ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 20 ಜೂನ್ 2019 (07:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಬಿಡುವಿಲ್ಲದೇ ಕೆಲಸಗಳಿರಲಿವೆ. ಆದರೆ ಸಂಗಾತಿಯಿಂದ ಸಹಕಾರ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಹಲವು ಅಡೆತಡೆಗಳು ತೋರಿಬರಲಿವೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಆರ್ಥಿಕವಾಗಿ ಇದುವರೆಗೆ ಇದ್ದ ಅಡಚಣೆಗಳು ನಿವಾರಣೆಯಾಗಿ ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಸಾಲಗಾರರಿಂದ ಮುಕ್ತಿ ಸಿಗಲಿದೆ. ನಿಮ್ಮ ಕೆಲಸಕ್ಕೆ ದೇವರ ಅನುಗ್ರಹವಿರಲಿದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಮಾಡಬೇಕಾಗುತ್ತದೆ. ವ್ಯಾಪಾರಿಗಳು ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಬೇಕು.

ಕರ್ಕಟಕ: ವ್ಯಾಪಾರ ವಹಿವಾಟಿನಲ್ಲಿ ಲಾಭ ಗಳಿಸುವಿರಿ. ಆದರೆ ಮೈಮೇಲೆ ಎಚ್ಚರಿಕೆ ಕಳೆದುಕೊಂಡು ಕೆಲಸ ಮಾಡಿದರೆ ಅಪಾಯ ತಪ್ಪಿದ್ದಲ್ಲ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗಲಿದೆ. ತಾಳ್ಮೆಯಿರಲಿ.

ಸಿಂಹ: ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ಹಿತಶತ್ರುಗಳಿಂದ ವಂಚನೆಗೊಳಗಾದಂತೆ ಎಚ್ಚರಿಕೆ ವಹಿಸಬೇಕು. ಕಷ್ಟದ ಸಮಯದಲ್ಲಿ ಮಿತ್ರರಿಂದ ಸಹಾಯ ಸಿಗುವುದು.

 
ಕನ್ಯಾ: ವೃತ್ತಿ ರಂಗದಲ್ಲಿ ಬಿಡುವಿಲ್ಲದೇ ದುಡಿದು ದೇಹ ಹೈರಾಣಾಗುವುದು. ಸಾಂಸಾರಿಕವಾಗಿ ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಚಿಂತೆಯಾಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ತುಲಾ: ನೀವು ಕಷ್ಟಪಟ್ಟಿದ್ದಕ್ಕೆ ತಕ್ಕ ಪ್ರತಿಫಲ ಖಂಡಿತಾ ಪಡೆಯುವಿರಿ. ಆರಂಭದಲ್ಲಿ ಕೊಂಚ ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದೇ ದಾಯಾದಿಗಳೊಂದಿಗೆ ಮನಸ್ತಾಪಗಳು ದೂರವಾಗಲಿದೆ.

ವೃಶ್ಚಿಕ: ವಿವಾಹ ಬೇಡವೆಂದು ಕೂತಿದ್ದವರಿಗೆ ಅನಿರೀಕ್ಷಿತವಾಗಿ ಕಂಕಣ ಭಾಗ್ಯ ಒದಗಿಬರಲಿದೆ. ಆದರೆ ಅನವಶ್ಯಕ ವಿವಾದಗಳಿಂದ ದೂರಿವಿರಿ. ದೂರ ಪ್ರಯಾಣ ಮಾಡುವ ಸಾಧ್ಯತೆಯಿದ್ದು, ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಧನು: ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಖರ್ಚು ವೆಚ್ಚಗಳು ಅಧಿಕವಾದೀತು. ಆದರೆ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಸರ್ಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯುವಿರಿ.

ಮಕರ: ಆರ್ಥಿಕವಾಗಿ ನಿಧಾನವಾಗಿ ಚೇತರಿಕೆ ಕಂಡುಬಂದು ಮನೋಕಾಮನೆಗಳನ್ನು ಪೂರೈಸುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಸ್ವ ಉದ್ಯಮಿಗಳಿಗೆ ಕೊಂಚ ನಷ್ಟವಾದೀತು. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ.

ಕುಂಭ: ಕಷ್ಟಗಳು ಬಂದಾಗ ಯಾರೂ ಸಹಾಯ ಮಾಡುತ್ತಿಲ್ಲ ಎಂದು ಕೊರಗುವಿರಿ. ಆತ್ಮಸ್ಥೈರ್ಯದಿಂದ ಎದುರಿಸಿ. ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನೀವಂದುಕೊಂಡಂತೆ ನಡೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ನಿರುದ್ಯೋಗಿಗಳು ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಸ್ವೀಕರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಮೇಲ್ವರ್ಗದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಮುಂದಿನ ಸುದ್ದಿ
Show comments