Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 9 ಆಗಸ್ಟ್ 2019 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮೇಲಧಿಕಾರಿಗಳ ಕಿರಿ ಕಿರಿಯಿಂದ ಕೀಳರಿಮೆ ಮೂಡುವುದು. ಸಂಗಾತಿಯೊಂದಿಗೆ ವಿನಾಕಾರಣ ಮನಸ್ತಾಪ ಮಾಡಿಕೊಳ್ಳುವಿರಿ. ದುಡುಕಿನ ವರ್ತನೆ ತೋರಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ವೃಷಭ: ಕೃಷಿ ಕ್ಷೇತ್ರದಲ್ಲಿರುವವರಿಗೆ ಅಡೆತಡೆಗಳು ನಿವಾರಣೆಯಾಗಿ ನಿವ್ವಳ ಲಾಭ ಸಿಗಲಿದೆ. ಅನವಶ್ಯಕ ವಾದ ವಿವಾದಗಳಿಂದ ದೂರವಿರುವುದೇ ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಂಭೀರವಾಗಿ ಗಮನಕೊಡಬೇಕಾದ ಸಮಯವಿದು.

ಮಿಥುನ: ದುಡುಕು ವರ್ತನೆಯಿಂದ ಕಾರ್ಯದಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ. ಹಿರಿಯರಿಂದ ಬಂದ ಬಳವಳಿಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಕರ್ಕಟಕ: ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುವ ಅವಕಾಶಗಳಿವೆ. ಹೊಸ ಜನರ ಭೇಟಿಯಿಂದ ಹೊಸ ವಿಚಾರಗಳು ಹೊಳೆಯಲಿವೆ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾಗಬಹುದು.

ಸಿಂಹ: ಮಹಿಳೆಯರ ಅಸಮಾಧಾನಕ್ಕೆ ಗುರಿಯಾಗುವಿರಿ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗುವುದು. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಅಧಿಕ ಕಾರ್ಯದೊತ್ತಡವಿರಲಿದೆ.

ಕನ್ಯಾ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಹಾಗಿದ್ದರೂ ಮನಸ್ಸಿಗೆ ತೃಪ್ತಿಯಾಗದು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನ ಮನಸ್ಸಿಗೆ ಖುಷಿ ನೀಡುವುದು. ಖರ್ಚು ವೆಚ್ಚಗಳ ಬಗ್ಗೆ ಗಮನವಿರಲಿ.

ತುಲಾ: ಹಿರಿಯರೊಡನೆ ಅನಗತ್ಯ ವಾದ ವಿವಾದಗಳನ್ನು ಮಾಡಿಕೊಳ‍್ಳಬೇಡಿ. ಕೃಷಿ ಕ್ಷೇತ್ರದಲ್ಲಿರುವವರು ನಷ್ಟ ಅನುಭವಿಸಬೇಕಾಗುತ್ತದೆ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸುವಿರಿ.

ವೃಶ್ಚಿಕ: ಅಂದುಕೊಂಡ ಕಾರ್ಯಗಳಿಗೆ ಹಣಕಾಸಿನ ತೊಂದರೆಗಳು ಎದುರಾಗಲಿವೆ. ಸಾಂಸಾರಿಕವಾಗಿ ಸಂಗಾತಿಯ ಆರೋಗ್ಯ ಹದತಪ್ಪಬಹುದು. ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಾಕಾಶಗಳು ಎದುರಾಗಲಿವೆ.

ಧನು: ಸಾಂಸಾರಿಕವಾಗಿ ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಖರ್ಚು ವೆಚ್ಚಗಳು ಅಧಿಕವಾಗಲಿದೆ. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಗಳಿಸುವಿರಿ. ಹೊಸ ವಾಹನ ಖರೀದಿಗೆ ಮುಂದಾಗುವಿರಿ.

ಮಕರ: ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಆದರೆ ಆದಾಯಕ್ಕೆ ಕೊರೆತೆಯಿರದು. ಅಧಿಕಾರಿ ವರ್ಗದವರಿಗೆ ಮುನ್ನಡೆಯ ಯೋಗವಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರವುದು.

ಕುಂಭ: ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ಸಹೋದ್ಯೋಗಿಗಳು ನಿಮ್ಮ ಏಳಿಗೆಗೆ ಅಸೂಯೆಪಡುವರು. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮೀನ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕುವುದು. ನ್ಯಾಯಾಲಯ ಕಾರ್ಯ ಕಲಾಪಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ವೃತ್ತಿರಂಗದಲ್ಲಿ ಕ್ರಿಯಾಶೀಲತೆ ಹೆಚ್ಚಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments