Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 19 ಆಗಸ್ಟ್ 2019 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಾಕಿ ಹಣ ಪಾವತಿಯಾಗಿ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಸಹೋದ್ಯೋಗಿಗಳ ಕಾರ್ಯವೈಖರಿ ಮನಸ್ಸಿಗೆ ಅಸಹನೆ ತರಿಸಲಿದೆ. ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆಯಿರಲಿ.

ವೃಷಭ: ಅವಿವಾಹಿತರಿಗೆ ಸೂಕ್ತ ವಿವಾಹ ಸಂಬಂಧಗಳು ಕೂಡಿಬರಲಿವೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಪ್ರಾಪ್ತಿಯಾಗುವುದು. ವ್ಯಾಪಾರಿಗಳಿಗೆ ಧನಲಾಭವಾಗಲಿದೆ.

ಮಿಥುನ: ಹಣಕಾಸಿನ ಮುಗ್ಗಟ್ಟು ತೋರಿಬರಲಿದೆ. ಹಾಗಿದ್ದರೂ ಸೂಕ್ತ ಸಂದರ್ಭದಲ್ಲಿ ಮಿತ್ರರಿಂದ ಸಹಾಯ ಒದಗಿಬರುವುದು. ಕೋಪದ ಕೈಗೆ ಬುದ್ಧಿ ಕೊಡಲು ಹೋದರೆ ಅನಾಹುತವಾದೀತು. ಸಾಂಸಾರಿಕವಾಗಿ ಪತ್ನಿ, ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ.

ಕರ್ಕಟಕ: ಪ್ರೀತಿ ಪಾತ್ರರೊಂದಿಗೆ ಸುಮಧುರ ಸಮಯ ಕಳೆಯುವಿರಿ. ಹೊಸ ವಸ್ತ್ರಾಭರಣ ಖರೀದಿ ಯೋಗವಿದೆ. ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆಯಿರಲಿ. ವಾಹನ ಖರೀದಿದಾರರಿಗೆ ಸುದಿನ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ದಿನದಂತ್ಯಕ್ಕೆ ಶುಭದಿನ.

ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ನಿಧಾನವಾಗಿ ಅಭಿವೃದ್ಧಿ ಅನುಭವಕ್ಕೆ ಬರುವುದು. ಆದರೆ ವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ. ಅಪರಿಚಿತರೊಂದಿಗೆ ಸ್ನೇಹ ಸಂಬಂಧ ಮಾಡುವ ಮೊದಲು ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಬಂಧು ಮಿತ್ರರೊಂದಿಗೆ ಅನಗತ್ಯ ವಾದ ವಿವಾದ ಮಾಡಿಕೊಳ್ಳುವಿರಿ. ಇದರಿಂದ ಮನಸ್ಸಿಗೆ ಬೇಸರವಾಗುವುದು. ಸಂಗಾತಿಯ ಅವಗಣನೆಗೆ ಗುರಿಯಾಗುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗುವುದು. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವಾಗಲಿದೆ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಅಧಿಕ ಲಾಭ ಗಳಿಸುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯವಿದೆ. ನೂತನ ದಂಪತಿಗಳು ಸುಮಧುರ ಕ್ಷಣ ಕಳೆಯುವರು. ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

ವೃಶ್ಚಿಕ: ಷೇರು ವ್ಯವಹಾರದಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ. ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಾಗ ಕಳ್ಳತನದ ಭೀತಿಯಿದೆ. ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲ ಸಿಗುವುದು.

ಧನು: ಆರೋಗ್ಯದಲ್ಲಿ ಏರುಪೇರಾಗುವುದು. ದೇಹಾಯಾಸದಿಂದ ಕಾರ್ಯ ಕ್ಷೇತ್ರದಲ್ಲಿ ಉದಾಸೀನ ಪ್ರವೃತ್ತಿ ಕಂಡುಬರುವುದು. ಕೈಗೊಂಡ ಕಾರ್ಯಗಳಲ್ಲಿ ವಿಘ್ನಗಳು ಎದುರಾದೀತು. ಆದಾಯಕ್ಕಿಂತ ಖರ್ಚು ಹೆಚ್ಚಾಗುವುದು. ತಾಳ್ಮೆ ಅಗತ್ಯ. ದಿನದಂತ್ಯಕ್ಕೆ ನೆಮ್ಮದಿ.

ಮಕರ: ಸಾಂಸಾರಿಕವಾಗಿ ನೀವು ಕೈಗೊಳ್ಳುವ ನಿರ್ಧಾರಗಳಿಗೆ ಕುಟುಂಬ ಸದಸ್ಯರ ಸಹಮತ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚಕಗಳಿವೆ. ವ್ಯವಹಾರಗಳಲ್ಲಿ ಜಯ ಪ್ರಾಪ್ತಿಯಾಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಕುಂಭ: ವ್ಯಾಪಾರಿಗಳಿಗೆ ಉತ್ತಮ ಧನ ಲಾಭವಾಗಲಿದೆ. ಆರ್ಥಿಕವಾಗಿ ಹಣಕಾಸಿಗೆ ಏನೂ ತೊಂದರೆಯಿರದು. ಆದರೆ ಮಹಿಳೆಯರಿಂದ  ಅಪವಾದದ ಭೀತಿಯಿದೆ. ದುರ್ಜನರ ಸಂಗದಿಂದ ಮಾನ ಹಾನಿಯಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮೀನ: ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ನಿಮ್ಮದಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಂಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳಿಂದ ನೆರವು ಸಿಗಲಿದೆ. ಕೃಷಿ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯಿರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments