Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 13 ಜೂನ್ 2019 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಲಸದಲ್ಲಿ ನಿರುತ್ಸಾಹ ತೋರಿಬಂದೀತು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಇಷ್ಟಮಿತ್ರರ ಭೇಟಿ ಸಂಭವವಿದೆ. ಕಿರು ಸಂಚಾರ ಯೋಗವಿದೆ. ದೇವತಾ ಪ್ರಾರ್ಥನೆ ಮಾಡುವಿರಿ. ಆರೋಗ್ಯದಲ್ಲಿ ಸುಧಾರಣೆ.

ವೃಷಭ: ನಿರೀಕ್ಷಿಸಿದ ಆದಾಯ ಕೈಗೆ ಬಂದು ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿಬರಲಿದೆ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ.

ಮಿಥುನ: ಉದಾಸೀನ ಪ್ರವೃತ್ತಿ ಬಿಟ್ಟು ಕೆಲಸದ ಕಡೆಗೆ ಗಮನಹರಿಸಿ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದುಕೊಳ್ಳಬೇಕು. ಅಪವಾದದ ಭೀತಿಯಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಧನಾಗಮನಕ್ಕೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದಂತಹ ಪ್ರಸ್ತಾಪಗಳು ಬರುವುದು. ಬಂಧು ವರ್ಗದವರ ಭೇಟಿ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ್ಯತೆ.

ಸಿಂಹ: ಕೃಷಿಕರಿಗೆ ಕೊಂಚ ನಿರಾಶಾದಾಯಕ ಪರಿಸ್ಥಿತಿ ಎದುರಾಗಬಹುದು. ಆದರೆ ತಾಳ್ಮೆಗೆಡಬೇಡಿ. ದೂರ ಸಂಚಾರಗಳಿಂದ ದೇಹಾಯಾಸವಾಗುವುದು. ವಾಹನ ಸವಾರರಿಗೆ ಅಪಘಾತದ ಭಯವಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.

 
ಕನ್ಯಾ: ನೆರೆಹೊರೆಯವರೊಂದಿಗೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿರಿ. ದುಡುಕಿನ ವರ್ತನೆ ಅಪವಾದಗಳಿಗೆ ಕಾರಣವಾದೀತು. ಕಷ್ಟದ ಸಮಯದಲ್ಲಿ ಹಿರಿಯರ ಸಮಯೋಚಿತ ಸಲಹೆ ಪಾಲಿಸಿದರೆ ಒಳಿತು.

ತುಲಾ: ಮಕ್ಕಳ ಆರೋಗ್ಯ ಹದತಪ್ಪಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಹಿತ ಶತ್ರುಗಳಿಂದ ದೂರವಿರುವುದು ಒಳ್ಳೆಯದು. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಆರ್ಥಿಕವಾಗಿ ಧನಾಗಮನವಿದ್ದಷ್ಟೇ ಖರ್ಚೂ ಮಾಡುವಿರಿ. ಸಂಗಾತಿಯ ಅಲಂಕಾರಿಕ ವಸ್ತುಗಳಿಗಾಗಿ ಧನವಿನಿಯೋಗ ಮಾಡುವಿರಿ. ಅಧಿಕಾರಿ ವರ್ಗದವರಿಂದ ಕಿರಿ ಕಿರಿಯಿದ್ದರೂ ನಿಮ್ಮ ಕೆಲಸಕ್ಕೆ ತೊಂದರೆಯಾಗದು.

ಧನು: ಮಕ್ಕಳ ವಿಚಾರದಲ್ಲಿ ಸಂತಸದ ವಿಚಾರವೊಂದನ್ನು ಕೇಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿವಹಿಸಿಕೊಳ್ಳಲೇಬೇಕಾದ ಸಮಯವಿದು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣವಿರಲಿ.

ಮಕರ: ಹಣಕಾಸಿನ ಮುಗ್ಗಟ್ಟಿನಿಂದ ಅಂದುಕೊಂಡ ಕೆಲಸಗಳು ಅರ್ಧಕ್ಕೆ ನಿಲ್ಲುವುದು. ದುಡಿಮೆಗೆ ತಕ್ಕ ಪ್ರತಿಫಲ ಸಿಗದೇ ಚಿಂತೆಯಾಗುವುದು. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು. ನಿಧಾನವಾಗಿ ಅಭಿವೃದ್ಧಿ ಕಾಣುವಿರಿ.

ಕುಂಭ: ಕುಟುಂಬದವರ ಸಹಕಾರವಿರುವುದರಿಂದ ಎಂತಹದ್ದೇ ಕಷ್ಟವಿದ್ದರೂ ಜಯಗಳಿಸುವಿರಿ. ಆದರೆ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ.

ಮೀನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದಲೇ ಮೋಸ ಹೋಗುವಿರಿ. ಲೆಕ್ಕ ಪತ್ರಗಳ ಬಗ್ಗೆ ಜಾಗ್ರತೆ ಅಗತ್ಯ. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಂಡುಬರಲಿದೆ. ಆರ್ಥಿಕವಾಗಿ ಸಮಾಧಾನಕರ ದಿನ. ದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments