Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 4 ಆಗಸ್ಟ್ 2019 (07:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಗೃಹ ಸಂಬಂಧೀ ಕೆಲಸಗಳಲ್ಲಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸ್ಥಾನ ಮಾನ ಲಭ್ಯವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

ವೃಷಭ: ದಾಯಾದಿಗಳೊಂದಿಗೆ ಕೌಟುಂಬಿಕ ಕಲಹಕ್ಕೆ ಹಿರಿಯರ ಮಧ್ಯಸ್ಥಿಕೆ ವಹಿಸುವುದು ಒಳ್ಳೆಯದು. ದುಡುಕಿನ ವರ್ತನೆಯಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಆದಷ್ಟು ಮೌನಕ್ಕೆ ಶರಣಾಗುವುದು ಒಳ್ಳೆಯದು.

ಮಿಥುನ: ಆರೋಗ್ಯ ಸಂಬಂಧವಾಗಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಸ್ವ ಉದ್ಯೋಗಿಗಳಿಗೆ ಲಾಭವಾಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವೃತ್ತಿ ಜೀವನದಲ್ಲಿ ಯಾರನ್ನೂ ನಂಬದ ಪರಿಸ್ಥಿತಿ ಎದುರಾಗಲಿದೆ.

ಕರ್ಕಟಕ: ನೂತನ ಗೃಹ ನಿರ್ಮಾಣ ಕಾರ್ಯಗಳಿಗೆ ಮುಂದಾಗುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಸಂಗಾತಿಯ ಮನಸ್ಸಿಗೆ ಖುಷಿಯಾಗುವಂತೆ ನಡೆದುಕೊಳ್ಳಬೇಕಾಗುತ್ತದೆ.

ಸಿಂಹ: ಅನಿರೀಕ್ಷಿತವಾಗಿ ವಿವಾಹ ಸಂಬಂಧಗಳು ಕೂಡಿಬರಲಿವೆ. ಆರ್ಥಿಕ ಸ್ಥಿತಿಯಲ್ಲಿ ಧನವ್ಯಯವಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಕನ್ಯಾ: ಕೌಟುಂಬಿಕ ಕೆಲಸಗಳಿಗೆ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ಮನೆಗೆ ಹೊಸ ಅತಿಥಿಗಳ ಆಗಮನವಾಗಲಿದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದೆ.

ತುಲಾ: ಮನೆ, ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ.  ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕು. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

ವೃಶ್ಚಿಕ: ವೃತ್ತಿರಂಗದಲ್ಲಿ ಬದಲಾವಣೆ ಬಯಸುವಿರಿ. ಹಂತ ಹಂತವಾಗಿ ಅಭಿವೃದ್ಧಿ ಅನುಭವಕ್ಕೆ ಬರುವುದು. ದೇವತಾ ಕಾರ್ಯಕ್ರಮಗಳಿಗೆ ಧನ ವ್ಯಯವಾಗಲಿದೆ. ಮನೆಯಲ್ಲಿ ಸಮಾಧಾನಕರ ವಾತಾವರಣವಿರಲಿದೆ.

ಧನು: ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕಾರ್ಯ ಕ್ಷೇತ್ರದಲ್ಲಿ ಸಹನೆಯಿಂದ ಮುನ್ನಡೆಯಬೇಕು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು.

ಮಕರ: ದೈವಾನುಕೂಲದಿಂದ ಸಾಂಸಾರಿಕವಾಗಿ ಸುಖ ಅನುಭವಿಸುತ್ತೀರಿ. ನಾನಾ ರೀತಿಯಲ್ಲಿ ಆರ್ಥಿಕ ಲಾಭವಾಗಲಿದೆ. ವೃತ್ತಿ ಜೀವನದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಬಂದ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವಿರಿ.

ಕುಂಭ: ಅನಾರೋಗ್ಯದ ಸಮಸ್ಯೆಗಳಿಗೆ ಶೀಘ್ರ ಮುಕ್ತಿ ಸಿಗುವುದು. ಮನೆಯಲ್ಲಿ ಹೊಸ ಅತಿಥಿಗಳ ಆಗಮನ ಸಂತಸಕ್ಕೆ ಕಾರಣವಾಗುವುದು. ಮಕ್ಕಳಿಂದ ಸಂತಸದ ವಾರ್ತೆ ಸಿಗುವುದು. ಸಂಚಾರದಲ್ಲಿ ಜಾಗ್ರತೆಯಿದೆ.

ಮೀನ: ಉದ್ಯೋಗ ರಂಗದಲ್ಲಿ ಮೇಲ್ವರ್ಗದ ಅಧಿಕಾರಿಗಳಿಗೆ ಬಡ್ತಿ ಯೋಗವಿದೆ. ನೂತನ ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಹೊಸ ವ್ಯವಹಾರಗಳಿಗೆ ಕೈಹಾಕುವಿರಿ.ಆರ್ಥಿಕವಾಗಿ ಆದಾಯ ವೃದ್ಧಿಯಾಗುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments