ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 2 ಆಗಸ್ಟ್ 2019 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಬಾಕಿ ಹಣ ವಾಪಸಾತಿ ಚಿಂತೆಯಾಗುವುದು. ಹಲವಾರು ಅವಕಾಶಗಳು ಎದುರಾದರೂ ಆಲಸ್ಯತನದಿಂದಾಗಿ ನೆನೆಗುದಿಗೆ ಬೀಳಲಿದೆ. ಎಚ್ಚರಿಕೆ ಅಗತ್ಯ.

ವೃಷಭ: ಕೆಲಸ ಕಾರ್ಯಗಳಲ್ಲಿ ಹಾನಿಯಾಗುವ ಸಂಭವವಿದ್ದರೂ ಆರ್ಥಿಕವಾಗಿ ಧನಲಾಭಕ್ಕೆ ಕೊರತೆಯಾಗದು. ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರವಿರಲಿ. ಆರೋಗ್ಯ ಸಮಸ್ಯೆಗೆ ಪರಿಹಾರ ಸಿಗುವುದು.

ಮಿಥುನ: ಅಂದುಕೊಂಡ ಕೆಲಸ ಕಾರ್ಯ ಪೂರ್ತಿ ಮಾಡಲು ಹಲವು ಅಡ್ಡಿ ಆತಂಕಗಳು ಎದುರಾಗಲಿವೆ. ಸಾಂಸಾರಿಕವಾಗಿ ಹಲವು ಮನೋಕ್ಲೇಶಗಳು ಎದುರಾಗಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿರಂಗದಲ್ಲಿ ಅಚ್ಚರಿಯ ವಾರ್ತೆ, ಬಡ್ತಿ ಯೋಗವಿದೆ. ಮನೆ ಖರೀದಿಗೆ ಚಿಂತನೆ ಮಾಡುವಿರಿ. ಆರ್ಥಿಕವಾಗಿ ಧಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಿಂಹ: ಇತರರನ್ನು ಹೇಳುವ ಸಲಹೆಗಳನ್ನು ಶಾಂತವಾಗಿ ಆಲಿಸುವ ಸಹನೆ ಇರಲಿ. ದುಡುಕು ವರ್ತನೆಯಿಂದ ಕಾರ್ಯ ಹಾಳಾಗಬಹುದು. ದೂರ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಅಧಿಕಾರಿ ವರ್ಗದವರಿಗೆ ಅನುಕೂಲಕರ ವಾತಾವರಣವಿರಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮ ಮೃದು ವ್ಯಕ್ತಿತ್ವ ಎಲ್ಲರ ಮೆಚ್ಚುಗೆಗೆ ಪಾತ್ರವಾಗುವುದು. ವಾಗ್ವಾದವಾಗುತ್ತಿದ್ದರೆ ಮೌನವಾಗಿರುವುದೇ ಲೇಸು. ಅಪರಿಚಿತರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿರಿ. ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.

ವೃಶ್ಚಿಕ: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ತಾಳ್ಮೆಯಿಂದ ಕಾರ್ಯ ಸಾಧನೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ನಡೆಸಬೇಕು.

ಧನು: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವುದು. ಆದರೆ ಉದ್ಯೋಗದಲ್ಲಿ ಕಿರಿ ಕಿರಿಯಿಂದಾಗಿ ಮನಸ್ಸು ಬದಲಾವಣೆ ಬಯಸುವುದು. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಆಸಕ್ತಿಯಿಂದ ಕೆಲಸ ಕಾರ್ಯ ಮಾಡಿದರೆ ತಕ್ಕ ಪ್ರತಿಫಲ ಸಿಗುವುದು. ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆಗೆ ಪಾತ್ರರಾಗುವಿರಿ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಕಷ್ಟದ ಸಮಯದಲ್ಲಿ ಮಹಿಳೆಯರಿಂದ ನೆರವು ಸಿಗುವುದು. ಹೊಸ ವ್ಯವಹಾರದಲ್ಲಿ ಬಂಡವಾಳ ಹೂಡಿಕೆ ಮಾಡಲು ಇದು ಸಕಾಲ. ದೇಹಾರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮೀನ: ವ್ಯಾಪಾರಿ ವರ್ಗದವರಿಗೆ ಉತ್ತಮ ಲಾಭ ಸಿಗಲಿದೆ. ಆರ್ಥಿಕವಾಗಿ ಸಾಕಷ್ಟು ಧನ ಲಾಭವಾಗಲಿದೆ. ಆದರೆ ಸಾಂಸಾರಿಕವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳಿಂದ ಮನಸ್ಸಿಗೆ ಕಿರಿ ಕಿರಿಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments