Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 25 ಜುಲೈ 2019 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಜೀವನದಲ್ಲಿ ಅಭಿವೃದ್ಧಿ ಕಾಣುವ ದಿನಗಳಿವು. ವ್ಯಾಪಾರ, ವಹಿವಾಟಿನಲ್ಲಿ ನಿವ್ವಳ ಲಾಭ ಗಳಿಸುವಿರಿ. ಸಂಗಾತಿಯಿಂದ ಸಹಕಾರ ಸಿಗುವುದು. ಆದರೆ ಆರೋಗ್ಯದ ಚಿಂತೆ ಮಾತ್ರ ಕಾಡುವುದು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಲಾಭ ಗಳಿಸಬಹುದು. ಧನವ್ಯಯವಾದರೂ ಹಣ ಸಂಪಾದನೆಗೆ ನಾನಾ ಮಾರ್ಗಗಳು ತೋರಿಬರಲಿವೆ. ಸಾಲಗಾರರಿಂದ ಮುಕ್ತಿ ಸಿಗುವುದು. ಉದ್ಯೋಗದಲ್ಲಿ ಮಹತ್ವದ ಬದಲಾವಣೆಯಾಗಲಿದೆ.

ಮಿಥುನ: ಸಾಂಸಾರಿಕವಾಗಿ ಸಂಗಾತಿ ಮೇಲೆ ತಪ್ಪು ತಿಳುವಳಿಕೆಯುಂಟಾಗಿ ಮುನಿಸಿಗೆ ಕಾರಣವಾಗುವುದು. ಹಿತ ಶತ್ರುಗಳ ಮೇಲೆ ನಿಗಾ ಇಡಿ. ಉದ್ಯೋಗದಲ್ಲಿ ಕಾರ್ಯದೊತ್ತಡವಿರಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ.

ಕರ್ಕಟಕ: ಖರ್ಚು ವೆಚ್ಚಗಳಲ್ಲಿ ಮಿತಿಯಿರಲಿ. ಹಂತ ಹಂತವಾಗಿ ಆರ್ಥಿಕ ಅಭಿವೃದ್ಧಿ ತೋರಿಬರಲಿದೆ. ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ. ಮೇಲಧಿಕಾರಿಗಳ ಅಸಮಾಧಾನಕ್ಕೆ ಗುರಿಯಾಗಬೇಕಾದೀತು.

ಸಿಂಹ: ಸಹೋದರ ಸಂಬಂಧಿಗಳ ಮದುವೆ ಸಂಬಂಧ ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ತಲೆದೋರಬಹುದು. ಪ್ರಯತ್ನ ಬಲಕ್ಕೆ ತಕ್ಕ ಫಲ ದೊರೆಯಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಕನ್ಯಾ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳು ಅಸೂಯೆಪಟ್ಟು ನಿಮ್ಮ ಏಳಿಗೆಗೆ ಅಡ್ಡಿ ಮಾಡುವರು. ಆದರೆ ನಿಮ್ಮ ಬೆಲೆಯನ್ನು ಯಾರೂ ಕಸಿಯಲು ಸಾಧ‍್ಯವಿಲ್ಲ. ಸಾಂಸಾರಿಕವಾಗಿ ನಿರ್ಧಾರ ತೆಗೆದುಕೊಳ್ಳುವಲ್ಲಿ ಎಡವುತ್ತೀರಿ.

ತುಲಾ: ಉದ್ಯಮಿಗಳು, ವ್ಯಾಪಾರಿಗಳಿಗೆ ಲಾಭ ತಂದುಕೊಡುವಂತಹ ಹೊಸ ಅವಕಾಶಗಳು ತೋರಿಬರಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ಸಾಂಸಾರಿಕವಾಗಿ ಸಂಗಾತಿಯ ಮನೋಕಾಮನೆಗಳನ್ನು ಪೂರೈಸಬೇಕಾಗುತ್ತದೆ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆಗೆಟ್ಟು ಕೆಳ ಹಂತದ ನೌಕರರ ಮೇಲೆ ಕೋಪ ತಾಪ ಪ್ರದರ್ಶಿಸಲು ಹೋಗುವಿರಿ. ದುಡುಕಿನ ವರ್ತನೆಯಿಂದ ಕಾರ್ಯ ಸಾಧನೆಯಾಗದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲ ಸಿಗುವುದು.

ಧನು: ಆರ್ಥಿಕವಾಗಿ ಪ್ರತಿಕೂಲ ಪರಿಣಾಮದಿಂದ ಅಂದುಕೊಂಡ ಕಾರ್ಯಗಳು ನೆರವೇರದು. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಾಮಾಜಿಕ ಕಾರ್ಯಗಳಿಗೆ ಮುಂದಾಳತ್ವ ವಹಿಸುವಿರಿ. ಸರ್ಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಆರೋಗ್ಯದಲ್ಲಿ ಸುಧಾರಣೆ.

ಕುಂಭ: ಕಾರ್ಯ ಸಿದ್ಧಿಗಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಆದರೆ ಕಳ್ಳತನದ ಭೀತಿಯಿದೆ ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ತನೆ ಮಾಡಿ.

ಮೀನ: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾತಾವರಣವಿರಲಿದೆ. ಉದ್ಯೋಗದಲ್ಲಿ ಬದಲಾವಣೆ ಮಾಡುವ ಬಗ್ಗೆ ಚಿಂತನೆ ನಡೆಸುವಿರಿ. ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆಯಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments