Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 15 ಜುಲೈ 2019 (09:18 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಎಂದೋ ಅಂದುಕೊಂಡಿದ್ದ ಕಾರ್ಯಗಳಿಗೆ ಇಂದು ಚಾಲನೆ ನೀಡುವಿರಿ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಕೌಟುಂಬಿಕವಾಗಿ ಸಂಗಾತಿಯಿಂದ ಸಹಕಾರ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಷಭ: ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ತಲೆದೋರುವುದು. ಮಿತ್ರರ ಕಷ್ಟಕ್ಕೆ ನೆರವಾಗುವಿರಿ. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಅನಿರೀಕ್ಷಿತವಾಗಿ ಇಷ್ಟಮಿತ್ರರ ಭೇಟಿ ಮನಸ್ಸಿಗೆ ಖುಷಿಕೊಡುವುದು. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಕರ್ಕಟಕ: ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ವ್ಯಾಜ್ಯವಾಗಬಹುದು. ತಾಳ್ಮೆಯಿಂದ ವ್ಯವಹರಿಸಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿದ್ದರೂ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ.

ಸಿಂಹ: ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ನೂತನ ದಂಪತಿಗೆ ಮಧುಚಂದ್ರದ ಭಾಗ್ಯ. ನಿಮ್ಮ ಸಹಕಾರವಿಲ್ಲದೇ ಮೇಲಧಿಕಾರಿಗಳಿಗೆ ಕೆಲಸ ಮುಂದುವರಿಸಲು ಸಾಧ್ಯವಾಗದು.

 
ಕನ್ಯಾ: ಸಾಲ ಪಾವತಿ ಚಿಂತೆ ಕಾಡುವುದು. ಇಷ್ಟ ಮಿತ್ರರೊಂದಿಗೆ ಭೋಜನ, ಪ್ರವಾಸ ಸಾಧ್ಯತೆಯಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗುವುದು. ಸ್ವ ಉದ್ಯೋಗಿಗಳಿಗೆ ಲಾಭವಾಗಲಿದೆ.

ತುಲಾ: ಸರಕಾರಿ ಕೆಲಸಕ್ಕಾಗಿ ಇದುವರೆಗೆ ನೀವು ಮಾಡಿದ ಪ್ರಯತ್ನ ಕೈಗೂಡಲಿದೆ. ಕಿರು ಸಂಚಾರ ಮಾಡಬೇಕಾಗಿ ಬರಬಹುದು. ವ್ಯಾಪಾರ ವ್ಯವಹಾರದಲ್ಲಿ ಅಪರಿಚಿತರನ್ನು ನಂಬಿ ವ್ಯವಹಾರ ಮಾಡುವಾಗ ಎಚ್ಚರವಿರಲಿ.

ವೃಶ್ಚಿಕ: ಮನೆಯಲ್ಲಿ ಶುಭ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆ ಅಗತ್ಯ.

ಧನು: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಧನವಿನಿಯೋಗವಾಗುವುದು. ಮಹಿಳಾ ಉದ್ಯೋಗಿಗಳಿಗೆ ಶುಭ ಯೋಗವಿದೆ. ಕುಲದೇವರ ಪ್ರಾರ್ಥನೆ ನಡೆಸಿ.

ಮಕರ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳು ಹಂತ ಹಂತವಾಗಿ ಕೈಗೂಡುವುದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸುವಿರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಉದ್ಯೋಗದಲ್ಲಿ ಬಡ್ತಿ, ಮುನ್ನಡೆ ಯೋಗವಿದೆ. ವಾಹನ ಖರೀದಿಗೆ ಚಿಂತನೆ ಮಾಡುವಿರಿ. ಬಂಧು ಮಿತ್ರರಿಂದ ಚಾಡಿ ಮಾತು ಕೇಳಬೇಕಾಗಿಬರಬಹುದು. ಆರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ.

ಮೀನ: ಋಣಾತ್ಮಕ ಚಿಂತನೆಗಳಿಂದ ಕೆಲಸದ ಮೇಲೆ ಆಲಸ್ಯತನ ಕಂಡುಬರಬಹುದು. ಆದರೆ ಕಷ್ಟಪಟ್ಟು ದುಡಿದರೇ ಫಲ ಎನ್ನುವುದನ್ನು ಮರೆಯಬೇಡಿ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments