Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 21 ಆಗಸ್ಟ್ 2019 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಡ್ಡೆಯ ಧೋರಣೆ ನಿಮ್ಮ ಕೋಪಕ್ಕೆ ಕಾರಣವಾಗಲಿದೆ. ಕೆಲಸದಲ್ಲಿ ಆಸಕ್ತಿ ಕಳೆದುಕೊಳ್ಳುವಿರಿ. ಮಾನಸಿಕವಾಗಿ ಗೊಂದಲ ಕಾಡಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಷಭ: ವೃತ್ತಿರಂಗದಲ್ಲಿ ಹೊಸ ಜನರ ಭೇಟಿ, ಹೊಸ ಮಿತ್ರರ ಸಹವಾಸ ಮಾಡುತ್ತೀರಿ. ವಿದ್ಯಾರ್ಥಿಗಳಿಗೆ ಅಭ‍್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಉನ್ನತ ಹುದ್ದೆಯಲ್ಲಿರುವವರಿಗೆ ಮುಂಬಡ್ತಿ ಯೋಗವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಿಥುನ: ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ್ಯತೆಯಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಧನ ವ್ಯಯ ಮಾಡಬೇಕಾಗುತ್ತದೆ. ಆದರೆ ವೃತ್ತಿ ಬದಲಾವಣೆಗೆ ಮನಸ್ಸಾದರೂ ಇದು ಸರಿಯಾದ ಸಮಯವಲ್ಲ. ಪತ್ನಿಯೊಡನೆ ಕಲಹವಾಗಬಹುದು.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಿದ್ದರೂ ಅಂತಿಮ ಜಯ ನಿಮ್ಮದಾಗುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಸಂಗಾತಿಗಾಗಿ ಚಿನ್ನಾಭರಣ ಖರೀದಿ ಮಾಡುವಿರಿ. ಕಂಕಣ ಬಲ ಕೂಡಿಬರಲಿದೆ.

ಸಿಂಹ: ದುರ್ಜನರ ಸಂಗದಿಂದ ಕಾರ್ಯಹಾನಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ಕಡಿಮೆಯಾಗಬಹುದು. ವ್ಯಾಪಾರಿಗಳಿಗೆ ಕೊಂಚ ಹಿನ್ನಡೆಯಾಗಬಹುದು. ಕೃಷಿಕರಿಗೆ ಲಾಭವಾಗಲಿದೆ. ಮನೆಯಲ್ಲಿ ಶುಭ ಕಾರ್ಯಗಳು ನಿಮ್ಮಿಚ್ಛೆಯಂತೆ ನೆರವೇರಲಿದೆ.

ಕನ್ಯಾ: ಉನ್ನತ ಹುದ್ದೆಯಲ್ಲಿರುವವರು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಷ್ಟವುಂಟಾಗಬಹುದು. ತಾಳ್ಮೆ ಅಗತ್ಯ. ಬಂಧು ಮಿತ್ರರ ಸಮಾಗಮವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ತುಲಾ: ವಿದ್ಯಾರ್ಥಿಗಳು ನಿರೀಕ್ಷಿತ ಫಲ ಪಡೆಯುವರು. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ, ವೇತನ ಹೆಚ್ಚಳ ಸಂಭವವಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ ಸಮಯವಿದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ವೃಶ್ಚಿಕ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ನೀವು ಅಂದುಕೊಂಡ ಕಾರ್ಯಗಳನ್ನು ಹಂತ ಹಂತವಾಗಿ ನೆರವೇರಿಸುವಿರಿ. ಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಕಿರು ಸಂಚಾರ ಮಾಡಬೇಕಾಗಿಬರುತ್ತದೆ.

ಧನು: ಸಂಸಾರರ ಸುಖ ಅನುಭವಿಸಲಿದ್ದೀರಿ. ಸಂಗಾತಿಯ ಸಹಕಾರ ಸಿಗಲಿದೆ. ಆದರೆ ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗುವುದು. ಆರ್ಥಿಕವಾಗಿ ಕೊಂಚ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ಅಂದುಕೊಂಡ ಕಾರ್ಯಗಳು ನೆರವೇರಿ ಮನಸ್ಸಿಗೆ ನೆಮ್ಮದಿಯಾಗುವುದು. ಹಿತ ಶತ್ರುಗಳಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಸಿಗಬೇಕಾದ ಸ್ಥಾನ ಮಾನ ಕೈತಪ್ಪಬಹುದು. ಅನವಶ್ಯಕವಾಗಿ ವಾಗ್ವಾದಕ್ಕಿಳಿಯಬೇಡಿ. ತಾಳ್ಮೆಯಿಂದಿರಿ.

ಕುಂಭ: ವಿದ್ಯಾರ್ಥಿಗಳಿಗೆ ಆಲಸ್ಯತನದಿಂದಾಗಿ ಅಭ್ಯಾಸದಲ್ಲಿ ಕಡಿಮೆಯಾಗಬಹುದು. ಉದರ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಅಧಿಕ ಖರ್ಚು ವೆಚ್ಚಗಳಿಂದ ಚಿಂತೆಯಾಗುವುದು. ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿ ವಹಿಸಬೇಕಾಗುತ್ತದೆ.

ಮೀನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ನೂತನ ಕೆಲಸ ಕಾರ್ಯಗಳು ಪೂರ್ತಿಯಾಗಲಿವೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ