Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 30 ಜೂನ್ 2019 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ್ಯತೆ. ಖರ್ಚಿನ ಬಗ್ಗೆ ಮಿತಿಯಿರಲಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಕೊಡಬೇಕಾಗುವುದು.

ವೃಷಭ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಂಡುಬರುವುದು. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಬೇಕು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಬರಬಹುದು.

ಮಿಥುನ: ಸ್ವ ಉದ್ಯೋಗಿಗಳಿಗೆ ನಿವ್ವಳ ಲಾಭ ಸಿಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಶುಭ ದಿನ. ಅನಿರೀಕ್ಷಿತವಾಹಿ ಹಳೆಯ ಮಿತ್ರರನ್ನು ಭೇಟಿಯಾಗುವಿರಿ. ದೇವಾಲಯಗಳಿಗೆ ಭೇಟಿ ಕೊಡುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಮನೆಗೆ ಸಂಬಂಧಿಸಿದ ಕೆಲಸ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ಅವಿವಾಹಿತರು ಮನಸ್ಸಿಗೆ ಒಪ್ಪುವ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಸ್ಥಾನ ಮಾನ ಹೆಚ್ಚಳವಾಗಲಿದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಕೊರತೆ ಎದುರಾಗಬಹುದು. ತಾಳ್ಮೆಯಿಂದ ನಿಭಾಯಿಸಬೇಕು. ಆರ್ಥಿಕವಾಗಿ ಚೇತರಿಕೆ ಕಾಣುವಿರಿ.

 
ಕನ್ಯಾ: ಯಾರನ್ನೂ ಅತಿಯಾಗಿ ನಂಬಲು ಹೋಗಬೇಡಿ. ಅತಿಯಾದ ವಿಶ್ವಾಸ ದುರುಪಯೋಗಕ್ಕೆ ಕಾರಣವಾದೀತು. ದೇವತಾ ಕಾರ್ಯಗಳನ್ನು ನೆರವೇರಿಸುವಿರಿ. ಯಾವುದೇ ಕೆಲಸಕ್ಕೆ ಮೊದಲು ಹಿರಿಯರ ಸಲಹೆ ಪಡೆಯಿರಿ.

ತುಲಾ: ಸಾಲ ಪಾವತಿ ಚಿಂತೆ ಕಾಡುವುದು. ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಕಷ್ಟದ ಸಮಯದಲ್ಲಿ ಬಂಧು ಮಿತ್ರರಿಂದ ಸಹಾಯವಾಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ಸಾಂಸಾರಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಹೊಸ ವಸ್ತುಗಳ ಖರೀದಿಗೆ ಮುಂದಾಗುವಿರಿ. ಆದರೆ ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಬಂದಾವು. ಎಚ್ಚರಿಕೆಯಿರಲಿ.

ಧನು: ಸಹೋದರರೊಂದಿಗೆ ಆಸ್ತಿ ವಿಚಾರಕ್ಕೆ ಕಿರಿ ಕಿರಿಯಾಗಬಹುದು. ಆದರೆ ವೃತ್ತಿ ರಂಗದಲ್ಲಿ ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಾಗದು. ಸಂಗಾತಿಯ ಮಾತಿಗೆ ಕಿವಿಗೊಡಿ.

ಮಕರ: ಸಾಮಾಜಿಕವಾಗಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಸೂಚಕ ಫಲ ಕಂಡುಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಯೋಗವಿದೆ.

ಕುಂಭ: ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಚಿಂತನೆ ನಡೆಸುವರು. ಅವಿವಾಹಿತರು ವಿವಾಹ ಪ್ರಯತ್ನ ನಡೆಸಲು ಸಕಾಲ. ಸಾಧು ಸಂತರ ಭೇಟಿಯಾಗುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ.

ಮೀನ: ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ದಾಯಾದಿಗಳೊಂದಿಗಿನ ಆಸ್ತಿ ವಿವಾದಕ್ಕೆ ಹಿರಿಯರ ಮಧ್ಯಸ್ಥಿಕೆಯಲ್ಲಿ ಅಂತ್ಯ ಹಾಡುವಿರಿ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ದೇವತಾ ಪ್ರಾರ್ಥನೆಯಿಂದ ಶುಭ ಫಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕುಜ ದೋಷವಿದ್ದವರು ಇಂದು ಈ ಅಷ್ಟೋತ್ತರ ಪಠಿಸಿ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments