ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 19 ಜೂನ್ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ವೃತ್ತಿ ಜೀವನದಲ್ಲಿ ಬಿಡುವಿಲ್ಲದ ದುಡಿಮೆಯಿಂದಾಗಿ ಉದ್ಯೋಗ ಬದಲಾವಣೆಗೆ ಮನಸ್ಸು ಮಾಡುವಿರಿ. ಆದರೆ ಆತುರದ ನಿರ್ಧಾರ ಬೇಡ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಬಹುದು.

ವೃಷಭ: ಕಷ್ಟದ ಸಮಯದಲ್ಲಿ ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗುವುದು. ಮನೆಯಲ್ಲಿ ಶುಭ ಕಾರ್ಯಗಳ ಸಿದ್ಧತೆ ಮಾಡುವಿರಿ.

ಮಿಥುನ: ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಹೀಗಾಗಿ ಕೈಗೊಂಡ ಕಾರ್ಯಗಳಲ್ಲಿ ಜಯ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಮುನ್ನಡೆ ಯೋಗವಿದೆ. ಆದರೆ ಸರ್ಕಾರಿ ಕೆಲಸಗಳಲ್ಲಿ ಅಡೆತಡೆಗಳುಂಟಾಗುವ ಸಾಧ್ಯತೆಯಿದೆ.

ಕರ್ಕಟಕ: ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿರೀಕ್ಷಿತ ಜಯ ನಿಮ್ಮದಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಓಡಾಟ ನಡೆಸಬೇಕಾಗುತ್ತದೆ. ಮನೆ, ಆಸ್ತಿ ಖರೀದಿ ವಿಚಾರದಲ್ಲಿ ಲಾಭವಾಗಲಿದೆ.

ಸಿಂಹ: ಕೌಟುಂಬಿಕವಾಗಿ ನೀವು ಇಂದು ಕೈಗೊಳ್ಳುವ ಕೆಲಸಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬಹುದು. ದುಡುಕಿನ ವರ್ತನೆ ತೋರದಿರಿ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

 
ಕನ್ಯಾ: ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡುವುದು ಅಗತ್ಯ. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು.

ತುಲಾ: ಸಾಂಸಾರಿಕವಾಗಿ ಸಂತೋಷದಾಯಕ ದಿನಗಳಿವು. ಮಕ್ಕಳಿಂದ ಮನಸ್ಸಿಗೆ ಖುಷಿಕೊಡುವ ವಿಚಾರಗಳನ್ನು ಆಲಿಸುವಿರಿ. ಗರ್ಭಿಣಿಯರು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು, ಆದರೆ ಖರ್ಚಿನ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಋಣಾತ್ಮಕ ಚಿಂತನೆಗಳಿಂದ ಕೆಲಸದ ಮೇಲೆ ಆಲಸ್ಯತನ ತೋರುವಿರಿ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ವ್ಯಾಪಾರಿಗಳು ಕೊಂಚ ನಷ್ಟ ಅನುಭವಿಸುವರು. ತಾಳ್ಮೆ ಅಗತ್ಯ.

ಧನು: ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮೇಲುಗೈ ಸಾಧಿಸುವಿರಿ. ವಾಹನ ಖರೀದಿಗೆ ಮುಂದಾಗುವಿರಿ. ದೂರ ಸಂಚಾರ ಕೈಗೊಳ್ಳಬೇಕಾದ ಅನಿವಾರ್ಯತೆ ಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗಿ, ನಿಧಾನವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ದೇಹಾರೋಗ್ಯದ ಬಗ್ಗೆ ಚಿಂತೆಯಾಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ಜೀವನ ಮಾಡಿ.

ಕುಂಭ: ಅತಿ ಆಸೆ ಪಡಲು ಹೋದರೆ ಕೇಡು ತಪ್ಪಿದ್ದಲ್ಲ ಎಂಬುದನ್ನು ಮರೆಯದಿರಿ. ಮಹಿಳೆಯರಿಂದ ಅಪವಾದದ ಭೀತಿಯಿದೆ. ಸಾಂಸಾರಿಕವಾಗಿ ಹೆಚ್ಚಿನ ಹೊಂದಾಣಿಕೆ ಅಗತ್ಯ. ಧನಾಗಮನಕ್ಕೆ ನಾನಾ ಮಾರ್ಗ ಹುಡುಕುವಿರಿ.

ಮೀನ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಆದರೆ ನಿಮ್ಮ ಎಲ್ಲಾ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ವೃತ್ತಿರಂಗದಲ್ಲಿ ಯಶಸ್ಸು ಗಳಿಸುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನದಿಂದ ಖುಷಿಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಮುಂದಿನ ಸುದ್ದಿ
Show comments