ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 13 ಆಗಸ್ಟ್ 2019 (09:14 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ಚಿಂತೆ, ಬೇಸರವಾಗಲಿದೆ. ಸಂಗಾತಿಯೊಂದಿಗಿನ ವಿರಸ ಇನ್ನಷ್ಟು ನೋವು ಕೊಡಲಿದೆ. ಆದರೆ ಆರ್ಥಿಕವಾಗಿ ಅಭಿವೃದ್ಧಿಗೆ ಕೊರತೆಯಿರದು. ಉದ್ಯೋಗದಲ್ಲಿ ನಿಮ್ಮ ಸ್ಥಾನವನ್ನು ಯಾರೂ ಕಸಿಯಲು ಸಾಧ‍್ಯವಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಸಂಗಾತಿಯ ಆರೋಗ್ಯ ಹದತಪ್ಪಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಬಂಧುಮಿತ್ರರ ಚಾಡಿಮಾತುಗಳಿಗೆ ಕಿವಿಗೊಡಬೇಡಿ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಕೊಂಚ ಹಿನ್ನಡೆಯಾದೀತು. ಆದರೂ ತಾಳ್ಮೆಗೆಡಬೇಡಿ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಕೇಳುವಿರಿ.

ಮಿಥುನ:  ಸಾಮಾಜಿಕವಾಗಿ ನಿಮ್ಮ ಘನತೆ ಹೆಚ್ಚು ಮಾಡುವಂತಹ ಘಟನೆಗಳು ನಡೆಯಲಿವೆ. ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಚೇತರಿಕೆಯಿರುವುದು. ಆದರೆ ಅಪರಿಮಿತ ಖರ್ಚುಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ಇಷ್ಟಮಿತ್ರರ ಒಡನಾಟ, ಭೋಜನ ಮನಸ್ಸಿಗೆ ಖುಷಿ ನೀಡುವುದು. ರಾಜಕೀಯ ರಂಗದಲ್ಲಿ ಹೆಚ್ಚಿನ ಸ್ಥಾನ ಮಾನ ಲಭ್ಯವಾಗಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಕಾರ್ಯ ಸಾಧನೆಗಾಗಿ ದೂರ ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ಆರ್ಥಿಕವಾಗಿ ಅಭಿವೃದ್ಧಿ ತೋರಿಬಂದು ಹಂತ ಹಂತವಾಗಿ ಚೇತರಿಕೆ ಕಾಣುವಿರಿ. ಮಿತ್ರರ ಸಂಕಷ್ಟಕ್ಕೆ ಹೆಗಲುಕೊಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೇ ಅಸೂಯೆಪಡುವಂತೆ ಕಾರ್ಯನಿರ್ವಹಿಸಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಅವಿವಾಹಿತ ಕನ್ಯೆಯರಿಗೆ ಮನಸ್ಸಿಗೆ ಒಪ್ಪುವಂತಹ ಯೋಗ್ಯ ಸಂಬಂಧಗಳು ಕೂಡಿಬರಲಿವೆ. ಸಾಂಸಾರಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳಿಗೆ ಒಂದು ರೀತಿಯ  ಅಂತ್ಯ ಸಿಗುವುದು. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳನ್ನು ಮಾಡಬೇಕಾಗುತ್ತದೆ.

ತುಲಾ: ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಲಿವೆ. ಕಾರ್ಯ ಕ್ಷೇತ್ರದಲ್ಲಿ ಹಿನ್ನಡೆಯುಂಟಾಗಬಹುದು. ಸರಕಾರಿ ಕಚೇರಿಗಳಿಗೆ ಅಲೆದಾಟ ತಪ್ಪದು. ನೂತನ ದಂಪತಿಗಳಲ್ಲಿ ವಿರಸ ಮೂಡಬಹುದು. ದುಡುಕಿನ ವರ್ತನೆ ತೋರದಿರಿ.

ವೃಶ್ಚಿಕ: ನಿಮ್ಮ ತಾಳ್ಮೆ ಪರೀಕ್ಷೆ ನಡೆಸುವಂತಹ ಘಟನೆಗಳು ನಡೆಯಲಿವೆ. ಹಿತಶತ್ರುಗಳಿಂದ ಕಿರಿ ಕಿರಿ ಎದುರಿಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಆದಾಯಕ್ಕೆ ಕೊರತೆಯಿರದು.

ಧನು: ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗುವುದು. ಮಾನಸಿಕವಾಗಿ ಕಾಡುತ್ತಿದ್ದ ಸಮಸ್ಯೆಗಳಿಗೆ ಒಂದು ರೀತಿಯ ಅಂತ್ಯ ಸಿಗುವುದು. ವಿನಾಕಾರಣ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.

ಮಕರ: ಆಸ್ತಿ ಮನೆ ಖರೀದಿಗೆ ಚಿಂತನೆ ನಡೆಸುವಿರಿ. ಹಿರಿಯರ ಸಲಹೆಗಳಿಗೆ ಕಿವಿಕೊಡಬೇಕಾಗುತ್ತದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ನಿಮ್ಮದಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ನಡೆಸಿದರೆ ಶುಭ.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಿಬಂದು ದೈನಂದಿನ ಕೆಲಸಗಳಲ್ಲಿ ಆಲಸ್ಯತನ ಕಾಡುವುದು. ಮಕ್ಕಳ ವಿಚಾರದಲ್ಲಿ ಚಿಂತೆಯಾಗುವುದು. ವ್ಯಾಪಾರ ವಹಿವಾಟಿನಲ್ಲಿ ಲಾಭ ಗಳಿಸುವಿರಿ. ಆದರೆ ಅಪರಿಚಿತರನ್ನು ನಂಬಲು ಹೋಗಬೇಡಿ.

ಮೀನ: ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಧನ ವಿನಿಯೋಗ ಮಾಡಬೇಕಾಗುತ್ತದೆ. ಪ್ರೇಮಿಗಳ ಗುಟ್ಟು ಮನೆಯವರ ಮುಂದೆ ಬಹಿರಂಗವಾಗಲಿದೆ. ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡುವಿರಿ. ಸಂಗಾತಿಯ ಸಲಹೆ ಉಪಯೋಗಕ್ಕೆ ಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments