Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 17 ಜೂನ್ 2019 (07:24 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯ ಸಾಧನೆಗಾಗಿ ಅಧಿಕ ಓಡಾಟದಿಂದ ದೇಹಾಯಾಸವಾದೀತು. ಸಂಗಾತಿಯಿಂದ ಮನಸ್ಸಿಗೆ ಬೇಸರವಾಗಬಹುದು. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಆಲಸ್ಯ ಕಂಡುಬರಲಿದೆ.

ವೃಷಭ: ನಿರುದ್ಯೋಗಿಗಳಿಗೆ ಬಹುದಿನಗಳಿಂದ ಕಾಯುತ್ತಿದ್ದ ಉದ್ಯೋಗಕ್ಕೆ ಸಂದರ್ಶನದ ಕರೆ ಬರಲಿದೆ. ಕಷ್ಟದ ಸಮಯದಲ್ಲಿ ಹಿರಿಯರ ಸಲಹೆಗಳು ಫಲ ಕೊಡುವುದು. ದೇವತಾ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಮಿಥುನ: ದಾಯಾದಿಗಳೊಂದಿಗೆ ಆಸ್ತಿ ಕುರಿತಾಗಿ ವಾದ ವಿವಾದಗಳಾಗಬಹುದು. ಹಿರಿಯರ ಮಧ್ಯಸ್ಥಿಕೆ ವಹಿಸಬೇಕಾಗುತ್ತದೆ. ಉದ್ಯೋಗಾರ್ಥಿಗಳು ವಿದೇಶ ಪ್ರಯಾಣ ಮಾಡುವರು. ಆರ್ಥಿಕವಾಗಿ ಖರ್ಚುಗಳು ಅಧಿಕವಾಗಲಿದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡ ಕಂಡುಬರಲಿದೆ. ಹಾಗಿದ್ದರೂ ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಕೌಟುಂಬಿಕವಾಗಿ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

ಸಿಂಹ: ತಾತ್ಕಾಲಿಕ ಹುದ್ದೆಯಲ್ಲಿದ್ದವರಿಗೆ ಉದ್ಯೋಗ ಖಾಯಂ ಆಗುವ ಯೋಗವಿದೆ. ಆದರೆ ನಿಮ್ಮನ್ನು ಕಂಡರಾಗದವರ ಕೇಡುದೃಷ್ಟಿ ನಿಮ್ಮ ಮೇಲಿರಲಿದ್ದು, ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಧನಾಗಮನವಾದಷ್ಟೇ ಖರ್ಚೂ ಇರಲಿದೆ.

 
ಕನ್ಯಾ: ಕೌಟುಂಬಿಕವಾಗಿ ಮಕ್ಕಳೊಂದಿಗೆ ಭಿನ್ನಾಭಿಪ್ರಾಯ ತೋರಿಬರಲಿದೆ. ಮನಸ್ಸಿನ ನೆಮ್ಮದಿ ಹಾಳುಮಾಡುವಂತಹ ಘಟನೆಗಳು ನಡೆಯಬಹುದು. ತಾಳ್ಮೆಯಿಂದಿರುವುದು ಅಗತ್ಯ. ದೇವತಾ ಪ್ರಾರ್ಥನೆ ಮಾಡಿದರೆ ನೆಮ್ಮದಿ.

ತುಲಾ: ಅಧಿಕಾರಿ ವರ್ಗದವರಿಂದ ಕಿರಿ ಕಿರಿ ತಪ್ಪದು. ಉದ್ಯೋಗ, ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ. ಸಂಗಾತಿಯ ಸಮಯೋಚಿತ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ವೃಶ್ಚಿಕ: ಅವಿವಾಹಿತರಿಗೆ ಯೋಗ್ಯ ವಿವಾಹ ಪ್ರಸ್ತಾಪಗಳು ಬರಲಿವೆ. ಕೈಗೊಂಡ ಕಾರ್ಯಗಳಿಗೆ ಕೆಲವೊಂದು ವಿಘ್ನಗಳು ತೋರಿಬಂದೀತು. ಆದರೂ ತಾಳ್ಮೆಗೆಡಬಾರದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ಅಂದುಕೊಂಡ ಕಾರ್ಯಗಳು ಸುಗಮವಾಗಿ ನೆರವೇರುವುದು. ಆದರೆ ಋಣಾತ್ಮಕ ಅಂಶಗಳಿಗೆ ಬೆಲೆಕೊಡಬೇಡಿ. ಆರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ಸಂಗಾತಿಯ ಇಷ್ಟಗಳಿಗೆ ಕಿವಿಗೊಡಬೇಕಾಗುತ್ತದೆ.

ಮಕರ: ವೃತ್ತಿರಂಗದಲ್ಲಿ ಅಭಿವೃದ್ಧಿ, ಮುನ್ನಡೆಯಿರಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶವಿರಲಿದೆ. ಆದರೆ ಮನೆಯಲ್ಲಿ ಕಿರಿ ಕಿರಿಯಾಗುವಂತಹ ಪ್ರಸಂಗಗಳು ಎದುರಾಗಬಹುದು.

ಕುಂಭ: ಹಣ ಸಂಪಾದನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ವಿದ್ಯಾರ್ಜನೆಗೆ ಕೆಲವೊಂದು ತೊಡಕುಗಳು ಎದುರಾಗಬಹುದು. ಆದರೆ ಕಷ್ಟದ ಸಂದರ್ಭದಲ್ಲಿ ಮಿತ್ರರಿಂದ ಸಹಾಯ ದೊರಕಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಮೀನ: ಕಷ್ಟಪಟ್ಟು ದುಡಿದರೆ ಅದಕ್ಕೆ ತಕ್ಕ ಪ್ರತಿಫಲ ಸಿಗುವುದು. ಅವಿವಾಹಿತರಿಗೆ ವಿವಾಹಕ್ಕೆ ಕೆಲವೊಂದು ಅಡಚಣೆಗಳು ಎದುರಾದೀತು. ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ದೆಶೆ ತಿರುಗಿಬಿದ್ದರೆ ಎಂಥಾ ಕೆಟ್ಟ ಪರಿಣಾಮವಾಗುತ್ತದೆ ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments