Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 18 ಆಗಸ್ಟ್ 2019 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ಪರಿಹಾರವಾಗಿದೆ ಎಂದುಕೊಂಡಿದ್ದ ಸಮಸ್ಯೆಗಳು ಮತ್ತೆ ಧುತ್ತನೆ ಎದುರಾಗಿ ತಲೆನೋವಿಗೆ ಕಾರಣವಾಗಲಿದೆ. ಕಾರ್ಯದೊತ್ತಡದಿಂದ ಚಿಂತೆ, ಬೇಸರ ಮೂಡುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.

ವೃಷಭ: ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಕ್ಕೆ ಬೀಳುವಿರಿ. ಇದರಿಂದ ಕಾರ್ಯ ವಿಳಂಬವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮಿಥುನ: ಸಾಂಸಾರಿಕವಾಗಿ ಸಂಬಂಧಗಳಲ್ಲಿ ಬಿರುಕು ಮೂಡಲಿವೆ. ಕ್ಷುಲ್ಲುಕ ಕಾರಣಕ್ಕೆ ಕಲಹಗಳು ಉಂಟಾಗಬಹುದು. ಮಾತಿನ ಮೇಲ ನಿಗಾ ಇರಲಿ. ಹಿರಿಯರ ಸೂಕ್ತ ಸಲಹೆಗಳಿಗೆ ಕಿವಿಗೊಡಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಿಸುವಿರಿ.

ಕರ್ಕಟಕ: ಮನೆಯಲ್ಲಿ ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಮುದವಾಗುವುದು. ಪ್ರೇಮಿಗಳ ಪಾಲಿಗೆ ಸಂತಸದ ದಿನವಾಗಲಿದೆ. ಖರ್ಚು ವೆಚ್ಚಗಳು ಹೆಚ್ಚಾಗಬಹುದು. ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಹಿನ್ನಡೆಯದೀತು. ದೇವರ ಪ್ರಾರ್ಥನೆ ಮಾಡಿ.

ಸಿಂಹ: ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ಹಾಗಿದ್ದರೂ ನೀವು ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಕನ್ಯಾ: ಅನವಶ್ಯಕವಾಗಿ ಚಿಂತೆ ಬೇಡ. ನಿರಾಶಾದಾಯಕ ಸುದ್ದಿ ಕೇಳಿಬಂದರೂ ತಾಳ್ಮೆ ಕಳೆದುಕೊಳ್ಳಬೇಡಿ. ಇತರರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಉದ್ಯೋಗ ಕ್ಷೇತ್ರದಲ್ಲಿ ಚಾಡಿ ಮಾತು ಕೇಳಿಬಂದೀತು. ಆದರೆ ನಿಮ್ಮ ಮುನ್ನಡೆಯನ್ನು ಯಾರೂ ತಡೆಯಲಾಗದು.

ತುಲಾ: ವೃತ್ತಿರಂಗದಲ್ಲಿ ಅನವಶ್ಯಕವಾಗಿ ಗೊಂದಲದ ಸ್ಥಿತಿ ನಿರ್ಮಾಣವಾಗಲಿದೆ. ಹಿತ ಶತ್ರುಗಳ ಬಗ್ಗೆ ಎಚ್ಚರವಾಗಿರಿ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಗಮನಕೊಡುವುದು ಉತ್ತಮ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ವೃಶ್ಚಿಕ: ಹಿರಿಯರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಪ್ರೀತಿ ಪಾತ್ರರ ಮಾತಿಗೆ ಬೆಲೆ ಕೊಡಬೇಕಾಗುತ್ತದೆ. ಕಿರು ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ಧನು: ನೀವು ಅತಿಯಾಗಿ ನಂಬಿದವರಿಂದಲೇ ವಂಚನೆಗೊಳಗಾಗುವಿರಿ. ಇದರಿಂದ ಮನಸ್ಸಿಗೆ ಬೇಸರವಾಗಬಹುದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಕಾರ್ಯನಿಮಿತ್ತ ಹೊಸ ಜನರ ಭೇಟಿ ಸಾಧ‍್ಯತೆಯಿದೆ. ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆಯಿರಲಿ.

ಮಕರ: ಯಾಕೋ ಎಷ್ಟೇ ದುಡಿದರೂ ಅಷ್ಟು ಫಲ ಕೈಗೆ ಬರುತ್ತಿಲ್ಲ ಎಂಬ ಭಾವನೆ ಬರಲಿದೆ. ನಿರ್ಧಾರ ತೆಗೆದುಕೊಳ್ಳಲು ಸೋಲುವಿರಿ. ಹಿರಿಯರ ಸಲಹೆ ಪಡೆಯಿರಿ. ಉದ್ಯೋಗಿಗಳಿಗೆ ವೃತ್ತಿ ಬದಲಾವಣೆ ಸಾಧ್ಯತೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕುಂಭ: ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಲಿದೆ. ನಿಮ್ಮ ಕೆಲವೊಂದು ನಿರ್ಧಾರಗಳು ಸಂಗಾತಿಯ ಅಸಹನೆಗೆ ಕಾರಣವಾಗಲಿದೆ. ಯಾರೊಂದಗೂ ಸಂಘರ್ಷಕ್ಕೆ ಇಳಿಯದಂತೆ ಎಚ್ಚರವಹಿಸಿ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗುವಿರಿ.  

ಮೀನ: ವತ್ತಿ ರಂಗದಲ್ಲಿ ದುಡುಕಿನ ವರ್ತನೆಯಿಂದ ಕಾರ್ಯ ಹಾಳುಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಯಾನ ಸಾಧ‍್ಯತೆ. ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ದಿನದಂತ್ಯಕ್ಕೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments