Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 8 ಜುಲೈ 2019 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ನಾನಾ ಖರ್ಚುಗಳು ಎದುರಾದರೂ ಆದಾಯಕ್ಕೆ ಕೊರತೆಯಿರದು. ಆದಷ್ಟು ವಾಗ್ವಾದಗಳಿಂದ ದೂರವಿರುವುದೇ ಉತ್ತಮ. ಕಾರ್ಯದೊತ್ತಡ ಅಧಿಕವಾಗುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಷಭ: ಮಕ್ಕಳ ವಿಚಾರವಾಗಿ ಯೋಚನೆ ಮಾಡಬೇಕಾದ ಕಾಲವಿದು. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟವಿರಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗಕ್ಕೆ ಸಂದರ್ಶನ ಕರೆಬರುವುದು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಸಾಂಸಾರಿಕವಾಗಿ ಹಲವು ಕಷ್ಟಕಾರ್ಪಣ್ಯಗಳು ಎದುರಾಗಲಿವೆ. ವಿನಾಕಾರಣ ತೊಂದರೆಗೆ ಸಿಲುಕಿಕೊಳ್ಳುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ಅವಕಾಶಗಳು ಎದುರಾಗಲಿವೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ನಿಮ್ಮ ಪರವಾಗಿ ಅಂತಿಮಗೊಳ್ಳಲಿದೆ. ಕೃಷಿಕರಿಗೆ ತೊಂದರೆ ತಪ್ಪದು. ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು.

ಸಿಂಹ: ವ್ಯಾಪಾರ, ವಹಿವಾಟಿನಲ್ಲಿ ಲಾಭ ಸಿಗಲಿದೆ. ಆದರೆ ಆರೋಗ್ಯದಲ್ಲಿ ಏರುಪೇರಾಗುವುದು. ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

 
ಕನ್ಯಾ: ನಿರುದ್ಯೋಗಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಹ ನಿರಾಶೆಯ ಫಲ ಎದುರಿಸಬೇಕಾಗುತ್ತದೆ. ಸಾಮಾಜಿಕ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವಿರಿ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು.

ತುಲಾ: ಆರ್ಥಿಕವಾಗಿ ನಿಧಾನವಾಗಿ ಚೇತರಿಕೆ ಕಂಡುಬರುವುದು. ಕೈ ಹಾಕಿದ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನ ಮನಸ್ಸಿಗೆ ಖುಷಿ ನೀಡುವುದು.

ವೃಶ್ಚಿಕ: ಆರಂಭದಲ್ಲಿ ವಿಘ್ನಗಳಿದ್ದರೂ ಕೈ ಹಿಡಿದ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಸಾಲ ಮರುಪಾವತಿಯಾಗುವುದು. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.

ಧನು: ನಿಮ್ಮ ಮೃದು ಮಾತಿನಿಂದ ಎಲ್ಲರ ಹೃದಯ ಗೆಲ್ಲಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಆರ್ಥಿಕವಾಗಿ ಲಾಭವಾಗಲಿದೆ. ಆದರೂ ಅತಿಯಾಗಿ ಯಾರನ್ನೂ ನಂಬಿ ವ್ಯವಹಾರ ಮಾಡಲು ಹೋಗಬೇಡಿ.

ಮಕರ: ನೀವು ಅಂದುಕೊಂಡ ಕೆಲಸಗಳು ನೆರವೇರಲಿವೆ. ಶಿಕ್ಷಣ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಭಾಗ್ಯವಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಉಚಿತ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಕುಂಭ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಋಣಾತ್ಮಕ ಚಿಂತನೆಗೆ ಅವಕಾಶ ಮಾಡಿಕೊಡಬೇಡಿ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments