Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 26 ಜುಲೈ 2019 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೃಢ ನಿರ್ಧಾರದಿಂದ ಮುನ್ನಡೆದರೆ ಕಾರ್ಯ ಸಾಧನೆಯಾಗುವುದು. ಉದ್ಯೋಗ ರಂಗದಲ್ಲಿ ಕೆಳ ಹಂತದ ನೌಕರರಿಂದ ಕಿರಿ ಕಿರಿಯಾಗುವುದು. ಸಂಗಾತಿಯ ಸಹಕಾರವಿರಲಿದೆ. ಕೌಟುಂಬಿಕವಾಗಿ ಮಕ್ಕಳ ಭವಿಷ್ಯದ ಯೋಚನೆಯಾಗುವುದು.

ವೃಷಭ: ಪರಿಸ್ಥಿತಿಗೆ ತಕ್ಕಂತೆ ನಡೆದುಕೊಂಡರೆ ತೊಂದರೆಯಾಗದು. ದುಡುಕಿನ ವರ್ತನೆ ತೋರದಿರಿ. ದಾಯಾದಿಗಳಿಂದ ಆಸ್ತಿ ಕುರಿತಾದ ವಿವಾದಗಳು ಎದುರಾಗಲಿವೆ. ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗುವುದದರಿಂದ ಕಾರ್ಯಸಾಧನೆಗೆ ಅಡ್ಡಿಯಾಗುವುದು. ಕಷ್ಟದ ಸಮಯದಲ್ಲಿ ಬಂಧು ಮಿತ್ರರ ಸಹಕಾರ ಸಿಗುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಕರ್ಕಟಕ: ವಿವಾಹ ಬೇಡವೆಂದು ನಿಶ್ಚಯ ಮಾಡಿಕೊಂಡಿದ್ದರೆ ಅನಿರೀಕ್ಷಿತ ರೀತಿಯಲ್ಲಿ ಯೋಗ್ಯ ಸಂಬಂಧ ಕೂಡಿಬರಲಿದೆ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆರ್ಥಿಕವಾಗಿ ಉನ್ನತಿ.

ಸಿಂಹ: ಬಾಕಿ ಹಣ ಪಾವತಿಯಾಗುವುದರಿಂದ ಹಣಕಾಸಿನ ತೊಂದರೆಗಳು ದೂರವಾಗುವುದು. ಆದರೆ ಸಂಬಂಧದ ವಿಚಾರದಲ್ಲಿ ಮನಸ್ಸಿಗೆ ಬೇಸರವಾಗುವಂತಹ ಘಟನೆಗಳು ನಡೆಯಬಹುದು. ವ್ಯಾಪಾರದಲ್ಲಿ ಹಿನ್ನಡೆಯಾದೀತು.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗುವುದು. ಅನಿರೀಕ್ಷಿತ ರೀತಿಯಲ್ಲಿ ಕೆಲವು ಖರ್ಚು ವೆಚ್ಚಗಳಾಗಬಹುದು. ಹಿರಿಯರ ಬಗ್ಗೆ ಕಾಳಜಿಯಿರಲಿ.

ತುಲಾ: ಸಾಂಸಾರಿಕವಾಗಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಇದು ಕೆಲವರಿಗೆ ಪಥ್ಯವಾಗದು. ಆದರೆ ಅದರ ಬಗ್ಗೆ ಈಗ ಚಿಂತೆ ಮಾಡುವ ಸಮಯವಲ್ಲ. ದಾಯಾದಿಗಳೊಂದಿಗೆ ರಾಜಿ ಸಂಧಾನ ಮಾಡಿಕೊಳ್ಳಿ.

ವೃಶ್ಚಿಕ: ಆರೋಗ್ಯದಲ್ಲಿ ತುಸು ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಬಹುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು.

ಧನು: ಸಾಂಸಾರಿಕವಾಗಿ ಸುಂದರವಾದ ದಿನವಿದು. ಮಕ್ಕಳೊಂದಿಗೆ ಸಂತಸದ ಕಾಲ ಕಳೆಯುವಿರಿ.  ಉದ್ಯೋಗ ರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದೆ. ವಾಹನ ಖರೀದಿ ಯೋಗವಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಮುನ್ನಡೆಯಿರಲಿದೆ.

ಮಕರ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾದರೂ ಸಾಂಸಾರಿಕ ಸುಖಕ್ಕೆ ಕೊರತೆಯಾಗದು. ಕಾರ್ಯಕ್ಷೇತ್ರದಲ್ಲಿ ಹಂತ ಹಂತವಾಗಿ ಮುನ್ನಡೆ ಸಾಧಿಸಲಿದ್ದೀರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ತಾಳ್ಮೆ ಸಮಾಧಾನದಿಂದ ಮುನ್ನಡೆದರೆ ಯಶಸ್ಸು ಸಾಧ್ಯ. ಪ್ರಾಮಾಣಿಕತೆಗೆ ತಕ್ಕ ಫಲ ದೊರೆಯಲಿದೆ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಯಲಿದ್ದು, ಓಡಾಟ ನಡೆಸಬೇಕಾಗುತ್ತದೆ. ಹೊಸ ಜನರ ಭೇಟಿಯಾಗುವಿರಿ. ಹೊಸ ಉದ್ಯೋಗಾವಕಾಶಗಳ ಬಗ್ಗೆ ಯೋಚನೆ ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments