Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 13 ಜುಲೈ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿದ್ಯಾರ್ಥಿಗಳಿಗೆ ಎಷ್ಟೇ ಪ್ರಯತ್ನಪಟ್ಟರೂ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗದೇ ನಿರಾಸೆಯಾಗಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಮಾನಸಿಕವಾಗಿ ಅಸಮಾಧಾನಗಳು ಕಾಡಲಿವೆ.

ವೃಷಭ: ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಆಸ್ತಿ ವ್ಯಾಜ್ಯಗಳು ನಿಮ್ಮ ಪರವಾಗಿ ಬರವುದು. ಸಾಮಾಜಿಕವಾಗಿ ಗೌರವ ಸಂಪಾದಿಸಲಿದ್ದೀರಿ. ಧನಾಗಮನ ಸಕಾಲ ಆಗುವುದರಿಂದ ಚಿಂತೆ ಬೇಡ.

ಮಿಥುನ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ಮೂಡಿಬರಲಿದೆ. ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಖರ್ಚು ವೆಚ್ಚಗಳಾಗಲಿವೆ, ಎಚ್ಚರಿಕೆ ಅಗತ್ಯ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲಿತಾಂಶ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆ ಸಾಧಿಸುವಿರಿ. ಸಂಗಾತಿಯ ಆರೋಗ್ಯ ಹದಗೆಡಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಸಿಂಹ: ಕೆಲವೊಂದು  ವಾಗ್ವಾದಗಳಲ್ಲಿ ಅನಿವಾರ್ಯವಾಗಿ ತಲೆತೂರಿಸುವ ಪರಿಸ್ಥಿತಿ ಎದುರಾಗಲಿದೆ. ಆಪ್ತರ ಜತೆಗೆ ನಿಷ್ಠುರವಾಗಿ ನಡೆದುಕೊಳ‍್ಳುವ ಸಂದಿಗ್ಧ ಪರಿಸ್ಥಿತಿ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೊರಬೇಕಾಗುತ್ತದೆ.

 
ಕನ್ಯಾ: ಕಷ್ಟದ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲಾಗದೇ ಅಸಹಾಯಕತೆ ಕಾಡುವುದು. ವ್ಯಾಪಾರ, ವಾಣಿಜ್ಯೋದ್ಯಮ ನಡೆಸುವವರಿಗೆ ಲಾಭವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ತುಲಾ: ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ಭೀತಿಯಿದೆ. ವೃತ್ತಿರಂಗದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ದಾಂಪತ್ಯ ಜೀವನದಲ್ಲಿ ಸಂಗಾತಿಯ ಸಹಕಾರದಿಂದ ನೆಮ್ಮದಿ ಮೂಡಲಿದೆ.

ವೃಶ್ಚಿಕ: ಎಷ್ಟೇ ಕಷ್ಟ ಬಂದರೂ ದೃಢ ನಿರ್ಧಾರದಿಂದ ಮುನ್ನಡೆದರೆ ಯಶಸ್ಸು ನಿಮ್ಮದಾಗುವುದು. ಆರ್ಥಿಕವಾಗಿ ನಿಧಾನವಾಗಿ ಚೇತರಿಕೆ ಕಾಣುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕುವುದು. ಚಿಂತೆ ಬೇಡ.

ಧನು: ಹಣಕಾಸಿನ ವಿಚಾರದಲ್ಲಿ ಹಿಡಿತವಿರುವುದು ಮುಖ್ಯ. ವೃತ್ತಿರಂಗದಲ್ಲಿ ಅತಿಯಾಗಿ ಯಾರನ್ನೂ ನಂಬಲು ಹೋಗಬೇಡಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ವ್ಯವಹಾರದಲ್ಲೂ ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ಸ್ಥಾನ ಪಲ್ಲಟವಾಗುವ ಸಾಧ್ಯತೆಯಿದೆ. ದೇಹಾರೋಗ್ಯದ ಬಗ್ಗೆ ಗಮನ ಕೊಡಬೇಕು. ಅನಿರೀಕ್ಷಿತ ಧನಾಗಮನ ಸಾಧ್ಯತೆ.

ಕುಂಭ: ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ದೂರವಾಗಿ ನೆಮ್ಮದಿ ಮೂಡಲಿದೆ. ಶುಭ ಕಾರ್ಯಗಳನ್ನು ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಖರ್ಚು ವೆಚ್ಚದ ಬಗ್ಗೆ ಕಾಳಜಿ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಕಾರ್ಯ ಕ್ಷೇತ್ರದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಬೆಲೆಯಿದೆ. ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ. ಹಿರಿಯರೊಂದಿಗೆ ವಾಗ್ವಾದವಾಗದಂತೆ ಎಚ್ಚರಿಕೆ ವಹಿಸಿ. ದಿನದಂತ್ಯಕ್ಕೆ ಶುಭ ವಾರ್ತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಟಮಂತ್ರ ದೋಷಗಳಿಂದ ಮುಕ್ತರಾಗಲು ಕಾರ್ತಿಕ ಮಾಸದಂದು ಹೀಗೆ ಮಾಡಿ