Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 13 ಜುಲೈ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿದ್ಯಾರ್ಥಿಗಳಿಗೆ ಎಷ್ಟೇ ಪ್ರಯತ್ನಪಟ್ಟರೂ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗದೇ ನಿರಾಸೆಯಾಗಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಮಾನಸಿಕವಾಗಿ ಅಸಮಾಧಾನಗಳು ಕಾಡಲಿವೆ.

ವೃಷಭ: ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಆಸ್ತಿ ವ್ಯಾಜ್ಯಗಳು ನಿಮ್ಮ ಪರವಾಗಿ ಬರವುದು. ಸಾಮಾಜಿಕವಾಗಿ ಗೌರವ ಸಂಪಾದಿಸಲಿದ್ದೀರಿ. ಧನಾಗಮನ ಸಕಾಲ ಆಗುವುದರಿಂದ ಚಿಂತೆ ಬೇಡ.

ಮಿಥುನ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ಮೂಡಿಬರಲಿದೆ. ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಖರ್ಚು ವೆಚ್ಚಗಳಾಗಲಿವೆ, ಎಚ್ಚರಿಕೆ ಅಗತ್ಯ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲಿತಾಂಶ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆ ಸಾಧಿಸುವಿರಿ. ಸಂಗಾತಿಯ ಆರೋಗ್ಯ ಹದಗೆಡಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಸಿಂಹ: ಕೆಲವೊಂದು  ವಾಗ್ವಾದಗಳಲ್ಲಿ ಅನಿವಾರ್ಯವಾಗಿ ತಲೆತೂರಿಸುವ ಪರಿಸ್ಥಿತಿ ಎದುರಾಗಲಿದೆ. ಆಪ್ತರ ಜತೆಗೆ ನಿಷ್ಠುರವಾಗಿ ನಡೆದುಕೊಳ‍್ಳುವ ಸಂದಿಗ್ಧ ಪರಿಸ್ಥಿತಿ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೊರಬೇಕಾಗುತ್ತದೆ.

 
ಕನ್ಯಾ: ಕಷ್ಟದ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲಾಗದೇ ಅಸಹಾಯಕತೆ ಕಾಡುವುದು. ವ್ಯಾಪಾರ, ವಾಣಿಜ್ಯೋದ್ಯಮ ನಡೆಸುವವರಿಗೆ ಲಾಭವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ತುಲಾ: ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ಭೀತಿಯಿದೆ. ವೃತ್ತಿರಂಗದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ದಾಂಪತ್ಯ ಜೀವನದಲ್ಲಿ ಸಂಗಾತಿಯ ಸಹಕಾರದಿಂದ ನೆಮ್ಮದಿ ಮೂಡಲಿದೆ.

ವೃಶ್ಚಿಕ: ಎಷ್ಟೇ ಕಷ್ಟ ಬಂದರೂ ದೃಢ ನಿರ್ಧಾರದಿಂದ ಮುನ್ನಡೆದರೆ ಯಶಸ್ಸು ನಿಮ್ಮದಾಗುವುದು. ಆರ್ಥಿಕವಾಗಿ ನಿಧಾನವಾಗಿ ಚೇತರಿಕೆ ಕಾಣುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕುವುದು. ಚಿಂತೆ ಬೇಡ.

ಧನು: ಹಣಕಾಸಿನ ವಿಚಾರದಲ್ಲಿ ಹಿಡಿತವಿರುವುದು ಮುಖ್ಯ. ವೃತ್ತಿರಂಗದಲ್ಲಿ ಅತಿಯಾಗಿ ಯಾರನ್ನೂ ನಂಬಲು ಹೋಗಬೇಡಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ವ್ಯವಹಾರದಲ್ಲೂ ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ಸ್ಥಾನ ಪಲ್ಲಟವಾಗುವ ಸಾಧ್ಯತೆಯಿದೆ. ದೇಹಾರೋಗ್ಯದ ಬಗ್ಗೆ ಗಮನ ಕೊಡಬೇಕು. ಅನಿರೀಕ್ಷಿತ ಧನಾಗಮನ ಸಾಧ್ಯತೆ.

ಕುಂಭ: ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ದೂರವಾಗಿ ನೆಮ್ಮದಿ ಮೂಡಲಿದೆ. ಶುಭ ಕಾರ್ಯಗಳನ್ನು ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಖರ್ಚು ವೆಚ್ಚದ ಬಗ್ಗೆ ಕಾಳಜಿ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಕಾರ್ಯ ಕ್ಷೇತ್ರದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಬೆಲೆಯಿದೆ. ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ. ಹಿರಿಯರೊಂದಿಗೆ ವಾಗ್ವಾದವಾಗದಂತೆ ಎಚ್ಚರಿಕೆ ವಹಿಸಿ. ದಿನದಂತ್ಯಕ್ಕೆ ಶುಭ ವಾರ್ತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments