Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 14 ಜುಲೈ 2019 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ದಾರಿಗಳು ಕಂಡುಬರಲಿದೆ. ರಾಜಕೀಯ ಸ್ಥಾನ ಮಾನಗಳು ಹೆಚ್ಚುವುದು. ಕುಟುಂಬದಲ್ಲಿ ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಷಭ: ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಇದರಿಂದ ಕೈ ಹಿಡಿದ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಧಾರ್ಮಿಕ ಕಾರ್ಯಗಳಿಂದ ಮನೆಯಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು.

ಮಿಥುನ: ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರುವುದು. ಆಸ್ತಿ, ಮನೆ ಖರೀದಿಗೆ ಚಿಂತನೆ ನಡೆಸುವಿರಿ. ವ್ಯವಹಾರಗಳಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸುವುದು ಮುಖ್ಯ. ಸಂಚಾರದಲ್ಲಿ ಜಾಗ್ರತೆಯಿರಲಿ.

ಕರ್ಕಟಕ: ಆರ್ಥಿಕವಾಗಿ ಲಾಭ ಗಳಿಸುವುದರಿಂದ ಮಾನಸಿಕ ಚಿಂತೆಗಳು ದೂರವಾಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಿ ಬರುವುದು. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದಾರಿಗಳು ಕಂಡುಬರುವುದು.

ಸಿಂಹ: ಪ್ರಾಮಾಣಿಕವಾಗಿ ಮಾಡಿದ ಕೆಲಸಕ್ಕೆ ಉತ್ತಮ ಫಲಿತಾಂಶ ಪಡೆಯುವಿರಿ. ವ್ಯಾಪಾರಿಗಳು ವ್ಯವಹಾರದಲ್ಲಿ ಲಾಭ ಗಳಿಸುವರು. ಇಷ್ಟಮಿತ್ರರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.

 
ಕನ್ಯಾ: ನಿರುದ್ಯೋಗಿಗಳು ಪಾಲಿಗೆ ಬಂದಿದ್ದು ಪಂಚಾಮೃತ ಎಂದುಕೊಂಡು ಮುನ್ನಡೆಯಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯ ಕೊರತೆ ಎದುರಾಗುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ತುಲಾ: ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಸ್ವ ವೃತ್ತಿಯವರು ಮುನ್ನಡೆ ಸಾಧಿಸಲಿದ್ದಾರೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ.

ವೃಶ್ಚಿಕ: ಕೃಷಿಕರ ಬವಣೆಗಳು ನಿವಾರಣೆಯಾಗುವುದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ಶುಭ ಮಂಗಲ ಕಾರ್ಯಗಳಿಗಾಗಿ ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆಯಿಂದ ಶುಭ ಫಲ.

ಧನು: ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ. ವಿದ್ಯಾರ್ಥಿಗಳು ಪರಿಶ್ರಮ ಪಟ್ಟರಷ್ಟೇ ಉತ್ತಮ ಫಲಿತಾಂಶ ಸಿಗುವುದು. ಸ್ಥಗಿತಗೊಂಡ ಕೆಲಸಗಳಿಗೆ ಮರುಚಾಲನೆ ನೀಡುವಿರಿ. ಬಂಧು ವರ್ಗದವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ.

ಮಕರ: ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಸೂಚಕ ಫಲಗಳಿವೆ. ಆರಂಭದಲ್ಲಿ ವಿಘ್ನಗಳಿದ್ದರೂ ಕಾರ್ಯ ಸಾಧನೆಗೆ ಅಡ್ಡಿಯಾಗದು. ವಿಪರೀತ ಇನ್ನೊಬ್ಬರಿಗೆ ನೆರವಾಗುವ ಬುದ್ಧಿ ತೋರಿದರೆ ವಂಚನೆಗೊಳಗಾಗುವ ಭೀತಿಯಿದೆ.

ಕುಂಭ: ಕಾರ್ಯಕ್ಷೇತ್ರದಲ್ಲಿ ಇನ್ನೇನು ಕೆಲಸ ಪೂರ್ತಿಯಾಗುತ್ತದೆ ಎನ್ನುವಾಗ ಅಡ್ಡಿ ಆತಂಕಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆ ಮಾಡುವುದು ಒಳಿತು. ಸಂಗಾತಿಯ ಸಹಕಾರ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ಕಟ್ಟಪಟ್ಟು ಮಾಡಿದ ಕೆಲಸದ ಪ್ರತಿಫಲ ಅನುಭವಿಸುವ ಕಾಲವಿದು. ದೈವಾನುಕೂಲದಿಂದ ಮನೋಕಾಮನೆಗಳು ಪೂರ್ತಿಯಾಗುವುದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಹಿರಿಯರನ್ನು ಗೌರವದಿಂದ ಕಾಣಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments