Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 14 ಆಗಸ್ಟ್ 2019 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಗೊಂದಲದ ವಾತಾವರಣ ಮುಂದುವರಿಯಲಿದೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳೂ ಕಾಡಲಿವೆ. ನಿರ್ಧಾರ ತೆಗೆದುಕೊಳ್ಳುವಾಗ ಸಂದಿಗ್ಧತೆ ಕಾಡಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ವ್ಯಾಪಾರದಲ್ಲಿ ಚೇತರಿಕೆ.

ವೃಷಭ: ದೈವಾನುಕೂಲದಿಂದ ಅಂದುಕೊಂಡ ಕಾರ್ಯ ಸುಲಭವಾಗಿ ನೆರವೇರಿಸುವಿರಿ. ಆದರೆ ಮೈ ಕೈ ನೋವು ಇತ್ಯಾದಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಡುವುದು. ವಿದ್ಯಾರ್ಥಿಗಳಲ್ಲಿ ಉತ್ಸಾಹ ಕಂಡುಬರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಗಮನವಿರಲಿ.

ಮಿಥುನ:  ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ತೋರಿಬರಲಿವೆ. ನೀವು ಅತೀವ ನಂಬಿಕೆಯಿಟ್ಟಿದ್ದವರೇ ನಿಮಗೆ ವಿಶ್ವಾಸ ದ್ರೋಹ ಮಾಡುವರು. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಂಡರೆ ನೆಮ್ಮದಿ.ವ್ಯಾಪಾರಿಗಳಿಗೆ ಕೊಂಚ ಹಿನ್ನಡೆಯಾಗಬಹುದು.

ಕರ್ಕಟಕ: ದೈವಾನುಗ್ರಹದಿಂದ ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದ್ದು, ಹೊಸ ಕಾರ್ಯಗಳಿಗೆ ಕೈ ಹಾಕುವಿರಿ. ನೌಕರ ವರ್ಗದವರಿಗೆ ಬಡ್ತಿ ಯೋಗವಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಾಕಾಶಗಳು ದೊರಕಲಿವೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಆರ್ಥಿಕವಾಗಿ ಲಾಭ ಗಳಿಸಲಿದ್ದು, ನೀವು ಅಂದುಕೊಂಡಂತಹ ಅನೇಕ ಯೋಜನೆಗಳನ್ನು ಪೂರ್ತಿ ಮಾಡುವಿರಿ. ದೂರ ಸಂಚಾರ ಮಾಡುವಾಗ ಎಚ್ಚರಿಕೆಯಿಂದಿರುವುದು ಮುಖ್ಯ. ಸಂಗಾತಿಯ ಸಲಹೆಗಳು ಪಥ್ಯವಾಗದೇ ಇರಬಹುದು. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಕನ್ಯಾ: ಸಾಂಸಾರಿಕವಾಗಿ ಹಲವು ಕಿರಿ ಕಿರಿಗಳು ನಿಮ್ಮ ಮನಸ್ಸಿನ ನೆಮ್ಮದಿ ಹಾಳು ಮಾಡಲಿವೆ. ಆದರೆ ಮನೆಯವರ ಸಹಕಾರ, ಸಾಂತ್ವನ ಸಿಗುವುದು. ವ್ಯವಹಾರದಲ್ಲಿ ಹೆಚ್ಚಿನ ಗಮನವಹಿಸಬೇಕು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ತುಲಾ: ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಸಂಗಾತಿಗೆ ಆಭರಣ ಖರೀದಿ ಮಾಡುವಿರಿ. ಆರೋಗ್ಯದಲ್ಲಿ ಎಚ್ಚರಿಕೆಯಿರಲಿ.

ವೃಶ್ಚಿಕ: ಆರ್ಥಿಕವಾಗಿ ಚೇತರಿಕೆ ಕಂಡುಬಂದರೂ ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಸೂಕ್ತ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಬೇಡಿ. ಕೃಷಿ ಕ್ಷೇತ್ರದಲ್ಲಿರುವವರಿಗೆ ನಷ್ಟದ ಸಾಧ‍್ಯತೆ. ವಾಹನ ಸವಾರರು ಎಚ್ಚರಿಕೆಯಿಂದಿರುವುದು ಮುಖ್ಯ.

ಧನು: ಆಗಾಗ ಪ್ರತಿಕೂಲ ವಾತಾವರಣದಿಂದ ನೀವು ಉದ್ದೇಶಿಸಿದ ಕಾರ್ಯಗಳು ನೆರವೇರದೇ ಇರಬಹುದು. ಸಹೋದರ ಸಂಬಂಧಿಗಳಿಂದ ಚಾಡಿ ಮಾತು ಕೇಳಿಬಂದೀತು. ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಕರ: ಅಭಿವೃದ್ಧಿಯತ್ತ ಸಾಗುವಿರಿ. ಬಹುದಿನಗಳ ಕನಸು ಈಡೇರುವುದು. ವಾಹನ, ಆಸ್ತಿ ಖರೀದಿ ಯೋಗವಿದೆ. ಆದರೆ ಕುಲದೇವರ ಪ್ರಾರ್ಥನೆ ಮಾಡಿ ಹೊಸ ಕೆಲಸಗಳಿಗೆ ಕೈ ಹಾಕುವುದು ಒಳಿತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದು ನೆಮ್ಮದಿ ಮೂಡುವುದು.

ಕುಂಭ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಮೂಡುವುದು. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆ ಕಾದಿದೆ.

ಮೀನ: ಏನೋ ಒಂದು ರೀತಿಯ ಮಾನಸಿಕ ಬೇಸರ ಕಾಡುವುದು. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ಮಹಿಳಾ ಉದ್ಯೋಗಿಗಳು ಶುಭ ಫಲ ಪಡೆಯುವರು. ಮನಸ್ಸಿನ ಆತಂಕ ನಿವಾರಣೆಗೆ ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments