಮುಂದಾಗಲು ಸಕಾಲ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಸಂಗಾತಿಯ ಇಷ್ಟ ಕಷ್ಟಗಳಿಗೆ ಬೆಲೆಕೊಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments