Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 29 ಜುಲೈ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿವೇಚನೆಯ ಕೊರತೆಯಿಂದ ತೆಗೆದುಕೊಳ್ಳುವ ಕೆಲವು ನಿರ್ಧಾರಗಳಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳ ತೊಂದರೆ ಎದುರಾಗಲಿದೆ.

ವೃಷಭ: ನಿಮಗರಿವಿಲ್ಲದಂತೆಯೇ ಕೆಲವು ಕರ್ತವ್ಯ ಲೋಪಗಳಾಗಿ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗುತ್ತದೆ. ತಾಳ್ಮೆಯ ವರ್ತನೆ ಅಗತ್ಯ. ವ್ಯಾಪಾರ ವ್ಯವಹಾರಗಳಲ್ಲಿ ನಿವ್ವಳ ಲಾಭವಾಗಲಿದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಆಲಸ್ಯತನ ಕಾಡುವುದು. ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕಾದ ದಿನವಿದು. ಅವಿವಾಹಿತರಿಗೆ ವಿವಾಹ ಪ್ರಯತ್ನಗಳು ಫಲಗೂಡಲಿವೆ. ಸ್ವಉದ್ಯೋಗಿಗಳಿಗೆ ಲಾಭವಾಗಲಿದೆ.

ಕರ್ಕಟಕ: ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ದೊರಕಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಆದಾಯಕ್ಕೆ ಕೊರತೆಯಾಗದು. ಆದರೆ ಖರ್ಚುವೆಚ್ಚಗಳ ಬಗ್ಗೆ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ.

ಸಿಂಹ: ಆರ್ಥಿಕವಾಗಿ ಹಣಕಾಸಿನ ಅಡಚಣೆಯಿಂದ ಅಂದುಕೊಂಡ ಕಾರ್ಯಗಳಿಗೆ ವಿಘ್ನ ತೋರಿಬರಲಿದೆ. ಚಾಲಕ ವೃತ್ತಿಯವರಿಗೆ ಅಪಘಾತದ ಭೀತಿಯಿದೆ. ಅಧಿಕ ಓಡಾಟದಿಂದ ಅನಾರೋಗ್ಯವಾಗದಂತೆ ಎಚ್ಚರವಹಿಸಿ.

ಕನ್ಯಾ: ಕಷ್ಟಕಾಲದಲ್ಲಿ ಬಂಧು ಮಿತ್ರರ ಸಹಾಯ ದೊರಕಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ಮಾಡುವಿರಿ. ವೃತ್ತಿರಂಗದಲ್ಲಿ ತಾಳ್ಮೆಯಿಂದ ಹೆಜ್ಜೆಯಿಡುವುದು ಮುಖ್ಯ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ದುಡುಕು ವರ್ತನೆಯಿಂದ  ಕೆಲಸ ಕೆಟ್ಟೀತು. ಹಿರಿಯರೊಂದಿಗೆ ನಿಷ್ಠುರವಾಗಿ ಮಾತನಾಡಬೇಡಿ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಶತ್ರುಬಾಧೆ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ಧಾರಿಗಳು ಹೆಗಲಿಗೇರಲಿವೆ. ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಒಳ್ಳೆಯದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಧನು: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ವೃತ್ತಿ ರಂಗದಲ್ಲಿ ಉನ್ನತ ಸಾಧನೆ ಮಾಡುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ಮಕರ: ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಮಕ್ಕಳಿಂದ ಸಂತಸದ ವಾರ್ತೆಗಳು ಕೇಳಿಬಂದೀತು. ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ಆದರೆ ಈ ದಿನ ಯಾರಿಗೂ ಸಾಲ ಕೊಡಲು ಹೋಗಬೇಡಿ.

ಕುಂಭ: ಕುಲದೇವರ ಸೇವೆ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ತಲೆದೋರಬಹುದು. ದಾಯಾದಿಗಳೊಂದಿಗೆ ಕಲಹವಾಗಬಹುದು. ಎಚ್ಚರಿಕೆಯಿಂದಿರಿ. ಹಿರಿಯರ ಸಲಹೆಗಳಿಗೆ ಕಿವಿಗೊಡಿ.

ಮೀನ: ದಾಂಪತ್ಯ ಜೀವನದಲ್ಲಿ ಶುಭ ಸುದ್ದಿಯಿದೆ. ಆಲಸ್ಯತನ ಬಿಟ್ಟರೆ ಕಾರ್ಯದಲ್ಲಿ ಸಫಲತೆ ಕಾಣಬಹುದು. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾದೀತು. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments