Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 21 ಜುಲೈ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿದ್ಯಾರ್ಥಿ ವರ್ಗದವರಿಗೆ ಕಠಿಣ ಪರಿಶ್ರಮ ಪಡಬೇಕಿದೆ. ಗೃಹ ಕೆಲಸಗಳಲ್ಲಿ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದ ಚಿಂತೆ ಕಾಡುವುದು. ಹಾಗಂತ ಋಣಾತ್ಮಕ ಚಿಂತನೆಗಳಿಂದ ಮನಸ್ಸಿಗೆ ಬೇಸರ ಮಾಡಿಕೊಳ್ಳಬೇಡಿ.

ವೃಷಭ: ಚಿಂತೆಗಳಿಂದಾಗಿ ಕಾರ್ಯ ಸಾಧನೆಗೆ ತೊಂದರೆಯಾಗುವುದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ರಾಜಕೀಯ ವರ್ಗದವರಿಗೆ ಮುನ್ನಡೆಯ ಭಾಗ್ಯವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಮಿಥುನ: ಯಾವುದೇ ವಿಚಾರದಲ್ಲೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ತೊಂದರೆ ಎದುರಾಗುವುದು. ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ದೂರ ಸಂಚಾರ ಕೈಗೊಳ್ಳಬೇಕಾಗುತ್ತದೆ.

ಕರ್ಕಟಕ: ದೇಹಾರೋಗ್ಯ ಕೈಕೊಡುವುದು. ಅನಿರೀಕ್ಷಿತವಾಗಿ ಖರ್ಚುಗಳು ಎದುರಾಗಲಿವೆ. ಅವಿವಾಹಿತರಿಗೆ ಅನಿರೀಕ್ಷಿತವಾಗಿ ಕಂಕಣ ಬಲ ಕೂಡಿಬರುವುದು. ವಾಹನ ಖರೀದಿ ಯೋಗವಿದೆ.

ಸಿಂಹ: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಲಾಭವಾಗಲಿದೆ. ದೇಹಾರೋಗ್ಯದ ಕಡೆಗೆ ಗಮನಹರಿಸಬೇಕಾಗುತ್ತದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆಯಿದ್ದರೂ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಕೊರತೆಯಾಗಬಹುದು. ಮಕ್ಕಳ ಭವಿಷ್ಯದ ಯೋಜನೆ ರೂಪಿಸುವಿರಿ.

ತುಲಾ: ವ್ಯಾಪಾರ, ವ್ಯವಹಾರಗಳಿಂದ ಲಾಭ ಗಳಿಸುವಿರಿ. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಡು ಮಾಡುವಿರಿ. ಕಳೆದು ಹೋದ ಸಂಬಂಧಗಳು ಮತ್ತೆ ಬೆಸೆಯಲಿವೆ. ಹಿತಶತ್ರುಗಳಿಂದ ದೂರವಿರುವುದೇ ಉತ್ತಮ.

ವೃಶ್ಚಿಕ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಪ್ರೀತಿ ಪಾತ್ರರಿಗಾಗಿ ಸಮಯ ಮೀಸಲಿಡಲಿದ್ದೀರಿ. ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಎಚ್ಚರಿಕೆಯಿಂದಿರಿ.

ಧನು: ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಗಮನಕೊಡಬೇಕಾಗುತ್ತದೆ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ರಾಜಕೀಯವಾಗಿ ಮುನ್ನಡೆಯಿರುತ್ತದೆ. ಆದರೆ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.

ಮಕರ: ಅರ್ಧಕ್ಕೆ ನಿಂತ ಕೆಲಸಗಳಿಗೆ ಚಾಲನೆ ದೊರೆಯಲಿದೆ. ಅವಿವಾಹಿತರಿಗೆ ವಿವಾಹಕ್ಕೆ ಪ್ರಯತ್ನ ಪಡಬೇಕಾಗುತ್ತದೆ. ಆಸ್ತಿ ವಿವಾದಗಳು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಯುವುದು. ದೇವರ ದರ್ಶನ ಮಾಡುವಿರಿ.

ಕುಂಭ: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸದ ವಾರ್ತೆಯಿದೆ. ಸ್ವ ಉದ್ಯೋಗಿಗಳು ಲಾಭ ಗಳಿಸುವರು. ಹಿರಿಯರೊಂದಿಗೆ ಮಾತನಾಡುವಾಗ ದುಡುಕಬೇಡಿ.

ಮೀನ: ಹಲವು ದಿನಗಳಿಂದ ಕಂಡಿದ್ದ ಕನಸುಗಳನ್ನು ನನಸು ಮಾಡಿಕೊಳ್ಳುವಿರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಗಮನಕೊಡಬೇಕಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments