Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 7 ಜುಲೈ 2019 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಕೈ ಕೆಳಗೆ ಕೆಲಸ ಮಾಡುವ ನೌಕರರ ಸಹಾಯಕ್ಕೆ ಧಾವಿಸುವಿರಿ. ಕೌಟುಂಬಿಕವಾಗಿ ತಾಳ್ಮೆ ಮತ್ತು ಮೌನವಾಗಿರುವುದೇ ಲೇಸು. ಅನಗತ್ಯ ಮನಸ್ತಾಪ, ಸಂಘರ್ಷಗಳಿಗೆ ಎಡೆಮಾಡಿಕೊಡದಿರಿ.

ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡುವಿರಿ. ವಾಹನ ಖರೀದಿಯಿಂದ ನಷ್ಟ ಅನುಭವಿಸುವಿರಿ. ಮಕ್ಕಳಿಂದ ಸಂತಸ ಸಿಗುವುದು. ಅನಿರೀಕ್ಷಿತ ಅಪಘಾತಗಳಾಗುವ ಸಂಭವವಿದೆ. ಎಚ್ಚರಿಕೆ ಅಗತ್ಯ.

ಮಿಥುನ: ಈ ದಿನ ಯಾರಿಗೂ ಸಾಲ ಕೊಡಲು ಹೋಗಬೇಡಿ. ಅಂದುಕೊಂಡ ಕೆಲಸಗಳನ್ನು ಪೂರ್ತಿಗೊಳಿಸುವಿರಿ. ವ್ಯವಹಾರದಲ್ಲಿ ನಷ್ಟವಾಗುವ ಸಂಭವವಿದ್ದು, ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಸಂತಾನ ಸೂಚಕ ಶುಭ ಫಲಗಳು ಗೋಚರವಾಗುವುದು. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು.

ಸಿಂಹ: ಸಾಂಸಾರಿಕವಾಗಿ ಸಂಗಾತಿಯೊಂದಿಗಿನ ಮನಸ್ತಾಪಗಳು ದೂರವಾಗಿ ನೆಮ್ಮದಿಯ ವಾತಾವರಣ ನೆಲೆಸಲಿದೆ. ವ್ಯಾಪಾರಿ ವರ್ಗದವರಿಗೆ ಮುನ್ನಡೆಯಾಗುವುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಬೇಕಾಗುತ್ತದೆ.

 
ಕನ್ಯಾ: ಅಪರಿಚಿತರನ್ನು ನಂಬಿ ಹೊಸ ವ್ಯವಹಾರಗಳಿಗೆ ಕೈ ಹಾಕಿದರೆ ವಂಚನೆಗೊಳಗಾಗುವ ಭೀತಿಯಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳು ಪ್ರಯತ್ನಬಲ ಮುಂದುವರಿಸಬೇಕು.

ತುಲಾ: ಮನೆಯಲ್ಲಿ ಶುಭ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದುಡುಕು ಮಾತಿನಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ವೃಶ್ಚಿಕ: ಕೋಪದ ಕೈಗೆ ಬುದ್ಧಿ ಕೊಟ್ಟು ಆತುರದ ನಿರ್ಧಾರ ಕೈಗೊಳ್ಳುವಿರಿ. ದಾಂಪತ್ಯದಲ್ಲಿ ಮನಸ್ತಾಪವಾದೀತು. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಕಾರ್ಯಕ್ಷೇತ್ರದಲ್ಲಿ ವಿಘ್ನಗಳಿದ್ದರೂ ಅಂತಿಮವಾಗಿ ಕಾರ್ಯ ನೆರವೇರುವುದು. ಮನೋ ಕಾಮನೆಗಳು ನಿಧಾನವಾಗಿ ಒಂದೊಂದೇ ಪೂರೈಸುವುದು.

ಮಕರ: ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ನಿರಾಶೆ ಬೇಡ. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾಗುವುದು. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗವಾದೀತು. ಆದರೆ ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ದೂರ ಸಂಚಾರದಿಂದ ಕಾರ್ಯ ಸಾಧನೆಯಾಗಲಿದೆ.

ಮೀನ: ಋಣಾತ್ಮಕ ಚಿಂತನೆಗಳಿಂದ ಕಾರ್ಯಕ್ಷೇತ್ರದಲ್ಲಿ ಆಲಸ್ಯತನ ಕಂಡುಬರಲಿದೆ. ಮನೆ, ಆಸ್ತಿ ಖರೀದಿಗೆ ಚಿಂತನೆ ನಡೆಸುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಬುಧವಾರ ಗಣೇಶನ ಅನುಗ್ರಹ ಸಿಗಲು ಈ ಸ್ತೋತ್ರ ಓದಿ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

ಮುಂದಿನ ಸುದ್ದಿ
Show comments