Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 26 ಆಗಸ್ಟ್ 2019 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ದೂರ ಪ್ರಯಾಣದಿಂದ ದೇಹಾಯಾಸವಾಗುವುದು. ದೈಹಿಕ ಆರೋಗ್ಯದ ಮೇಲೆ ಗಮನವಿಡುವುದು ಮುಖ್ಯ. ಸಂಗಾತಿಯ ಸಹಕಾರ ಸಿಗಲಿದೆ. ಅಂದುಕೊಂಡ ಕೆಲಸ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಬರಲಿದೆ.

ವೃಷಭ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗುವುದು. ನಿರುದ್ಯೋಗಿಗಳು ಖಾಯಂ ಉದ್ಯೋಗ ಪಡೆಯುವರು. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನದಿಂದ ಮನಸ್ಸಿಗೆ ಖುಷಿಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ನಿಮ್ಮ ಕೆಲವೊಂದು ನಿರ್ಧಾರಗಳು ಬಂಧುಗಳಿಗೆ ಪಥ್ಯವಾಗದೇ ಚಾಡಿ ಮಾತು ಕೇಳಿಬಂದೀತು. ಉದ್ಯೋಗ ಕ್ಷೇತ್ರದಲ್ಲಿ ಸಹೋಧ್ಯೋಗಿಗಳ ಸಹಕಾರ ಸಿಗುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸುವುರಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಮಾನಸಿಕ ಉದ್ವೇಗಕ್ಕೊಳಗಾಗಿ ನಿರ್ಧಾರ ಕೈಗೊಳ್ಳುವಾಗ ಎಡವುತ್ತೀರಿ. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕಾದ ದಿನವಿದು. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಸಿಂಹ: ಮಾನಸಿಕವಾಗಿ ಚಂಚಲ ಮನಸ್ಸು ನಿಮ್ಮದಾಗುವುದು. ಸಂಗಾತಿಯ ಮನೋಕಾಮನೆಗಳನ್ನು ಪೂರೈಸಬೇಕಾಗುತ್ತದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕನ್ಯಾ: ನಿಮ್ಮ ಕೆಲವೊಂದು ಮಾತುಗಳಿಗೆ ನಿಷ್ಠುರವಾಗುವಿರಿ. ಪಾಲು ಬಂಡವಾಳ ಹೂಡಿಕೆಯಲ್ಲಿ ಸಮಸ್ಯೆಗಳು ಎದುರಾಗಲಿವೆ. ಅವಿವಾಹಿತರಿಗೆ ಅನಿರೀಕ್ಷಿತ ರೀತಿಯಲ್ಲಿ ಮನಸ್ಸಿಗೆ ಒಪ್ಪುವ ಸಂಬಂಧಗಳು ಕೂಡಿಬರಲಿವೆ. ವಿದ್ಯಾರ್ಥಿಗಳಿಗೆ ಶುಭ ದಿನ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಏರುಪೇರಾಗಬಹುದು. ಹಾಗಿದ್ದರೂ ಆರ್ಥಿಕವಾಗಿ ಸಮಾಧಾನಕರ ದಿನವಾಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದನ್ನು ಪಂಚಾಮೃತ ಎಂದು ಸ್ವೀಕರಿಸಬೇಕಾಗುತ್ತದೆ. ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಕೆಲವೊಂದು ವಿಘ್ನಗಳು ಎದುರಾಗುವುದರಿಂದ ಅಂದುಕೊಂಡ ಕೆಲಸ ನೆರವೇರಿಸಲಾಗದು. ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು.

ಧನು: ನಿರೀಕ್ಷಿತ ರೀತಿಯಲ್ಲಿ ಕಾರ್ಯಗಳು ಕೈಗೂಡಲಿವೆ. ಆರ್ಥಿಕವಾಗಿ ಪ್ರಗತಿ ಕಂಡುಬರುವುದು. ಮನೆಗೆ ನೆಂಟರ ಆಗಮನವಾಗಲಿದೆ. ದೇಹಾರೋಗ್ಯ ಹದತಪ್ಪಬಹುದು, ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಉದ್ದೇಶಿತ ಕೆಲಸ ಕಾರ್ಯಗಳು ಪರಿಪೂರ್ಣವಾಗಿ ನಡೆಯಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗುವುದು.

ಕುಂಭ: ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ವಂಚನೆಗೊಳಗಾದಂತೆ ಎಚ್ಚರಿಕೆ ವಹಿಸಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗೆ ಮಧುಚಂದ್ರ ಭಾಗ್ಯ. ಸಂಸಾರ ಸುಖಕ್ಕೆ ಕೊರತೆಯಿರದು. ಆದರೆ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ತಾತ್ಕಾಲಿಕ ವೃತ್ತಿಯವರಿಗೆ ಉದ್ಯೋಗ ಖಾಯಂ ಆಗುವ ಯೋಗವಿದೆ. ಕೋರ್ಟು ಕಚೇರಿ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವುದು. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾದೀತು. ತಾಳ್ಮೆ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments