Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 17 ಜುಲೈ 2019 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕ ವಿಚಾರವಾಗಿ ನಿರ್ಧಾರ ಕೈಗೊಳ್ಳುವಾಗ ಸಂದಿಗ್ಧತೆ ಎದುರಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಆರ್ಥಿಕ ಆದಾಯ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಆರೋಗ್ಯ ಭಾಗ್ಯ ಕೈಕೊಡುವುದು.

ವೃಷಭ: ಶ್ರಮವಿಲ್ಲದೇ ಕಾರ್ಯಸಾಧನೆಯಾಗದು. ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಹಿರಿಯರ ಹಿತೋಪದೇಶಗಳಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ತಪ್ಪುಗಳಾಗಬಹುದು. ಎಚ್ಚರಿಕೆಯಿಂದಿರಿ.

ಮಿಥುನ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹಿನ್ನಡೆಯಾಗಬಹುದು. ಆದರೆ ಕಲೆ, ಸಾಹಿತ್ಯದಲ್ಲಿ ಆಸಕ್ತಿಯುಳ್ಳವರಿಗೆ ಉತ್ತಮ ಸ್ಥಾನ ಮಾನ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ.

ಕರ್ಕಟಕ: ಚಂಚಲ ಮನಸ್ಸಿನಿಂದಾಗಿ ನಿರ್ಧಾರ ಕೈಗೊಳ್ಳುವಾಗ ಎಡವಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರಾಗಬಹುದು. ಹಿರಿಯರ ಮಾರ್ಗದರ್ಶನದಿಂದ ಮನೋಬಲ ಹೆಚ್ಚುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು.

ಸಿಂಹ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಹಣಕಾಸಿನ ಅಡಚಣೆಗಳು ಕಂಡುಬರಬಹುದು. ಬಡ್ಡಿ ವ್ಯವಹಾರ ಮಾಡುವವರಿಗೆ ಲಾಭವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದ್ದು, ಮಾನಸಿಕ ಸ್ಥೈರ್ಯ ಹೆಚ್ಚುವುದು.

 
ಕನ್ಯಾ: ದೈವಾನುಕೂಲದಿಂದ ಇಂದು ನಿಮಗೆ ಸುಲಭವಾಗಿ ಕಾರ್ಯಸಾಧನೆಯಾಗಲಿದೆ. ಕೈ ಹಿಡಿದ ಕಾರ್ಯಗಳಲ್ಲಿ ಜಯ ಸಿಗುವುದು. ದೂರ ಸಂಚಾರದಿಂದ ಕಾರ್ಯ ಸಿದ್ಧಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕು.

ತುಲಾ: ನಿರೀಕ್ಷೆಯಂತೇ ಕಾರ್ಯಸಿದ್ಧಿಯಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗುವುದು. ಆಪ್ತೇಷ್ಟರ ಭೇಟಿಯಾಗುವ ಯೋಗವಿದೆ. ವ್ಯವಹಾರದಲ್ಲಿ ಲಾಭ ಕಾಣುವಿರಿ. ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ.

ವೃಶ್ಚಿಕ: ಋಣಾತ್ಮಕ ಚಿಂತನೆಗಳಿಂದ ಕಾರ್ಯಾರಂಭಕ್ಕೆ ವಿಳಂಬವಾಗುವುದು. ಹಿರಿಯರಿಂದ ಬಂದ ವಸ್ತುಗಳು ಕೈ ಜಾರಿ ಹೋಗುವ ಭೀತಿಯಿದೆ. ವೃತ್ತಿ, ವ್ಯವಹಾರದಲ್ಲಿ ಮುನ್ನಡೆ ಸಾಧಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಧನು: ಕಾರ್ಯ ಕ್ಷೇತ್ರದಲ್ಲಿ ಏನಾದರೊಂದು ಅಡ್ಡಿ ಆತಂಕಗಳು ಇದ್ದೇ ಇರುತ್ತವೆ. ಆದರೆ ಚಿಂತೆ ಬೇಡ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳು ನಡೆಯಲಿವೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಗಳಿಸುವರು.

ಮಕರ: ಇಷ್ಟ ಮಿತ್ರರ ಭೇಟಿ, ಭೋಜನ ಯೋಗವಿದೆ. ಆದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಕಷ್ಟದ ಸಮಯದಲ್ಲಿ ಆಪ್ತರಿಂದ ಸಹಾಯ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ವ್ಯವಹಾರದಲ್ಲಿ ಸೂಕ್ತ ಲಾಭ ಗಳಿಸುವಿರಿ. ಆಸ್ತಿ ಖರೀದಿಗೆ ಮುಂದಾಗುವಿರಿ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಬೇಡಿ. ಮಕ್ಕಳ ಸಹಾಯ ಸಿಗುವುದು. ವಿರೋದಿಗಳಿಂದ ದೂರವಿರುವುದೇ ಉತ್ತಮ.

ಮೀನ: ಕಾರ್ಯ ಕ್ಷೇತ್ರಗಳಲ್ಲಿ ನಿಮ್ಮ ಬಗ್ಗೆ ಅಸೂಯೆಪಡುವವರಿಂದ ಅಡ್ಡಿ ಆತಂಕಗಳು ಎದುರಾಗಬಹುದು. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ದೋಷ ಕಳೆಯಲು ಗ್ರಹಣದ ನಂತರ ತಪ್ಪದೇ ಮಾಡಿ ಈ ಕೆಲಸ