ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 1 ಜುಲೈ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಗತ್ಯವಾಗಿ ಮಾನಸಿಕ ನೆಮ್ಮದಿಯನ್ನು ಹಾಳುಮಾಡಿಕೊಳ್ಳುವಿರಿ. ಇದರಿಂದ ದೈಹಿಕ ಆರೋಗ್ಯವೂ ಹಾಳಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಎಂದಿನಂತೆ ಕಾರ್ಯದೊತ್ತಡವಿರುವುದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು.

ವೃಷಭ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಮನಸ್ಸಿಗೆ ಸಂತಸ ನೀಡುವುದು.

ಮಿಥುನ: ಉದರ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ತಲೆದೋರಲಿವೆ. ಆರ್ಥಿಕವಾಗಿ ಧನಾಗಮನವಾದಷ್ಟೇ ಖರ್ಚೂ ಇರಲಿದೆ. ಸ್ವ ಉದ್ಯೋಗಿಗಳಿಗೆ ಲಾಭವಾಗುವುದು. ದೇವತಾ ಪ್ರಾರ್ಥನೆ ಮಾಡಿರಿ.

ಕರ್ಕಟಕ: ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚುವೆಚ್ಚಗಳು ತಲೆದೋರಿ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗುವಿರಿ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ.

ಸಿಂಹ: ಸಾಲ ಮರುಪಾವತಿ ಚಿಂತೆಗೆ ಕಾರಣವಾಗುವುದು. ಇನ್ನೊಬ್ಬರ ಕೆಲಸಗಳಿಗೆ ತಲೆತೂರಿಸಲು ಹೋದರೆ ಅನಗತ್ಯ ತೊಂದರೆಗೆ ಸಿಲುಕಿಕೊಳ್ಳಬೇಕಾಗಬಹುದು. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.

 
ಕನ್ಯಾ: ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಕೋರ್ಟು ಕಚೇರಿ ಕೆಲಸಗಳಲ್ಲಿ ಜಯ ಸಿಗುವುದು. ಸಾಲ ಪಾವತಿ ಚಿಂತೆಯಾಗುವುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ತುಲಾ: ಕಚೇರಿ ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದೇ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಶ್ಚಿಕ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗಲಿವೆ. ನಿರುದ್ಯೋಗಿಗಳು ಉದ್ಯೋಗ ಅರಸಲು ದೂರ ಸಂಚಾರ ಮಾಡಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಸಿಗಲಿದೆ.

ಧನು: ಅನಗತ್ಯವಾಗಿ ಮಕ್ಕಳ ವಿಚಾರದಲ್ಲಿ ಮೂಗು ತೂರಿಸಲು ಹೋದರೆ ನಿಷ್ಠುರಕ್ಕೆ ಕಾರಣರಾಗುವಿರಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇರುವುದು.

ಮಕರ: ಕಷ್ಟದ ಸಮಯದಲ್ಲಿ ಸನ್ಮಿತ್ರರ ನೆರವು ಸಿಗಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಟು ಮಾಡುವಿರಿ. ಆರ್ಥಿಕವಾಗಿ ಖರ್ಚಿನ ಬಗ್ಗೆ ಮಿತಿಯಿರಲಿ.

ಮೀನ: ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವ ಸಂಬಂಧಗಳು ಬರುವುದಾದರೂ ಕೊನೆಯ ಕ್ಷಣದಲ್ಲಿ ಕೈ ತಪ್ಪಬಹುದು. ಕುಲದೇವರ ಪ್ರಾರ್ಥನೆ ಮಾಡಿ. ದೂರ ಸಂಚಾರದಿಂದ ಕಾರ್ಯಪ್ರಾಪ್ತಿಯಾಗುವುದು. ಆರೋಗ್ಯದಲ್ಲಿ ಸುಧಾರಣೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments