Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 22 ಜುಲೈ 2019 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ದೇಹಾಯಾಸವಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲ ಸಿಗುವುದು. ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ನೀಡುವುದು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಹಿರಿಯರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಉದಾಸೀನ ಮಾಡಿದರೆ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗುತ್ತದೆ.

ಮಿಥುನ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಎದುರಾಗಬಹುದು. ಮನೆಯಲ್ಲಿ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನದಿಂದ ಸಂತಸದ ವಾತಾವರಣವಿರಲಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಪ್ರೀತಿ ಪಾತ್ರರ ಅಮೂಲ್ಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಎಚ್ಚರ ತಪ್ಪಿದರೂ ದಂಡನೆಗೊಳಗಾಗಬೇಕಾಗುತ್ತದೆ. ದೂರ ಸಂಚಾರದಿಂದ ಕಾರ್ಯಪ್ರಾಪ್ತಿಯಾಗುವುದು.

ಸಿಂಹ: ಸಾಮಾಜಿಕವಾಗಿ ನಿಮ್ಮ ಮಾತುಗಳಿಗೆ ಬೆಲೆ ಸಿಗುವುದು. ಹೆಸರು ಕೀರ್ತಿ ಸಂಪಾದಿಸುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಆದಾಯವಿದ್ದಷ್ಟೇ ಖರ್ಚೂ ಕಂಡುಬರಲಿದೆ.

ಕನ್ಯಾ: ಸಾಲಗಾರರ ಕಾಟ ಮನಸ್ಸಿಗೆ ಹಿಂಸೆಯಾಗುವುದು. ಆದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಆಪ್ತ ಮಿತ್ರರಿಂದ ಸಹಾಯ ನಿರೀಕ್ಷಿಸಬಹುದು. ದುಡುಕಿನ ವರ್ತನೆಗೆ ಕಡಿವಾಣ ಹಾಕಿ.

ತುಲಾ: ಹೊಸ ಮನೆ, ವಾಹನ ಖರೀದಿಗೆ ಮುಂದಾಗುವಿರಿ. ನಿಮ್ಮ ಜೀವನಕ್ಕೆ ಹೊಸ ತಿರುವು ಸಿಗುವ ಘಟನೆಗಳು ನಡೆಯಲಿವೆ. ಸಂಗಾತಿಯ ಸಹಕಾರವಿರಲಿದೆ. ಬೇಡದ ಮಾತುಗಳಿಗೆ ಕಿವಿಗೊಡಬೇಡಿ. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ವಾಣಿಜ್ಯೋದ್ಯಮಿಗಳಿಗೆ ಇಂದು ನಿವ್ವಳ ಲಾಭ ಸಿಗಲಿದೆ. ಕೆಳಹಂತದ ನೌಕರರಿಗೆ ಬಡ್ತಿ ಯೋಗವಿದೆ. ಮೇಲಧಿಕಾರಿಗಳೊಂದಿಗೆ ಹೊಂದಿಕೊಂಡು ಹೋಗಬೇಕಿದೆ. ಸಂಗಾತಿಯ ಇಷ್ಟಾರ್ಥಗಳನ್ನು ನೆರವೇರಿಸುವಿರಿ.

ಧನು: ನಿಮ್ಮ ಹಠದ ಮನೋಭಾವ ಸಂಗಾತಿಯ ಮನಸ್ಸಿಗೆ ಬೇಸರವುಂಟುಮಾಡಬಹುದು. ದುಡುಕಿನ ವರ್ತನೆ ಬೇಡ. ಆರೋಗ್ಯ ಕೈಕೊಡಬಹುದು. ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಚಿಂತೆ ಮಾಡಬೇಕಿಲ್ಲ.

ಮಕರ: ಸಂತಾನ ಹೀನ ದಂಪತಿಗಳಿಗೆ ಶುಭ ಸೂಚಕ ಫಲಗಳಿವೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕೆಲವೊಂದು ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ಯಾರ ಮಾತಿಗೂ ಕಿವಿಗೊಡದೇ ನಿರ್ಧಾರ ತೆಗೆದುಕೊಂಡರೆ ಮುಂದೆ ತೊಂದರೆ ಅನುಭವಿಸಬೇಕಾದೀತು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ಮುನ್ನಡೆಯಬೇಕಾಗುತ್ತದೆ.

ಮೀನ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದುಕೊಳ್ಳಬೇಕು. ನಿರುದ್ಯೋಗಿಗಳು ಕೈಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮನೆಯಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments