Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 26 ಆಗಸ್ಟ್ 2019 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ದೂರ ಪ್ರಯಾಣದಿಂದ ದೇಹಾಯಾಸವಾಗುವುದು. ದೈಹಿಕ ಆರೋಗ್ಯದ ಮೇಲೆ ಗಮನವಿಡುವುದು ಮುಖ್ಯ. ಸಂಗಾತಿಯ ಸಹಕಾರ ಸಿಗಲಿದೆ. ಅಂದುಕೊಂಡ ಕೆಲಸ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಬರಲಿದೆ.

ವೃಷಭ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗುವುದು. ನಿರುದ್ಯೋಗಿಗಳು ಖಾಯಂ ಉದ್ಯೋಗ ಪಡೆಯುವರು. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನದಿಂದ ಮನಸ್ಸಿಗೆ ಖುಷಿಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ನಿಮ್ಮ ಕೆಲವೊಂದು ನಿರ್ಧಾರಗಳು ಬಂಧುಗಳಿಗೆ ಪಥ್ಯವಾಗದೇ ಚಾಡಿ ಮಾತು ಕೇಳಿಬಂದೀತು. ಉದ್ಯೋಗ ಕ್ಷೇತ್ರದಲ್ಲಿ ಸಹೋಧ್ಯೋಗಿಗಳ ಸಹಕಾರ ಸಿಗುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸುವುರಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಮಾನಸಿಕ ಉದ್ವೇಗಕ್ಕೊಳಗಾಗಿ ನಿರ್ಧಾರ ಕೈಗೊಳ್ಳುವಾಗ ಎಡವುತ್ತೀರಿ. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕಾದ ದಿನವಿದು. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಸಿಂಹ: ಮಾನಸಿಕವಾಗಿ ಚಂಚಲ ಮನಸ್ಸು ನಿಮ್ಮದಾಗುವುದು. ಸಂಗಾತಿಯ ಮನೋಕಾಮನೆಗಳನ್ನು ಪೂರೈಸಬೇಕಾಗುತ್ತದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕನ್ಯಾ: ನಿಮ್ಮ ಕೆಲವೊಂದು ಮಾತುಗಳಿಗೆ ನಿಷ್ಠುರವಾಗುವಿರಿ. ಪಾಲು ಬಂಡವಾಳ ಹೂಡಿಕೆಯಲ್ಲಿ ಸಮಸ್ಯೆಗಳು ಎದುರಾಗಲಿವೆ. ಅವಿವಾಹಿತರಿಗೆ ಅನಿರೀಕ್ಷಿತ ರೀತಿಯಲ್ಲಿ ಮನಸ್ಸಿಗೆ ಒಪ್ಪುವ ಸಂಬಂಧಗಳು ಕೂಡಿಬರಲಿವೆ. ವಿದ್ಯಾರ್ಥಿಗಳಿಗೆ ಶುಭ ದಿನ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಏರುಪೇರಾಗಬಹುದು. ಹಾಗಿದ್ದರೂ ಆರ್ಥಿಕವಾಗಿ ಸಮಾಧಾನಕರ ದಿನವಾಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದನ್ನು ಪಂಚಾಮೃತ ಎಂದು ಸ್ವೀಕರಿಸಬೇಕಾಗುತ್ತದೆ. ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಕೆಲವೊಂದು ವಿಘ್ನಗಳು ಎದುರಾಗುವುದರಿಂದ ಅಂದುಕೊಂಡ ಕೆಲಸ ನೆರವೇರಿಸಲಾಗದು. ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು.

ಧನು: ನಿರೀಕ್ಷಿತ ರೀತಿಯಲ್ಲಿ ಕಾರ್ಯಗಳು ಕೈಗೂಡಲಿವೆ. ಆರ್ಥಿಕವಾಗಿ ಪ್ರಗತಿ ಕಂಡುಬರುವುದು. ಮನೆಗೆ ನೆಂಟರ ಆಗಮನವಾಗಲಿದೆ. ದೇಹಾರೋಗ್ಯ ಹದತಪ್ಪಬಹುದು, ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಉದ್ದೇಶಿತ ಕೆಲಸ ಕಾರ್ಯಗಳು ಪರಿಪೂರ್ಣವಾಗಿ ನಡೆಯಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗುವುದು.

ಕುಂಭ: ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ವಂಚನೆಗೊಳಗಾದಂತೆ ಎಚ್ಚರಿಕೆ ವಹಿಸಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗೆ ಮಧುಚಂದ್ರ ಭಾಗ್ಯ. ಸಂಸಾರ ಸುಖಕ್ಕೆ ಕೊರತೆಯಿರದು. ಆದರೆ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ತಾತ್ಕಾಲಿಕ ವೃತ್ತಿಯವರಿಗೆ ಉದ್ಯೋಗ ಖಾಯಂ ಆಗುವ ಯೋಗವಿದೆ. ಕೋರ್ಟು ಕಚೇರಿ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವುದು. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾದೀತು. ತಾಳ್ಮೆ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಆಶ್ಲೇಷ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?