Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 27 ಜೂನ್ 2019 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ಸಂಗಾತಿಯ ಆಸೆ ಆಕಾಂಕ್ಷೆಗಳನ್ನು ಪೂರೈಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಹಳೆಯ ಸಮಸ್ಯೆಗಳು ಮತ್ತೆ ಎದುರಾಗಿ ಸಂಕಷ್ಟಕ್ಕೀಡಾಗುವಿರಿ. ಹೊಸ ವಸ್ತುಗಳ ಖರೀದಿಗೆ ಮುಂದಾಗುವಿರಿ. ಕೌಟುಂಬಿಕ ಸಮಸ್ಯೆಗಳು ನಿವಾರಣೆಯಾಗಲಿವೆ.

ವೃಷಭ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಸಂಕಷ್ಟದ ಸಮಯದಲ್ಲಿ ಆರ್ಥಿಕವಾಗಿ ಮಿತ್ರರಿಂದ ಸಹಾಯ ದೊರಕಲಿದೆ. ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಆರ್ಥಿಕ ಮುಗ್ಗಟ್ಟು ಎದುರಾಗುವುದು. ಕೃಷಿಕರಿಗೆ ಕೊಂಚ ನಿರಾಳವಾಗಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿಬರಲಿದೆ.

ಕರ್ಕಟಕ: ಹಿರಿಯರೊಂದಿಗೆ ಮನಸ್ತಾಪಗಳಾಗುವ ಸಾಧ್ಯತೆಯಿದೆ. ಎಚ್ಚರಿಕೆಯಿಂದ ವ್ಯವಹರಿಸಿ. ಮೇಲಧಿಕಾರಿಗಳಿಂದ ಕಿರಿ ಕಿರಿ ಎದುರಾದರೂ ಬಡ್ತಿಗೆ ತೊಂದರೆಯಾಗದು. ಹೊಸ ವಾಹನ, ಭೂಮಿ ಖರೀದಿಗೆ ಮುಂದಾಗುವಿರಿ.

ಸಿಂಹ: ಕಾರ್ಯಕ್ಷೇತ್ರದಲ್ಲಿ ಹಲವು ಅಡೆತಡೆಗಳು ತೋರಿಬಂದಾವು. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭವಾಗಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಡಬೇಕು. ದಿನದಂತ್ಯಕ್ಕೆ ಶುಭ ಸುದ್ದಿ.

 
ಕನ್ಯಾ: ಸಂಗಾತಿಯ ಅಲಂಕಾರಿಕ ವಸ್ತುಗಳಿಗಾಗಿ ಅಧಿಕ ಖರ್ಚು ವೆಚ್ಚಗಳಾಗುವುದು. ದುಡುಕು ವರ್ತನೆಯಿಂದ ಅಪಾಯ ಮೈಮೇಲೆಳೆದುಕೊಳ್ಳಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ತುಲಾ: ರಾಜಕೀಯವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಸಮಾಜದಲ್ಲಿ ಗೌರವ ಸಂಪಾದಿಸಲಿದ್ದೀರಿ. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸುವ ಸಂಬಂಧ ಕೂಡಿಬರಲಿದೆ. ದಾಂಪತ್ಯ ಜೀವನದಲ್ಲಿ ಸಂತೋಷ ಕಾಣುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

ವೃಶ್ಚಿಕ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣದ ಭಾಗ್ಯವಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಸಂತಾನ ಹೀನ ದಂಪತಿಗಳಿಗೆ ಶುಭ ಸೂಚನೆ ದೊರಕಲಿದೆ. ಆದಾಯಕ್ಕೆ ಕತ್ತರಿ ಬೀಳಬಹುದು. ಆದರೆ ಸಾಲ ಮಾಡಲು ಹೋಗಬೇಡಿ.

ಧನು: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಗಳು ಎದುರಾಗುವುದು. ಇದು ನಿಮ್ಮನ್ನು ಚಿಂತೆಗೀಡುಮಾಡಲಿದೆ. ಸಾಮಾಜಿಕವಾಗಿ ನೀವು ಮಾಡುವ ಕೆಲವೊಂದು ಕೆಲಸಗಳಿಂದ ಸಂಕಷ್ಟಕ್ಕೀಡಾಗಬೇಕಾಗುತ್ತದೆ. ತಾಳ್ಮೆಯಿಂದ ವ್ಯವಹರಿಸಿ.

ಮಕರ: ದೂರ ಸಂಚಾರದಿಂದ ಕಾರ್ಯ ಸಿದ್ಧಿ. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಶುಭ ಮಂಗಲ ಕಾರ್ಯ ನಡೆಸಲು ಸಕಾಲ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕುಂಭ: ಎಂದೋ ಕಲಿತ ವಿದ್ಯೆ ಇಂದು ಉಪಯೋಗಕ್ಕೆ ಬರಲಿದೆ. ಸಂಕಷ್ಟದ ಸಮಯದಲ್ಲಿ ನಿಮ್ಮ ಆತ್ಮಸ್ಥೈರ್ಯದಿಂದ ಮೇಲೇಳುವಿರಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಆದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ.

ಮೀನ: ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಸಾಂಸಾರಿಕವಾಗಿ ಸಹನೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಮಕ್ಕಳ ಭವಿಷ್ಯ ರೂಪಿಸಲು ಸಹಾಯ ಮಾಡುವಿರಿ. ಹೊಸ ಕೆಲಸಗಳಿಗೆ ಧನವಿನಿಯೋಗ ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಸಿಂಪಲ್ ಆಗಿ ಭೀಮನ ಅಮವಾಸ್ಯೆ ಪೂಜೆ ಮಾಡುವುದು ಹೇಗೆ

ಮಂಗಳವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments