Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 20 ಜುಲೈ 2019 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪ್ರಯತ್ನ ಬಲವಿದ್ದರೆ ಮಾತ್ರ ಕಾರ್ಯ ಸಾಧನೆಯಾಗಲಿದೆ. ದೈನಂದಿನ ಕೆಲಸದಲ್ಲಿ ಬಿಡುವೇ ಇಲ್ಲದಂತಾದೀತು. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಸಾಂಸಾರಿಕವಾಗಿ ಬಂಧು ಮಿತ್ರರಿಂದ ಸಹಾಯ ಸಿಗಲಿದೆ.

ವೃಷಭ: ಋಣಾತ್ಮಕ ಚಿಂತೆಗಳಿಂದ ಕೈಹಿಡಿದ ಕೆಲಸಗಳಿಗೆ ತೊಂದರೆಯಾದೀತು. ಸಂತಾನಾಪೇಕ್ಷಿತ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮಿಥುನ: ಆರೋಗ್ಯ ಹದತಪ್ಪಬಹುದು, ಎಚ್ಚರಿಕೆ ಅಗತ್ಯ. ಅವಿವಾಹಿತರ  ವಿವಾಹ ಪ್ರಯತ್ನಕ್ಕೆ ಅಡ್ಡಿ ಆತಂಕಗಳು ಎದುರಾಗಬಹುದು. ತಾತ್ಕಾಲಿಕ ಉದ್ಯೋಗದವರಿಗೆ ಮುನ್ನಡೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಗುರುಬಲದಿಂದ ನೀವು ಕೈ ಹಿಡಿದ ಕಾರ್ಯಗಳಲ್ಲಿ ಜಯ, ಲಾಭ ಗಳಿಸುವಿರಿ. ಸಂಗಾತಿಯ ಜತೆಗೆ ಸುಮಧುರ ಕ್ಷಣ ಕಳೆಯುವಿರಿ. ಮಕ್ಕಳ ಅಭಿಪ್ರಾಯಕ್ಕೆ ಬೆಲೆಕೊಡಬೇಕಾಗುತ್ತದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ನಡೆಸಬೇಕು.

ಸಿಂಹ: ದೇಹಾರೋಗ್ಯ ಹದತಪ್ಪಬಹುದು, ಕಾಳಜಿ ಅಗತ್ಯ. ಸರಕಾರಿ ಉದ್ಯೋಗದಲ್ಲಿರುವವರಿಗೆ ಬಡ್ತಿ, ಮುನ್ನಡೆ ಯೋಗವಿದೆ. ಅನಿರೀಕ್ಷಿತವಾಗಿ ಆರ್ಥಿಕ ಲಾಭವಾಗಲಿದೆ. ಬಂಧು ಮಿತ್ರರ ಭೇಟಿ ಮನಸ್ಸಿಗೆ ಖುಷಿಕೊಡುವುದು.

ಕನ್ಯಾ: ಹಿರಿಯ ಸಲಹೆಗಳಿಗೆ ಬೆಲೆಕೊಡಬೇಕಾಗುತ್ತದೆ. ಕಾರ್ಯವಾಸಿ ಕತ್ತೆ ಕಾಲು ಹಿಡಿ ಅಂತಾರಲ್ಲ. ಹಾಗೆ ನಿಮ್ಮ ಕೆಲಸ ಪೂರ್ತಿ ಮಾಡಲು ಕೆಳವರ್ಗದ ನೌಕರರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ದಿನದಂತ್ಯಕ್ಕೆ ಶುಭ.

ತುಲಾ: ಅನವಶ್ಯಕವಾಗಿ ಮಾನಸಿಕ ಉದ್ವೇಗಕ್ಕೊಳಗಾಗಿ ತಪ್ಪು ಹೆಜ್ಜೆಯಿಡುವ ಸಂಭವವಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೊಂದಾಣಿಕೆಯಿರಲಿ.

ವೃಶ್ಚಿಕ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದರೂ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ನಿರೀಕ್ಷಿತ ಫಲಿತಾಂಶ ಪಡೆಯುವರು. ವಿವಾಹ ಸಂಬಂಧ ಮಾತುಕತೆಗಳಿಗೆ ಚಾಲನೆ ದೊರೆಯಲಿದೆ.

ಧನು: ಹಿತಶತ್ರುಗಳು ಮಾಡುವ ಎಡವಟ್ಟಿನಿಂದ ನಿಮ್ಮ ಕೆಲಸದಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ. ಅಚ್ಚರಿಯ ರೀತಿಯಲ್ಲಿ ಕಾರ್ಯಸಾಧನೆಯಾಗಲಿದೆ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾಗುವ ಸಾಧ್ಯತೆಯಿದೆ.

ಮಕರ: ದೈವಾನುಗ್ರಹದಿಂದ ಮನೋಕಾಮನೆಗಳು ನೆರವೇರಲಿದೆ. ವ್ಯಾಪಾರ, ವ್ಯವಹಾರದಲ್ಲಿ ನಿವ್ವಳ ಲಾಭ ಗಳಿಸುವಿರಿ. ಆದರೆ ಸಂಬಂಧಗಳು ಹದಗೆಡುವ ಸಾಧ್ಯತೆಯಿದ್ದು, ಮಾತಿನ ಮೇಲೆ ನಿಗಾ ಇರಲಿ. ಕಿರು ಸಂಚಾರ ಯೋಗವಿದೆ.

ಕುಂಭ: ಉದ್ಯೋಗಸ್ಥ ಮಹಿಳೆಯರು ಶುಭ ಫಲ ಅನುಭವಿಸುವರು. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ನಿಮ್ಮದಾಗುವುದು. ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆಯಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಮೀನ: ಯಾವುದೇ ಕೆಲಸ ಮಾಡಲು ಹೊರಟರೂ ಅಡ್ಡಿ ಆತಂಕಗಳು ಎದುರಾಗಿ ನಿಮ್ಮನ್ನು ನಿರಾಶೆಗೆ ನೂಕಲಿದೆ. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ. ಸಂಗಾತಿಯ ಅಭೀಷ್ಟೆಗಳನ್ನು ನೆರವೇರಿಸಬೇಕಾಗುತ್ತದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments