Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 24 ಜೂನ್ 2019 (08:58 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

 

ಮೇಷ: ಕಿರು ಸಂಚಾರದ ಯೋಗವಿದ್ದು, ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ನೌಕರ ವರ್ಗದವರಿಗೆ ಕಾರ್ಯದೊತ್ತಡವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಆರೋಗ್ಯದಲ್ಲಿ ಏರುಪೇರಾಗುವುದು.

 

ವೃಷಭ: ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭವಾಗಲಿದೆ. ನೀರಿಗಾಗಿ ಪರದಾಟ ತಪ್ಪುವುದು. ಆದಾಯಕ್ಕೆ ಕೊರತೆಯಾಗದು. ಆದರೆ ಖರ್ಚುಗಳ ಬಗ್ಗೆ ಮಿತಿಯಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿವೆ.

 

ಮಿಥುನ: ಹಿರಿಯರ ಸಲಹೆಗಳಿಗೆ ಕಿವಿಗೊಟ್ಟು ಹೊಸ ವ್ಯವಹಾರಗಳಿಗೆ ಕೈ ಹಾಕುವುದು ಒಳಿತು. ಬಂಧು ವರ್ಗದವರಿಂದ ಚಾಡಿ ಮಾತು ಕೇಳಿಬಂದೀತು. ಸಂಗಾತಿಯಿಲ್ಲದೇ ವಿರಹ ವೇದನೆ ಅನುಭವಿಸುವಿರಿ.

 

ಕರ್ಕಟಕ: ಬೇಡದ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋದರೆ ಅಪವಾದ ಮೈಮೇಲೆಳೆದುಕೊಳ್ಳಬೇಕಾಗುತ್ತದೆ. ವೃತ್ತಿ ರಂಗದಲ್ಲಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

 

ಸಿಂಹ: ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಮನೆಯಲ್ಲಿ ಸಹೋದರರೊಂದಿಗೆ ಕಲಹವಾದೀತು. ತಾಳ್ಮೆಯಿಂದ ವರ್ತಿಸಬೇಕು. ವಾಹನ ಖರೀದಿ ಯೋಗವಿದೆ. ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ.

 

 

ಕನ್ಯಾ: ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಸಾಕಷ್ಟು ಧನವಿನಿಯೋಗ ಮಾಡಬೇಕಾಗಿ ಬರುತ್ತದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ಶುಭವಾಗಲಿದೆ.

 

ತುಲಾ: ಕಷ್ಟದ ಸಮಯದಲ್ಲಿ ಆಪ್ತರ ಸಮಯೋಚಿತ ಸಲಹೆ ಉಪಯೋಗಕ್ಕೆ ಬರುವುದು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಮನೋರಂಜನೆಗಾಗಿ ಹೆಚ್ಚಿನ ಧನವ್ಯಯ ಮಾಡುವಿರಿ.

 

ವೃಶ್ಚಿಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯ ಕಂಡುಬಂದೀತು. ನೆರೆಹೊರೆಯವರೊಂದಿಗೆ ವಾಗ್ವಾದವಾಗುವ ಸಾಧ್ಯತೆಯಿದೆ, ಎಚ್ಚರಿಕೆಯಿರಲಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

 

ಧನು: ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಾಗುವುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಆದಾಯ ಪತ್ರಗಳನ್ನು ಎಚ್ಚರಿಕೆಯಿಂದ ಎತ್ತಿಡಿ. ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ.

 

ಮಕರ: ಉನ್ನತ ನೌಕರ ವರ್ಗದವರಿಗೆ ಬಡ್ತಿ ಯೋಗವಿದೆ. ದಾಯಾದಿಗಳೊಂದಿಗಿನ ಆಸ್ತಿ ಕಲಹ ಕೊನೆಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿಬರಲಿದೆ.

 

ಕುಂಭ: ಕೋಪದ ಕೈಗೆ ಬುದ್ಧಿಕೊಟ್ಟು ದುಡುಕಿನ ನಿರ್ಧಾರ ಕೈಗೊಳ್ಳಲು ಹೋಗಬೇಡಿ. ಆದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

 

ಮೀನ: ಹಿರಿಯರ ಸಲಹೆಗಳು ಪಥ್ಯವಾಗದೇ ಇದ್ದರೂ ಅದನ್ನು ಪಾಲಿಸಿದರೆ ಒಳಿತಾಗಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.


Share this Story:

Follow Webdunia kannada

ಮುಂದಿನ ಸುದ್ದಿ

ರತ್ನಗಳನ್ನು ಧರಿಸುವಾಗ ಈ ನಿಯಮಗಳನ್ನು ಅನುಸರಿಸುವುದು ಅತ್ಯಗತ್ಯ