Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 14 ಜೂನ್ 2019 (07:21 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಇಂದು ಸಂತಸದ ದಿನ ನಿಮ್ಮದಾಗಲಿದೆ. ಹಿರಿಯರ ಪ್ರವಾಸಕ್ಕೆ ಏರ್ಪಾಟು ಮಾಡುವಿರಿ. ಇಷ್ಟ ಮಿತ್ರರನ್ನು ಭೇಟಿಯಾಗುವಿರಿ. ಆರ್ಥಿಕವಾಗಿಯೂ ಧನಾಗಮನಕ್ಕೆ ಕೊರತೆಯಿರದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ವೃತ್ತಿ ಜೀವನದಲ್ಲಿ ಮುನ್ನಡೆಯಿರುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಆದರೆ ವಿದ್ಯುತ್ ನಿಂದ ಅಪಾಯವಾಗುವ ಸಂಭವವಿದೆ. ಎಚ್ಚರಿಕೆಯಿಂದಿರಬೇಕು. ವಾಹನ ಚಲಾಯಿಸುವಾಗ ಎಚ್ಚರಿಕೆ.

ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಆರ್ಥಿಕವಾಗಿ ಸಮಾಧಾನಕರ ದಿನ. ಸಾಹಿತ್ಯ ಕ್ಷೇತ್ರದಲ್ಲಿರುವವರು ಹೆಸರು, ಹಣ ಸಂಪಾದನೆ ಮಾಡಲಿದ್ದಾರೆ. ಆದರೆ ಚಾಡಿ ಮಾತುಗಳಿಂದ ದೂರವಿರಿ.

ಕರ್ಕಟಕ: ಮನೆಯಲ್ಲಿ ಶುಭ ಕಾರ್ಯ ನಡೆಸುವ ನಿಮಿತ್ತ ಹೆಚ್ಚಿನ ಓಡಾಟ, ಜವಾಬ್ಧಾರಿ ವಹಿಸಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿದ್ದವರಿಗೆ ಸ್ಥಾನಮಾನಗಳು ಹೆಚ್ಚುವುದು. ಆರ್ಥಿಕವಾಗಿ ಧನಾಗಮನಕ್ಕೆ ಏನೂ ಕೊರತೆಯಾಗದು. ಆದರೆ ಖರ್ಚಿನ ಬಗ್ಗೆ ಮಿತಿಯಿರಲಿ. ದೂರ ಸಂಚಾರ ಮಾಡಬೇಕಾಗಿಬರುತ್ತದೆ.

 
ಕನ್ಯಾ: ದೈವಾನುಗ್ರಹದಿಂದ ಕೆಲಸ ಕಾರ್ಯಗಳಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ಆದರೆ ವಿವಾಹಾದಿ ಪ್ರಯತ್ನಗಳಿಗೆ ಕೊಂಚ ಹಿನ್ನಡೆಯಾದರೂ ಪ್ರಯತ್ನ ಬಿಡಬೇಡಿ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ.

ತುಲಾ: ಆತ್ಮವಿಶ್ವಾಸದಿಂದ ಹೊಸ ಕೆಲಸಗಳಿಗೆ ಕೈ ಹಾಕುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರಕಲಿದೆ. ಕೌಟುಂಬಿಕವಾಗಿ ಮಕ್ಕಳ ಭವಿಷ್ಯದ ಚಿಂತೆಯಾಗುವುದು. ಹೆಂಡತಿಯ ಆಸೆ, ಆಕಾಂಕ್ಷಿಗಳಿಗೆ ಬೆಲೆ ಕೊಡಬೇಕಾಗುತ್ತದೆ.

ವೃಶ್ಚಿಕ: ವ್ಯಾಪಾರಿಗಳಿಗೆ ಲಾಭದಾಯಕ ದಿನವಿದು. ನಿರೀಕ್ಷಿತ ಲಾಭ ಗಳಿಸಬಹುದು. ಆದರೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು. ತಾಳ್ಮೆ ಅಗತ್ಯ.

ಧನು: ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಖಂಡಿತಾ ಫಲ ಸಿಗಲಿದೆ. ಆದರೆ ಹಿತಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರವಹಿಸಿ. ಸಂಚಾರದಿಂದ ಆರೋಗ್ಯ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ಮಕರ: ಯಾರೋ ಸಹಾಯಕ್ಕೆ ಬರುತ್ತಾರೆಂಬ ಪರಾವಲಂಬನೆ ಮನೋಭಾವ ಬಿಟ್ಟು, ನಿಮ್ಮ ಸ್ವಂತ ಬಲದಿಂದ ದುಡಿಯುವ ಕಡೆಗೆ ಗಮನಕೊಡಿ. ದೈವಾನುಕೂಲದಿಂದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಬೇಕು.

ಕುಂಭ: ಸ್ವಂತ ಉದ್ಯಮ ನಡೆಸುವವರಿಗೆ ಕೊಂಚ ನಷ್ಟದ ಭೀತಿಯಿದೆ. ಬಂಧು ಮಿತ್ರರಿಂದ ಚಾಡಿ ಮಾತು ಕೇಳಬಂದೀತು. ಎಲ್ಲದಕ್ಕೂ ಮೌನವೇ ಉತ್ತರವಾಗಿರಲಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ.

ಮೀನ: ಉದ್ಯೋಗದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಸಲು ಪ್ರಯತ್ನ ಮಾಡುವಿರಿ. ಧಾರ್ಮಿಕವಾಗಿ ನಾನಾ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ನಿರುದ್ಯೋಗಿಗಳು ಸ್ವ ಉದ್ಯಮ ನಡೆಸುವುದು ಸೂಕ್ತ. ದಿನದಂತ್ಯಕ್ಕೆ ಶುಭ ಸುದ್ದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

ಮುಂದಿನ ಸುದ್ದಿ
Show comments