Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 5 ಆಗಸ್ಟ್ 2019 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರೋಗ್ಯ ಸಮಸ್ಯೆ ಕಾಡುವುದು. ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ಸಂಗಾತಿಯೊಂದಿಗೆ ಆಡಿದ ಮಾತುಗಳಿಗೆ ಪಶ್ಚಾತ್ತಾಪ ಪಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಗಿಗಳ ಸಹಕಾರ ಸಿಗಲಿದೆ.

ವೃಷಭ: ಆಸ್ತಿ, ಮನೆ ಖರೀದಿಗೆ ಚಿಂತನೆ ಮಾಡುವಿರಿ.  ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ್ಯತೆಯಿದೆ. ವಿನಾಕಾರಣ ಇನ್ನೊಬ್ಬರ ಸಮಸ್ಯೆಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು.

ಮಿಥುನ: ಪ್ರೀತಿ ಪಾತ್ರರಿಗಾಗಿ ಹೆಚ್ಚಿನ ಸಮಯ ಮೀಸಲಿಡುವಿರಿ. ಆರೋಗ್ಯ ಸಂಬಂಧ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಆದರೆ ನಿರುದ್ಯೋಗಿಗಳಿಗೆ ನಿರಾಸೆಯಾಗುವುದು.

ಕರ್ಕಟಕ: ಬಹುಕಾಲದ ನಂತರ ಆಪ್ತ ಮಿತ್ರರೊಬ್ಬರ ಭೇಟಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಅಗತ್ಯ.

ಸಿಂಹ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ್ಯತೆ. ಆಪ್ತ ವಲಯದವರಿಂದಲೇ ಚಾಡಿ ಮಾತು ಕೇಳಿಬಂದೀತು. ಆದರೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ವ್ಯಾಪಾರ ವ್ಯವಾಹರಗಳಲ್ಲಿ ಜಯ ಸಿಗುವುದು.

ಕನ್ಯಾ: ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವಿರಿ. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಮುಖ್ಯ. ಖರ್ಚು ವೆಚ್ಚದ ಬಗ್ಗೆ ಎಚ್ಚರವಿರಲಿ.

ತುಲಾ: ಅವಿವಾಹಿತ ಸಹೋದರಿಯ ಮದುವೆ ಮಾತುಕತೆ ವಿಚಾರವಾಗಿ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಎದುರಾಗಲಿವೆ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

ವೃಶ್ಚಿಕ: ಪ್ರೀತಿ ಪಾತ್ರರ ಸಂಕಷ್ಟದ ಸಮಯದಲ್ಲಿ ನೆರವಾಗುವಿರಿ. ಅಪವಾದಗಳು ಕೇಳಿಬಂದೀತು. ಎಚ್ಚರಿಕೆ ಅಗತ್ಯ. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಆದಾಯದಲ್ಲಿ ಸುಧಾರಣೆಯಾದರೂ ಖರ್ಚುಗಳೂ ಹೆಚ್ಚಲಿವೆ.

ಧನು: ಕೌಟುಂಬಿಕವಾಗಿ ಗಮನಾರ್ಹ ಬದಲಾವಣೆಗಳು ನಡೆಯಲಿವೆ. ಸಹೋದರರಿಂದ ಕಿರಿ ಕಿರಿ ಇರಬಹುದು. ಆದರೆ ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆಯಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಪ್ರತಿಫಲ ಸಿಗುವುದು.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಸಂಗಾತಿಯ ಮನೋಕಾಮನೆಗಳನ್ನು ಪೂರೈಸಬೇಕಾಗುತ್ತದೆ. ಖರ್ಚಿನ ಬಗ್ಗೆ ಹಿಡಿತವಿರಲಿ.

ಕುಂಭ: ಇಷ್ಟು ದಿನಗಳಿಂದ ಕಾಡುತ್ತಿದ್ದ ಮಾನಸಿಕ ಕ್ಷೋಭೆಗೆ ಒಂದು ಪರಿಹಾರ ಸಿಗಲಿದೆ.  ಆದರೆ ದೈಹಿಕ ಆರೋಗ್ಯದಲ್ಲಿ ಏರುಪೇರಾಗಬಹುದು. ಪ್ರೀತಿ ಪಾತ್ರರೊಂದಿಗೆ ಕಿರು ಸಂಚಾರ ಮಾಡುವಿರಿ. ದೇವತಾ ಪ್ರಾರ್ಥನೆ ಮಾಡುವುದನ್ನು ಮರೆಯಬೇಡಿ.

ಮೀನ: ಅವಿವಾಹಿತರಿಗೆ ಅನಿರೀಕ್ಷಿತವಾಗಿ ಯೋಗ್ಯ ಸಂಬಂಧ ಕೂಡಿಬರುವುದು. ಆದಾಯ ಹೆಚ್ಚಿ ಹಂತ ಹಂತವಾಗಿ ಅಭಿವೃದ್ಧಿ ಕಾಣುವಿರಿ. ಸ್ವ ಉದ್ಯೋಗಿಗಳಿಗೆ ಮುನ್ನಡೆಯಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments