Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 5 ಜುಲೈ 2019 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹೊಸ ವ್ಯವಹಾರಗಳಲ್ಲಿ ವಂಚನೆಗೊಳಗಾಗುವ ಭೀತಿಯಿದೆ, ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಆರೋಗ್ಯದಲ್ಲಿ ಸುಧಾರಣೆ.

ವೃಷಭ: ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಬೇಕಾದರೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಕೃಷಿಕರ ಬವಣೆಗೆ ಕೊನೆಯಿರಲ್ಲ. ಆರ್ಥಿಕವಾಗಿ ಧನಾಗಮನಕ್ಕೆ ಇತರೆ ಮಾರ್ಗಗಳ ಬಗ್ಗೆ ಯೋಚನೆ ಮಾಡುವಿರಿ.

ಮಿಥುನ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗುತ್ತವೆ. ಇದರಿಂದ ಕೆಲಸ ಕಾರ್ಯಗಳು ಅಂದುಕೊಂಡ ರೀತಿಯಲ್ಲಿ ಸಾಗದು. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಕೊಡಬೇಕಾಗುತ್ತದೆ.

ಕರ್ಕಟಕ: ಮನೆಯಲ್ಲಿ ಸಂಗಾತಿ ಜತೆಗೆ ಕೌಟುಂಬಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಚಾರದಲ್ಲಿ ಮನಸ್ತಾಪವಾಗಬಹುದು. ಬಂಧು ಮಿತ್ರರಿಂದ ಚಾಡಿ ಮಾತು ಕೇಳಬೇಕಾಗಬಹುದು. ನೂತನ ದಂಪತಿಗಳಿಗೆ ಶುಭ ದಿನ.

ಸಿಂಹ: ಹಣಕಾಸಿನ ತೊಂದರೆಯಿದ್ದರೂ ಅಂದುಕೊಂಡ ಕಾರ್ಯಗಳನ್ನು ಸುಲಲಿತವಾಗಿ ನೆರವೇರಿಸುವಿರಿ. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಉದ್ಯೋಗದಲ್ಲಿ ಮುನ್ನಡೆ.

 
ಕನ್ಯಾ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ. ಸಾಲ ಮರುಪಾವತಿ ಚಿಂತೆ ಕಾಡುವುದು. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಾಗುವಿರಿ.

ತುಲಾ: ಆಲಸ್ಯತನ ಎನ್ನುವುದು ಕೆಲಸ ಹಾಳು ಮಾಡುತ್ತದೆ ಎಂದು ನೆನಪಿರಲಿ. ಉದಾಸೀನ ಪ್ರವೃತ್ತಿಯಿಂದ ಸದವಕಾಶಗಳನ್ನು ಕಳೆದುಕೊಳ್ಳಬೇಡಿ. ಶೀತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಬಹುದು.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಮಾಧಾನಕ್ಕೆ ಕಾರಣರಾಗುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿನ್ನಡೆಯಾಗಲಿದೆ. ಮನೆಗೆ ಬೇಕಾದ ವಸ್ತುಗಳಿಗೆ ಖರ್ಚುವೆಚ್ಚ ಮಾಡುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸುವ ಬಗ್ಗೆ ಚಿಂತನೆ ನಡೆಸುವಿರಿ. ಯಾರದೋ ಮಾತಿಗೆ ನಿಮ್ಮ ಬಗ್ಗೆ ಕೀಳರಿಮೆ ಬೆಳೆಸಿಕೊಳ್ಳಬೇಡಿ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮಕರ: ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ವೃತ್ತಿ ರಂಗದಲ್ಲಿ ಅಧಿಕ ಕಾರ್ಯದೊತ್ತಡವಿರುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರ ಯೋಗವಿದೆ.

ಕುಂಭ: ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಆಸ್ತಿ ವಿವಾದದಲ್ಲಿ ನಿಮಗೆ ಅನುಕೂಲಕರವಾದ ತೀರ್ಪು ಬರಲಿದೆ. ಸಂಗಾತಿಯ ಆರೋಗ್ಯದ ಬಗ್ಗೆ ನಿಗಾವಹಿಸಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುತ್ತದೆ.

ಮೀನ: ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಆದರೆ ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವ್ಯಾಪಾರ, ವಹಿವಾಟು ನಡೆುಸವವರಿಗೆ ಲಾಭವಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ದೇವರ ಹಚ್ಚೆ ಇರುವ ಉಂಗುರ ಧರಿಸಿ ಈ ರೀತಿ ಮಾಡಿದ್ರೆ ದರಿದ್ರ ಸುತ್ತಿಕೊಳ್ಳುತ್ತದೆಯಂತೆ