Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 15 ಜೂನ್ 2019 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಪರೋಪಕಾರಿ, ಉದಾರಿ ಮನೋಭಾವದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವ ವ್ಯವಹಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಸಾಂಸಾರಿಕವಾಗಿ ಶಾಂತ ಪರಿಸ್ಥಿತಿಯಿರುತ್ತದೆ. ಸಂಗಾತಿಯಿಂದ ಸೂಕ್ತ ಸಲಹೆಗಳು ಸಿಗುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಆದರೆ ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಕಿರುಕುಳ ಎದುರಿಸಬೇಕಾದೀತು.

ಮಿಥುನ: ಹಣಕಾಸಿನ ಅಡಚಣೆಗಳು ಎದುರಾಗಲಿದ್ದು, ಕೆಲಸ ಕಾರ್ಯಗಳಲ್ಲಿ ವಿಳಂಬ ಗತಿ ತೋರಿಬರಲಿದೆ. ವಾಹನ ಚಲಾಯಿಸುವಾಗ ಅಪಘಾತದ ಭಯವಿದೆ. ವ್ಯಾಪಾರಿಗಳಿಗೆ ಕೊಂಚ ನಷ್ಟದ ಭೀತಿಯೂ ಇದೆ. ಎಚ್ಚರಿಕೆ ಅಗತ್ಯ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾಗುವುದು. ಆದರೆ ದೈವಾನುಕೂಲದಿಂದ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದ್ದು, ಅಂದುಕೊಂಡ ಕಾರ್ಯಗಳನ್ನು ನೆರವೇರಿಸುತ್ತೀರಿ.

ಸಿಂಹ: ಸಾಮಾಜಿಕವಾಗಿ ಜವಾಬ್ಧಾರಿಗಳು ಇದ್ದರೂ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಒಂದು ರೀತಿಯಲ್ಲಿ ರಾಜಯೋಗ ಇಂದು ನಿಮ್ಮದಾಗಲಿದೆ. ಕುಟುಂಬದವರೂ ನಿಮ್ಮ ಮಾತಿಗೆ ಬೆಲೆಕೊಡುವರು.

 
ಕನ್ಯಾ: ವೃತ್ತಿ ಜೀವನದಲ್ಲಿ ಕಿರಿ ಕಿರಿ ಮನಸ್ಸಿನ ನೆಮ್ಮದಿ ಹಾಳು ಮಾಡಲಿದೆ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಖರ್ಚು ವೆಚ್ಚಗಳು ಅಧಿಕವಾಗಲಿದೆ. ಆದರೆ ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ.

ತುಲಾ: ಆರ್ಥಿಕವಾಗಿ ನಿವ್ವಳ ಲಾಭ, ಪ್ರಗತಿ ಕಂಡುಬರಲಿದೆ. ಸಂಗಾತಿಗಾಗಿ ಚಿನ್ನಾಭರಣ ಖರೀದಿ ಮಾಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರುವುದು. ಆದರೆ ಆರೋಗ್ಯ ಹದಗೆಡುವ ಸಂಭವವಿದ್ದು, ಎಚ್ಚರಿಕೆ ಅಗತ್ಯ.

ವೃಶ್ಚಿಕ: ದುಡುಕಿನ ವರ್ತನೆ, ಮಾತಿನಿಂದ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಅವಿವಾಹಿತರಿಗೆ ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಂದ ಅವಕಾಶವನ್ನು ಬಳಸಿಕೊಳ್ಳುವುದು ಒಳ್ಳೆಯದು.

ಧನು: ಮಾತಿನಿಂದ ಮನೆ, ಮನ ಕೆಡದಂತೆ ಎಚ್ಚರಿಕೆ ವಹಿಸುವ ಜವಾಬ್ಧಾರಿ ನಿಮ್ಮದಾಗಿರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮಕರ: ನಾನಾ ಮಾರ್ಗಗಳಿಂದ ಧನ ಸಂಪಾದನೆ ಮಾಡಲಿದ್ದೀರಿ. ಬಾಕಿ ಹಣಗಳು ಪಾವತಿಯಾಗುವುದು. ವಾಹನ ಖರೀದಿಗೆ ಮುಂದಾಗುವಿರಿ. ನೂತನ ದಂಪತಿಗಳಿಗೆ ಸಂತಾನ ಫಲದ ಸೂಚನೆ ಸಿಗಲಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ತಾಳ್ಮೆಯೇ ನಿಮ್ಮ ಅಸ್ತ್ರವಾಗಬೇಕು. ಉದ್ದೇಶಿತ ಕಾರ್ಯದಲ್ಲಿ ವಿಳಂಬಗತಿ ತೋರಿಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ವ್ಯಾಪಾರಿಗಳು ವ್ಯವಹಾರದಲ್ಲಿ ನಷ್ಟವಾಗದಂತೆ ಎಚ್ಚರಿಕೆ ವಹಿಸಬೇಕು. ಋಣಾತ್ಮಕ ಚಿಂತನೆಗೆ ಅವಕಾಶ ಮಾಡಿಕೊಡದಿರಿ. ಕಷ್ಟದ ಸಮಯದಲ್ಲಿ ಮಹಿಳೆಯರಿಂದ ಸಹಾಯ ಸಿಗುವುದು. ಸಂಚಾರದಿಂದ ಕಾರ್ಯ ಸಿದ್ಧಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments