Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 17 ಆಗಸ್ಟ್ 2019 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ವೃತ್ತಿರಂಗದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗುವುದು. ಆದರೆ ಆರೋಗ್ಯದ ಬಗ್ಗೆ ಹೆಚ್ಚನ ಕಾಳಜಿ ಅಗತ್ಯ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದಿನದಂತ್ಯಕ್ಕೆ ಶುಭ ವಾರ್ತೆಯಿದೆ.

ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಸಾಂಸಾರಿಕವಾಗಿ ನಿಮ್ಮ ಸಲಹೆಗಳಿಗೆ ಸಂಗಾತಿಯ ಸಹಮತ ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಮುನ್ನಡೆ ಸಾಧಿಸುವಿರಿ. ಆರೋಗ್ಯದಲ್ಲಿ ಕಾಳಜಿ ಅಗತ್ಯ.

ಮಿಥುನ: ಮನೆ, ಆಸ್ತಿ ಖರೀದಿಗೆ ಇದು ಉತ್ತಮ ಸಮಯ. ಆರ್ಥಿಕವಾಗಿ ಸ್ಥಿತಿ ಗತಿ ಸುಧಾರಿಸಲಿದೆ. ಹಿರಿಯರೊಡನೆ ವಾದ ವಿವಾದ ಮಾಡಲು ಹೋಗಬೇಡಿ. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಕೊಂಚ ಹಿನ್ನಡೆಯಾಗಬಹುದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆಯಿರಲಿದೆ. ಶುಭ ಮಂಗಲ ಕಾರ್ಯಗಳಿಗೆ ತಯಾರಿ ನಡೆಸುವಿರಿ. ಯೋಗ್ಯ ವಯಸ್ಕರಿಗೆ ಉತ್ತಮ ಸಂಬಂಧಗಳು ಕೂಡಿಬರಲಿವೆ. ಶೀತ ಸಂಬಂಧವಾದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಬಹುದು.

ಸಿಂಹ: ಅತಿಥಿಗಳ ಆಗಮನವಾಗಲಿದ್ದು, ಖರ್ಚು ವೆಚ್ಚಗಳು ಹೆಚ್ಚುವುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆಯಿರಲಿದೆ. ಮಹಿಳಾ ಉದ್ಯೋಗಗಿಳಿಗೆ ಮುನ್ನಡೆ ಭಾಗ್ಯವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆದರೆ ಸಂತಾನ ಹೀನ ದಂಪತಿಗಳಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಸ್ಥಿತಿ ಎದುರಾಗುವುದು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಅನಿರೀಕ್ಷಿತ ಧನಾಗಮನವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ವೃತ್ತಿರಂಗದಲ್ಲಿ ಹೊಂದಾಣಿಕೆಯ ಅಗತ್ಯವಿದೆ. ಮಾನಸಿಕವಾಗಿ ಕಾಡುವ ಚಿಂತೆಗಳಿಂದ ಒಂದು ರೀತಿಯ ಆಲಸ್ಯತನ ಮೂಡಲಿದೆ. ನಿರುದ್ಯೋಗಗಿಳಿಗೆ ಉದ್ಯೋಗಾವಕಾಶಗಳು ಒದಗಿ ಬರಲಿವೆ. ಅವಿವಾಹಿತರು ಯೋಗ್ಯ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳ್ಳೆಯದು.

ವೃಶ್ಚಿಕ: ಹಿರಿಯರ ತೀರ್ಥಯಾತ್ರೆಗೆ ಏರ್ಪಾಟು ಮಾಡುವಿರಿ. ಉದ್ಯೋಗದಲ್ಲಿ ಬದಲಾವಣೆ ಬಯಸುತ್ತೀರಿ. ಮಹಿಳಾ ಉದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ವಹಿಸುವುದು ಉತ್ತಮ. ಸಂಗಾತಿಗಾಗಿ ಆಭರಣ ಖರೀದಿಗೆ ಮುಂದಾಗಬೇಕಾಗುತ್ತದೆ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹೆಚ್ಚಿನ ಧನವ್ಯಯ ಮಾಡಬೇಕಾಗುತ್ತದೆ. ನ್ಯಾಯಾಲಯದ ಕೆಲಸದಲ್ಲಿ ಜಯ ನಿಮ್ಮದಾಗಲಿದೆ. ಆದರೆ ಆದಾಯವಿದ್ದಷ್ಟೇ ಖರ್ಚೂ ಇರುವುದು. ವ್ಯಾಪಾರ ವಹಿವಾಟಿನಲ್ಲಿ ಮುನ್ನಡೆ ಸಾಧಿಸುವಿರಿ. ಸಂಚಾರದಲ್ಲಿ ಜಾಗ್ರತೆ ಅಗತ್ಯ.

ಮಕರ: ನಿಮ್ಮ ಆತ್ಮವಿಶ್ವಾಸದಿಂದ ಮುನ್ನಡೆದರೆ ಇಂದು ನೀವು ಅಂದುಕೊಳ್ಳುವ ಕೆಲಸಗಳು ನೆರವೇರಲಿವೆ. ಬಾಕಿ ಹಣ ಸಂದಾಯವಾಗುವುದು. ನಿಮ್ಮ ಬೆನ್ನ ಹಿಂದೆಯೇ ಹಿತ ಶತ್ರುಗಳಿರುತ್ತಾರೆ, ಎಚ್ಚರಿಕೆಯಿಂದಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕುಂಭ: ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದರೂ ನಿಮ್ಮ ಕಾರ್ಯಸಾಧನೆಯನ್ನು ಯಾರೂ ತಡೆಯಲಾಗದು. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ತೋರಿಬರಲಿದೆ.

ಮೀನ: ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವರು. ಯೋಗ್ಯ ವಯಸ್ಕರಿಗೆ ವಿವಾಹ ಪ್ರಯತ್ನಕ್ಕೆ ನಾನಾ ಅಡಚಣೆಗಳು ಕಂಡುಬಂದೀತು. ನಿರುದ್ಯೋಗಿಗಳು ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments