Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 29 ಜುಲೈ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿವೇಚನೆಯ ಕೊರತೆಯಿಂದ ತೆಗೆದುಕೊಳ್ಳುವ ಕೆಲವು ನಿರ್ಧಾರಗಳಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳ ತೊಂದರೆ ಎದುರಾಗಲಿದೆ.

ವೃಷಭ: ನಿಮಗರಿವಿಲ್ಲದಂತೆಯೇ ಕೆಲವು ಕರ್ತವ್ಯ ಲೋಪಗಳಾಗಿ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗುತ್ತದೆ. ತಾಳ್ಮೆಯ ವರ್ತನೆ ಅಗತ್ಯ. ವ್ಯಾಪಾರ ವ್ಯವಹಾರಗಳಲ್ಲಿ ನಿವ್ವಳ ಲಾಭವಾಗಲಿದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಆಲಸ್ಯತನ ಕಾಡುವುದು. ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕಾದ ದಿನವಿದು. ಅವಿವಾಹಿತರಿಗೆ ವಿವಾಹ ಪ್ರಯತ್ನಗಳು ಫಲಗೂಡಲಿವೆ. ಸ್ವಉದ್ಯೋಗಿಗಳಿಗೆ ಲಾಭವಾಗಲಿದೆ.

ಕರ್ಕಟಕ: ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ದೊರಕಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಆದಾಯಕ್ಕೆ ಕೊರತೆಯಾಗದು. ಆದರೆ ಖರ್ಚುವೆಚ್ಚಗಳ ಬಗ್ಗೆ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ.

ಸಿಂಹ: ಆರ್ಥಿಕವಾಗಿ ಹಣಕಾಸಿನ ಅಡಚಣೆಯಿಂದ ಅಂದುಕೊಂಡ ಕಾರ್ಯಗಳಿಗೆ ವಿಘ್ನ ತೋರಿಬರಲಿದೆ. ಚಾಲಕ ವೃತ್ತಿಯವರಿಗೆ ಅಪಘಾತದ ಭೀತಿಯಿದೆ. ಅಧಿಕ ಓಡಾಟದಿಂದ ಅನಾರೋಗ್ಯವಾಗದಂತೆ ಎಚ್ಚರವಹಿಸಿ.

ಕನ್ಯಾ: ಕಷ್ಟಕಾಲದಲ್ಲಿ ಬಂಧು ಮಿತ್ರರ ಸಹಾಯ ದೊರಕಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ಮಾಡುವಿರಿ. ವೃತ್ತಿರಂಗದಲ್ಲಿ ತಾಳ್ಮೆಯಿಂದ ಹೆಜ್ಜೆಯಿಡುವುದು ಮುಖ್ಯ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ದುಡುಕು ವರ್ತನೆಯಿಂದ  ಕೆಲಸ ಕೆಟ್ಟೀತು. ಹಿರಿಯರೊಂದಿಗೆ ನಿಷ್ಠುರವಾಗಿ ಮಾತನಾಡಬೇಡಿ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಶತ್ರುಬಾಧೆ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ಧಾರಿಗಳು ಹೆಗಲಿಗೇರಲಿವೆ. ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಒಳ್ಳೆಯದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಧನು: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ವೃತ್ತಿ ರಂಗದಲ್ಲಿ ಉನ್ನತ ಸಾಧನೆ ಮಾಡುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ಮಕರ: ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಮಕ್ಕಳಿಂದ ಸಂತಸದ ವಾರ್ತೆಗಳು ಕೇಳಿಬಂದೀತು. ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ಆದರೆ ಈ ದಿನ ಯಾರಿಗೂ ಸಾಲ ಕೊಡಲು ಹೋಗಬೇಡಿ.

ಕುಂಭ: ಕುಲದೇವರ ಸೇವೆ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ತಲೆದೋರಬಹುದು. ದಾಯಾದಿಗಳೊಂದಿಗೆ ಕಲಹವಾಗಬಹುದು. ಎಚ್ಚರಿಕೆಯಿಂದಿರಿ. ಹಿರಿಯರ ಸಲಹೆಗಳಿಗೆ ಕಿವಿಗೊಡಿ.

ಮೀನ: ದಾಂಪತ್ಯ ಜೀವನದಲ್ಲಿ ಶುಭ ಸುದ್ದಿಯಿದೆ. ಆಲಸ್ಯತನ ಬಿಟ್ಟರೆ ಕಾರ್ಯದಲ್ಲಿ ಸಫಲತೆ ಕಾಣಬಹುದು. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾದೀತು. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ದೇವರ ಕೋಣೆಯಲ್ಲಿ ದೇವರ ಫೊಟೋಗಳ ಜೊತೆಗೆ ಈ ವಸ್ತುಗಳನ್ನು ಇಟ್ಟರೆ ಐಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ