Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 10 ಆಗಸ್ಟ್ 2019 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಇಂದು ಅತ್ಯಂತ ಸಂಕಷ್ಟಗಳಿಂದ ಕೂಡಿದ ದಿನ ನಿಮ್ಮದಾಗಲಿದೆ. ಆದರೆ ಸಹನೆ ಕಳೆದುಕೊಳ್ಳದೇ ತಾಳ್ಮೆಯಿಂದ ನಡೆದುಕೊಳ್ಳಬೇಕಾದ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ನಿರುತ್ಸಾಹ ಕಂಡುಬಂದೀತು.

ವೃಷಭ: ಸಂದಿಗ್ಧತೆಗಳು ಎದುರಾದಾಗ ಗೆಳೆಯರಿಂದ ಸೂಕ್ತ ಸಲಹೆಗಳು ಸಿಕ್ಕಿ ಪರಿಹಾರ ಕಂಡುಕೊಳ್ಳುವಿರಿ. ವೃತ್ತಿರಂಗದಲ್ಲಿ ಮುನ್ನಡೆಯಿರುತ್ತದೆ. ಪ್ರೇಮಿಗಳ ಪಾಲಿಗೆ ಮಹತ್ವದ ದಿನ. ದಿನದಂತ್ಯಕ್ಕೆ ಶುಭ ವಾರ್ತೆ.

ಮಿಥುನ: ನಿಮ್ಮ ದುಡುಕು ವರ್ತನೆಯಿಂದ ಪರರ ಅಸಹನೆಗೆ ಗುರಿಯಾಗುವಿರಿ. ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಎದುರಾಗಬಹುದು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗುವಿರಿ. ಎಚ್ಚರಿಕೆ ಅಗತ್ಯ.

ಕರ್ಕಟಕ: ಬಿಡುವಿಲ್ಲದೇ ದುಡಿಯಬೇಕಾಗುತ್ತದೆ. ಇದರಿಂದ ಮನಸ್ಸಿಗೂ, ದೇಹಕ್ಕೂ ಆಯಾಸ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುತ್ತದೆ. ರಹಸ್ಯಗಳು ಬಯಲಾಗಲಿವೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಆರ್ಥಿಕವಾಗಿ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ವಾದ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವುದು ಒಳಿತು. ಆರೋಗ್ಯದಲ್ಲಿ ಹಂತ ಹಂತವಾಗಿ ಚೇತರಿಕೆ ಕಾಣುವಿರಿ.

ಕನ್ಯಾ: ದೂರ ಸಂಚಾರದಿಂದ ನಿರೀಕ್ಷಿತ ಕಾರ್ಯಸಾಧನೆಯಾಗದೇ ನಿರಾಸೆಯಾಗುವುದು. ಮಾನಸಿಕವಾಗಿ ದೃಢ ಚಿತ್ತರಾಗಬೇಕು. ನಿಮ್ಮ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಂಡಾರು. ಎಚ್ಚರಿಕೆ ಅಗತ್ಯ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾದೀತು. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ವೃಶ್ಚಿಕ: ಬಂಧು, ಮಿತ್ರರೊಂದಿಗೆ ಪ್ರವಾಸ, ಸುಂದರ ಕ್ಷಣ ಕಳೆಯುವಿರಿ. ಯೋಚನೆ ಮಾಡಿ ಮುನ್ನಡೆಯುವುದು ಮುಖ್ಯ. ಆತುರದ ನಿರ್ಧಾರದಿಂದ ತೊಂದರೆಗೆ ಸಿಲುಕಿಕೊಳ್ಳಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ಧನು: ಸಹೋದ್ಯೋಗಿಗಳ ಸಹಕಾರದಿಂದ ನಿರೀಕ್ಷಿಸಿದ ಕೆಲಸ ಪೂರ್ತಿ ಮಾಡುವಿರಿ. ಬಾಕಿ ಹಣ ಪಾವತಿಯಾಗುವುದು. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರಲಿದೆ.

ಮಕರ: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಯುವುದು. ಹಿತ ಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ಕುಂಭ: ಬಂಧು ಮಿತ್ರರಿಂದ ಚಾಡಿ ಮಾತು ಕೇಳಿಬಂದೀತು. ಅದಕ್ಕೆ ಕಿವಿಗೊಡಬೇಕಿಲ್ಲ. ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿಗಳು ಹೆಗಲಿಗೇರಲಿವೆ. ಉದ್ಯೋಗ ರಂಗದಲ್ಲಿ ನಿರೀಕ್ಷಿತ ಮುನ್ನಡೆ ಸಿಗುವುದು.

ಮೀನ: ಆಪ್ತರೊಂದಿಗಿನ ಕಲಹ ಮನಸ್ಸಿಗೆ ಬೇಸರವುಂಟುಮಾಡಲಿದೆ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗಕ್ಕೆ ಕರೆ ಬರುವುದು. ಹೊಸ ಯೋಜನೆಗಳನ್ನು ರೂಪಿಸುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?